Bangrakuloor-ದಂಬೆಲ್‌ ನಡುವಿನ 1 ಕಿ.ಮೀ. ರಸ್ತೆ ಅವ್ಯವಸ್ಥೆ

ಈ ರಸ್ತೆ 42 ವರ್ಷಗಳಿಂದ ಡಾಮರೇ ಕಂಡಿಲ್ಲ !

Team Udayavani, Sep 17, 2024, 1:50 PM IST

Bangrakuloor-ದಂಬೆಲ್‌ ನಡುವಿನ 1 ಕಿ.ಮೀ. ರಸ್ತೆ ಅವ್ಯವಸ್ಥೆ

ಕೂಳೂರು: ಮಂಗಳೂರು ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರಿನಿಂದ ದಂಬೆಲ್‌ಗೆ ಸಂಪರ್ಕಿಸುವ ರಸ್ತೆಯೊಂದು ಕಳೆದು 42 ವರ್ಷಕ್ಕೂ ಮೊದಲೇ ನಿರ್ಮಿಸಿದ್ದರೂ ಇಲ್ಲಿಯ ತನಕ ಡಾಮರು ಕಂಡಿಲ್ಲ. ಸುಮಾರು 1 ಕಿ.ಮೀ. ರಸ್ತೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ.

ಈ ರಸ್ತೆ ಸುಮಾರು ಎರಡೂವರೆ ಕಿ.ಮೀ. ಇದ್ದು ಸರಿ ಸುಮಾರು ಒಂದೂವರೆ ಕಿ.ಮೀ. ರಸ್ತೆಗೆ ಕಾಂಕ್ರೀಟ್‌ ಅಳವಡಿಸಲಾಗಿದೆ. ಆದರೆ ನಾಲ್ಕು ವರ್ಷಗಳಿಂದ ಕಾಮಗಾರಿ ಮುಂದಕ್ಕೆ ನಡೆದಿಲ್ಲ. ಪರಿಣಾಮ ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದೆ.

ರಸ್ತೆ ಅವ್ಯವಸ್ಥೆಯ ಕುರಿತಂತ ಹಲವು ಬಾರಿ ಪಾಲಿಕೆಗೆ ಮನವಿ ನೀಡಲಾಗಿದ್ದು ಪ್ರಯೋಜನ ವಾಗಿಲ್ಲ. 50ಕ್ಕೂ ಹೆಚ್ಚು ಮನೆಗಳು ಈ ರಸ್ತೆಯನ್ನು ಅವಲಂಬಿಸಿದ್ದು ಸಂಚಾರಕ್ಕೆ ಪರದಾಡುವಂತಾಗಿದೆ. ಈ ರಸ್ತೆಗೆ ಯಾವುದೇ ಅನುದಾನ ಸಿಗದೆ ಅಭಿವದ್ಧಿಯಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ವಿದ್ಯಾರ್ಥಿಗಳು, ಪಾದಚಾರಿಗಳ ಪರದಾಟ
ರಸ್ತೆ ಕೆಸರುಮಯವಾಗಿರುವ ಕಾರಣ ಪಾದಚಾರಿಗಳಿಗೆ ನಡೆದುಕೊಂಡು ತೆರಳಲು ಅಸಾಧ್ಯವಾಗಿದೆ. ರಸ್ತೆ ತುಂಬಾ ಕೆಸರಿನಿಂದಾಗಿ ಪರದಾಡುವಂತಾಗಿದೆ. ಮಳೆ ಬಂದರೆ ಇಲ್ಲಿನ ಜನರ ಕಷ್ಟ ಕೇಳುವಂತಿಲ್ಲ. ಹಲವು ವಿದ್ಯಾರ್ಥಿಗಳು ಕೂಡ ಈ ರಸ್ತೆ ಅವಲಂಬಿಸಿದ್ದು, ಕಷ್ಟಪಡುತ್ತಿದ್ದಾರೆ.

ಚುನಾವಣೆ ನೆಪ ನೀಡಿದ ಸಚಿವರು
ರಸ್ತೆ ಅಭಿವೃದ್ಧಿಗಾಗಿ ಸ್ಥಳೀಯ ನಿವಾಸಿಗಳು ವಿವಿಧ ಇಲಾಖೆಗೆ ಅಲೆದಾಡಿದ್ದಾರೆ. ಶಾಸಕರಿಗೂ ಮನವಿ ಮಾಡಿಕೊಂಡಿದ್ದಾರೆ. ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ‌ರನ್ನು ಭೇಟಿಯಾಗಿ ರಸ್ತೆ ದುರಸ್ತಿಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೆ ಯಾವುದೇ ಕ್ರಮವಾಗಿಲ್ಲ ಎಂಬುವುದು ಸ್ಥಳೀಯರ ಅಳಲು.

ಸ್ಥಳೀಯರಿಂದ ರಸ್ತೆ ದುರಸ್ತಿ
ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ ರಸ್ತೆಯನ್ನು ಸ್ಥಳೀಯ ನಿವಾಸಿಗಳು ದುರಸ್ತಿ ನಡೆಸಿದ್ದಾರೆ. ಆದರೆ, ಘನವಾಹನ ಸಂಚರಿಸಿ ಮತ್ತೆ ಕೆಸರುಮಯವಾಗಿದೆ.

ರಸ್ತೆ ಅಭಿವೃದ್ಧಿಗೆ ಕೋಟ್ಯಂತರ ಅನುದಾನ ಅಗತ್ಯ. ಪಾಲಿಕೆಯ ಅನುದಾನ ಸಾಲದು. ನದಿ ಪಕ್ಕದ ರಸ್ತೆಯಾಗಿರುವ ಕಾರಣ ಪ್ರವಾಸೋದ್ಯಮ ಇಲಾಖೆ ಸೇರಿದಂತೆ ರಾಜ್ಯ ಸರಕಾರದ ಅನುದಾನಕ್ಕಾಗಿ ಹಲವು ಬಾರಿ ಶಾಸಕರ ಮೂಲಕ ಸರಕಾರಕ್ಕೆ ಮನವಿ ನೀಡಿದ್ದೇವೆ. ಆದರೆ, ಸರಕಾರ ಅನುದಾನ ಬಿಡುಗಡೆ ಮಾಡಿಲ್ಲ. ಬೋಟ್‌ಗಳ ನಿಲುಗಡೆಯಿಂದ ಘನ ವಾಹನ ಸಂಚಾರದಿಂದ ರಸ್ತೆ ಹಾಳಾಗಿದೆ.
-ಕಿರಣ್‌ ಕುಮಾರ್‌, ಪಾಲಿಕೆ ಸದಸ್ಯರು

40 ವರ್ಷಗಳಿಂದ ಈ ಭಾಗದಲ್ಲಿ ನೆಲೆಸಿದ್ದೇನೆ. ಇಲ್ಲಿಯ ವರೆಗೆ ಒಮ್ಮೆಯೂ ರಸ್ತೆಗೆ ಡಾಮರು ಅಳವಡಿಸಿಲ್ಲ. ಪಾಲಿಕೆಗೆ ಜನಪ್ರತಿನಿಧಿಗಳಿಗೆ ಮನವಿ ನೀಡಿದ್ದೇ ಬಂತು.
-ರೋಹನ್‌ ಡಿ’ಸೋಜಾ, ಸ್ಥಳೀಯ ನಿವಾಸಿ

-ಸಂತೋಷ್‌ ಮೊಂತೇರೊ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.