Bangrakuloor-ದಂಬೆಲ್ ನಡುವಿನ 1 ಕಿ.ಮೀ. ರಸ್ತೆ ಅವ್ಯವಸ್ಥೆ
ಈ ರಸ್ತೆ 42 ವರ್ಷಗಳಿಂದ ಡಾಮರೇ ಕಂಡಿಲ್ಲ !
Team Udayavani, Sep 17, 2024, 1:50 PM IST
ಕೂಳೂರು: ಮಂಗಳೂರು ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರಿನಿಂದ ದಂಬೆಲ್ಗೆ ಸಂಪರ್ಕಿಸುವ ರಸ್ತೆಯೊಂದು ಕಳೆದು 42 ವರ್ಷಕ್ಕೂ ಮೊದಲೇ ನಿರ್ಮಿಸಿದ್ದರೂ ಇಲ್ಲಿಯ ತನಕ ಡಾಮರು ಕಂಡಿಲ್ಲ. ಸುಮಾರು 1 ಕಿ.ಮೀ. ರಸ್ತೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ.
ಈ ರಸ್ತೆ ಸುಮಾರು ಎರಡೂವರೆ ಕಿ.ಮೀ. ಇದ್ದು ಸರಿ ಸುಮಾರು ಒಂದೂವರೆ ಕಿ.ಮೀ. ರಸ್ತೆಗೆ ಕಾಂಕ್ರೀಟ್ ಅಳವಡಿಸಲಾಗಿದೆ. ಆದರೆ ನಾಲ್ಕು ವರ್ಷಗಳಿಂದ ಕಾಮಗಾರಿ ಮುಂದಕ್ಕೆ ನಡೆದಿಲ್ಲ. ಪರಿಣಾಮ ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದೆ.
ರಸ್ತೆ ಅವ್ಯವಸ್ಥೆಯ ಕುರಿತಂತ ಹಲವು ಬಾರಿ ಪಾಲಿಕೆಗೆ ಮನವಿ ನೀಡಲಾಗಿದ್ದು ಪ್ರಯೋಜನ ವಾಗಿಲ್ಲ. 50ಕ್ಕೂ ಹೆಚ್ಚು ಮನೆಗಳು ಈ ರಸ್ತೆಯನ್ನು ಅವಲಂಬಿಸಿದ್ದು ಸಂಚಾರಕ್ಕೆ ಪರದಾಡುವಂತಾಗಿದೆ. ಈ ರಸ್ತೆಗೆ ಯಾವುದೇ ಅನುದಾನ ಸಿಗದೆ ಅಭಿವದ್ಧಿಯಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ವಿದ್ಯಾರ್ಥಿಗಳು, ಪಾದಚಾರಿಗಳ ಪರದಾಟ
ರಸ್ತೆ ಕೆಸರುಮಯವಾಗಿರುವ ಕಾರಣ ಪಾದಚಾರಿಗಳಿಗೆ ನಡೆದುಕೊಂಡು ತೆರಳಲು ಅಸಾಧ್ಯವಾಗಿದೆ. ರಸ್ತೆ ತುಂಬಾ ಕೆಸರಿನಿಂದಾಗಿ ಪರದಾಡುವಂತಾಗಿದೆ. ಮಳೆ ಬಂದರೆ ಇಲ್ಲಿನ ಜನರ ಕಷ್ಟ ಕೇಳುವಂತಿಲ್ಲ. ಹಲವು ವಿದ್ಯಾರ್ಥಿಗಳು ಕೂಡ ಈ ರಸ್ತೆ ಅವಲಂಬಿಸಿದ್ದು, ಕಷ್ಟಪಡುತ್ತಿದ್ದಾರೆ.
ಚುನಾವಣೆ ನೆಪ ನೀಡಿದ ಸಚಿವರು
ರಸ್ತೆ ಅಭಿವೃದ್ಧಿಗಾಗಿ ಸ್ಥಳೀಯ ನಿವಾಸಿಗಳು ವಿವಿಧ ಇಲಾಖೆಗೆ ಅಲೆದಾಡಿದ್ದಾರೆ. ಶಾಸಕರಿಗೂ ಮನವಿ ಮಾಡಿಕೊಂಡಿದ್ದಾರೆ. ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ರಸ್ತೆ ದುರಸ್ತಿಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೆ ಯಾವುದೇ ಕ್ರಮವಾಗಿಲ್ಲ ಎಂಬುವುದು ಸ್ಥಳೀಯರ ಅಳಲು.
ಸ್ಥಳೀಯರಿಂದ ರಸ್ತೆ ದುರಸ್ತಿ
ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ ರಸ್ತೆಯನ್ನು ಸ್ಥಳೀಯ ನಿವಾಸಿಗಳು ದುರಸ್ತಿ ನಡೆಸಿದ್ದಾರೆ. ಆದರೆ, ಘನವಾಹನ ಸಂಚರಿಸಿ ಮತ್ತೆ ಕೆಸರುಮಯವಾಗಿದೆ.
ರಸ್ತೆ ಅಭಿವೃದ್ಧಿಗೆ ಕೋಟ್ಯಂತರ ಅನುದಾನ ಅಗತ್ಯ. ಪಾಲಿಕೆಯ ಅನುದಾನ ಸಾಲದು. ನದಿ ಪಕ್ಕದ ರಸ್ತೆಯಾಗಿರುವ ಕಾರಣ ಪ್ರವಾಸೋದ್ಯಮ ಇಲಾಖೆ ಸೇರಿದಂತೆ ರಾಜ್ಯ ಸರಕಾರದ ಅನುದಾನಕ್ಕಾಗಿ ಹಲವು ಬಾರಿ ಶಾಸಕರ ಮೂಲಕ ಸರಕಾರಕ್ಕೆ ಮನವಿ ನೀಡಿದ್ದೇವೆ. ಆದರೆ, ಸರಕಾರ ಅನುದಾನ ಬಿಡುಗಡೆ ಮಾಡಿಲ್ಲ. ಬೋಟ್ಗಳ ನಿಲುಗಡೆಯಿಂದ ಘನ ವಾಹನ ಸಂಚಾರದಿಂದ ರಸ್ತೆ ಹಾಳಾಗಿದೆ.
-ಕಿರಣ್ ಕುಮಾರ್, ಪಾಲಿಕೆ ಸದಸ್ಯರು
40 ವರ್ಷಗಳಿಂದ ಈ ಭಾಗದಲ್ಲಿ ನೆಲೆಸಿದ್ದೇನೆ. ಇಲ್ಲಿಯ ವರೆಗೆ ಒಮ್ಮೆಯೂ ರಸ್ತೆಗೆ ಡಾಮರು ಅಳವಡಿಸಿಲ್ಲ. ಪಾಲಿಕೆಗೆ ಜನಪ್ರತಿನಿಧಿಗಳಿಗೆ ಮನವಿ ನೀಡಿದ್ದೇ ಬಂತು.
-ರೋಹನ್ ಡಿ’ಸೋಜಾ, ಸ್ಥಳೀಯ ನಿವಾಸಿ
-ಸಂತೋಷ್ ಮೊಂತೇರೊ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.