“ಕಣಿ ಕಾಣುವ ಹಬ್ಬ’ ಬಿಸು ಸಂಭ್ರಮದ ಆಚರಣೆ


Team Udayavani, Apr 16, 2018, 6:50 AM IST

15ksde2.jpg

ಕಾಸರಗೋಡು: ಸುಖ, ನೆಮ್ಮದಿ, ಸಂವೃದ್ಧಿಯ ಸಂಕೇತವಾದ ಸೌರಯುಗಾದಿ “ಕಣಿ ಕಾಣುವ ಹಬ್ಬ’ ಬಿಸುವನ್ನು ರವಿವಾರ ಸಂಭ್ರಮ, ಸಡಗರ, ಭಕ್ತಿ, ಶ್ರದ್ಧೆಯಿಂದ ನಾಡಿನಾದ್ಯಂತ ಆಚರಿಸಲಾಯಿತು. ತುಳುನಾಡಿನಲ್ಲಿ ಬಿಸು ಎಂದು ಕರೆಸಿಕೊಳ್ಳುವ ಹಬ್ಬ ಕೇರಳದಲ್ಲಿ ವಿಷು ಎಂಬ ಹೆಸರಿನಲ್ಲಿ ಕೊಂಡಾಡಲಾಯಿತು.

ವಿಷು ಅಥವಾ ಬಿಸು ಹಬ್ಬದ ಅಂಗ ವಾಗಿ ನಾಡಿನ ಪ್ರಧಾನ ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೇ ಭಾರೀ ಸಂಖ್ಯೆಯಲ್ಲಿ ಭಕ್ತರು ನೆರೆದು ವಿಶೇಷ ಪೂಜೆ, ಪುನಸ್ಕಾರ ಸಲ್ಲಿಸಿದರು. ಮುಂಜಾನೆ ಎದ್ದು ಮನೆಗಳಲ್ಲಿ ಸಿದ್ಧಪಡಿಸಿದ ಕಣಿ ಕಂಡು ಆ ಬಳಿಕ ಹತ್ತಿರದ ದೇವಸ್ಥಾನ, ದೈವಸ್ಥಾನ, ಮಠ, ಮಂದಿರಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ದೇವಸ್ಥಾನಗಳಲ್ಲೂ ಕಣಿ ಸಿದ್ಧಪಡಿಸಲಾಗಿತ್ತು.
 
ಕುಂಬಳೆ ಸೀಮೆಯ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ದೇವರ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ನೆರೆದಿದ್ದರು. ವಿವಿಧ ದೇವಸ್ಥಾನಗಳಲ್ಲಿ ಕಣಿ ಸಿದ್ಧಪಡಿಸಿದ್ದು ನೋಡುಗರಿಗೆ ವಿಶೇಷವಾದ ಅನುಭವವನ್ನುಂಟು ಮಾಡಿತು. ನಾಡಿನಾದ್ಯಂತ ದೇವಸ್ಥಾನ, ದೈವಸ್ಥಾನ, ಮಂದಿರಗಳಲ್ಲೂ ಭಾರೀ ಸಂಖ್ಯೆಯಲ್ಲಿ ಭಕ್ತರು ನೆರೆದು ವಿಶೇಷ ಪೂಜೆ ಪುನಸ್ಕಾರ ನಡೆಸಿದರು.

ಹೊಸ ಬಟ್ಟೆ ತೊಟ್ಟು ಕಣಿಕಂಡು ಸಂತೋಷದಿಂದ ವಿಷು ಆಚರಿಸಿ ಸಂಬಂಧಿಕರಿಗೆ, ಗೆಳೆಯರಿಗೆ, ಆತ್ಮೀಯರಿಗೆ ಪರಸ್ಪರ ಶುಭಾಶಯ ಹೇಳಿದರು. ಸಂಜೆಯ ಹೊತ್ತು ವಿಶ್ರಾಂತಿ ಪಡೆ ಯಲು ಸಮುದ್ರ ಕಿನಾರೆಗೆ ತೆರಳಿ ಸಮುದ್ರದಲೆಯ ಸವಿಯನ್ನು ಸವಿದರು.

ಕಣಿಕಾಣುವುದು  
ವರುಷದ ಆರಂಭದಲ್ಲಿ ಮೊದಲ ನೋಟಕ್ಕೆ ಆರಾಧ್ಯ ದೇವರನ್ನು ನೋಡುವ ಕ್ರಮವನ್ನು ಕಣಿ ಕಾಣುವುದು ಎನ್ನಲಾಗುತ್ತದೆ. ಕಣಿ ಎಂದರೆ ಶ್ರೇಯಸ್ಸು, ಶಕುನ, ಭವಿಷ್ಯ ಎಂಬ ಅರ್ಥಗಳೂ ಇವೆ. ಮನೆಯನ್ನು ಸಿಂಗರಿಸಿ ಹಿಂದಿನ ದಿನ ರಾತ್ರಿಯೇ ದೇವರ ವಿಗ್ರಹದ ಜತೆಗೆ ಕಣಿಯ ಸಾಮಗ್ರಿಗಳನ್ನು ಇರಿಸಿ ನವ ಧಾನ್ಯಗಳು, ಬಟ್ಟೆಬರೆ, ಬಂಗಾರದ ಆಭರಣ, ಫಲವಸ್ತುಗಳು ಇತ್ಯಾದಿ ಗಳೊಂದಿಗೆ ಸಾಂಪ್ರದಾಯಿಕ ಶೈಲಿಯಲ್ಲಿ ಪಾತ್ರೆಯಲ್ಲಿ ಬೆಳ್ತಿಗೆ ಅಕ್ಕಿ, ತೆಂಗಿನಕಾಯಿ ಮತ್ತು ಕನ್ನಡಿ ಇರಿಸಿ ಕಣಿಯನ್ನು ಸಿದ್ಧಪಡಿಸಲಾಗುತ್ತದೆ. ಎಲ್ಲರೂ ಬೆಳಗಿನ ಜಾವವೇ ಎದ್ದು, ಮಿಂದು ಹೊಸಬಟ್ಟೆ ಧರಿಸಿ ಗುರುಹಿರಿಯರಿಗೆ ವಂದಿಸಿ ಅನಂತರ ಕಣಿ ದರ್ಶನ ಪಡೆದು ಕೃತಾರ್ಥರಾದರು.

ವಿಷು ಕಣಿಯ ವಿಶೇಷ ಬಲಿ 
ಕುಂಬಳೆ ಸೀಮೆಯ ಅತಿ ಪುರಾತನವೂ, ಪ್ರಸಿದ್ಧವೂ ಆದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ  ಎ. 15ರಂದು ಮುಂಜಾನೆ ದೀಪೋತ್ಸವದ ಬಳಿಕ ವಿಷು ಕಣಿಯ ವಿಶೇಷ ಬಲಿ ನಡೆಯಿತು. ವಿಶೇಷ ಬಲಿ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಕ್ತರು ಭಾಗವಹಿಸಿದರು. ಬಲಿ ಉತ್ಸವದ ಬಳಿಕ ರಾಜಾಂಗಣ ಪ್ರಸಾದ ನಡೆಯಿತು.

ಸಂವೃದ್ಧಿ ಸಂಕಲ್ಪ ದಿನ
ವಿಷು ಹೊಸ ವರುಷದ ಆರಂಭ ಸಂವೃದ್ಧಿ ಸಂಕಲ್ಪದ ದಿನ. ಯಾವುದೇ ಕಾರ್ಯದ  ಆರಂಭಕ್ಕೆ,ಕೃಷಿ ಕಾರ್ಯದಲ್ಲಿ   ತೊಡಗಿಸಿಕೊಳ್ಳಲು ಈ ದಿನ ಶುಭ ದಿನ.ವರ್ಷವಿಡೀ  ಸುಖ,ಸಮೃದ್ಧಿ  ನೆಲೆಸಲಿ ಎಂಬ ಆಶಯದೊಂದಿಗೆ ಐಶ್ವರ್ಯದ ಸಂಕೇತವಾಗಿ ತುಳುನಾಡ ಜನರು ಮತ್ತು ಕೇರಳಿಯರು ವಿಷು ಹಬ್ಬವನ್ನು ಆಚರಿಸಿದರು. ಇದೇ ಹಬ್ಬ ತುಳು ನಾಡಿನಲ್ಲಿ “ಬಿಸು ಪರ್ಬ’ ಎಂದೇ ಖ್ಯಾತಿ ಪಡೆದಿದೆ.

ಚಿತ್ರ : ಶ್ರೀಕಾಂತ್‌ ಕಾಸರಗೋಡು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.