ಸುರತ್ಕಲ್‌: ಒಳಚರಂಡಿ ಕಾಮಗಾರಿಗೆ 28 ಕೋ.ರೂ.; ದುರಸ್ತಿಗೆ 33 ಕೋಟಿ!


Team Udayavani, May 6, 2022, 1:07 PM IST

repair

ಸುರತ್ಕಲ್‌: ಸುರತ್ಕಲ್‌ ಪ್ರದೇಶದಲ್ಲಿ 2006ರಲ್ಲಿ ಆರಂಭವಾದ ಒಳಚರಂಡಿ ಕಾಮಗಾರಿಗೆ 28 ಕೋ. ರೂ. ಖರ್ಚು ಮಾಡಲಾಗಿತ್ತು. ಆದರೆ ಬಳಿಕ ಇದೀಗ ಅಮೃತ್‌ ಯೋಜನೆಯಲ್ಲಿ ದುರಸ್ತಿಗೆ 33 ಕೋ.ರೂ. ಖರ್ಚು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ವಿಧಾನ ಪರಿಷತ್‌ನ ಭರವಸೆ ಸಮಿತಿಗಳ ಅಧ್ಯಕ್ಷ ಬಿ.ಎಂ. ಫಾರೂಕ್‌ ಅವರಿಗೆ ಮಾಹಿತಿ ನೀಡಿದರು.

ಸುರತ್ಕಲ್‌ ಇಡ್ಯಾ ವೆಟ್‌ವೆಲ್‌ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭ ಮಾಹಿತಿ ನೀಡಿದ ಅಧಿಕಾರಿ ಗಳು, ಒಟ್ಟು ನಾಲ್ಕು ವೆಟ್‌ವೆಲ್‌ ಗಳಲ್ಲಿ ಮೂರು ಕಾರ್ಯಾಚರಿಸುತ್ತಿದೆ. ಸುರತ್ಕಲ್‌ ವೆಟ್‌ವೆಲ್‌ ನಿರ್ವಹಣೆಯಿಲ್ಲದೆ ಉಳಿದ ಪರಿಣಾಮ ನೀರು ಚರಂಡಿ ಸೇರಿ ಬಾವಿ ನೀರು ಹಾಳಾಗಿದೆ ಎಂದರು.

ಈ ಸಂದರ್ಭ ಆಕ್ರೋಶ ವ್ಯಕ್ತಪಡಿಸಿದ ಗುಡ್ಡೆಕೊಪ್ಲ ನಾಗರಿಕರು ಕಳಪೆ ಕಾಮಗಾರಿಯಿಂದ ನಾವು ಸುತ್ತಮುತ್ತಲಿನ 27 ಬಾವಿಗಳನ್ನು ಕಳೆದುಕೊಂಡಿದ್ದೇವೆ. ನುಸಿ, ದುರ್ವಾಸನೆಯಿಂದ ಮನೆಯಲ್ಲಿ ನೆಮ್ಮದಿಯಾಗಿ ಊಟ ಮಾಡಲು ಸಾಧ್ಯವಿಲ್ಲದಂತಾಗಿದೆ. ಈ ವೆಟ್‌ವೆಲ್‌ ಸ್ಥಳಾಂತರಿಸಿ ದುರಸ್ತಿ ಮಾಡಿ ಮತ್ತೆ ಆರಂಭಕ್ಕೆ ನಾವು ಬಿಡುವುದಿಲ್ಲ ಎಂದು ಹೇಳಿದರು.

ಸಮಗ್ರವಾಗಿ ಮಾಹಿತಿ ಪಡೆದ ಭರವಸೆ ಸಮಿತಿ ಸದಸ್ಯರು ಬಳಿಕ ಸುರತ್ಕಲ್‌ ಮಾರುಕಟ್ಟೆ ವಿಳಂಬ ಕಾಮಗಾರಿಯನ್ನು ವೀಕ್ಷಿಸಿದರು.

ಉದ್ಯೋಗಕ್ಕಾಗಿ ಮನವಿ

ಎಂಆರ್‌ಪಿಎಲ್‌ ಸಂಯುಕ್ತ ನಾಗರಿಕ ಹಿತರಕ್ಷಣೆ ಸಮಿತಿಯಿಂದ ಉದ್ಯೋಗಕ್ಕಾಗಿ ಮನವಿ ನೀಡಿತು. ಎಂಆರ್‌ಪಿಎಲ್‌ ತೈಲ ಸಂಸ್ಕರಣೆ ಸಂಸ್ಥೆಗೆ ಉದ್ಯೋಗದ ಭರವಸೆಯಿಂದ ಭೂಮಿ ಬಿಟ್ಟುಕೊಟ್ಟು ನಾವು ಇದೀಗ ವಂಚಿತರಾಗಿದ್ದೇವೆ. ಕೊಟ್ಟ ಭರವಸೆ ಉಳಿದಿದೆ. ಇಲ್ಲಿ ಕಲಿತ ಎಂಜಿನಿಯರ್‌, ತಂತ್ರಜ್ಞರು ಪರಿಣಿತರು ಊರಲ್ಲಿ ಅರ್ಹವಾಗಿ ಸಿಗಬೇಕಾದ ಕೆಲಸ ಸಿಗುವ ನಿರೀಕ್ಷೆಯಿಂದ ದಿನ ದೂಡುತ್ತಿದ್ದಾರೆ.

ಈಗಾಗಲೇ ಯುವ ಸಮೂಹ ತಾಳ್ಮೆ ಕಳೆದುಕೊಳ್ಳುತ್ತಿದ್ದು ಆತ್ಮಹತ್ಯೆ ಯಂತಹ ಕೃತ್ಯ ಎಸಗಿದರೆ ಯಾರು ಹೊಣೆ ಎಂದು ಡೋನಿ ಸುವಾರಿಸ್‌ ಸಮಿತಿ ಸದಸ್ಯರನ್ನು ಪ್ರಶ್ನಿಸಿದರಲ್ಲದೆ ತತ್‌ಕ್ಷಣ ಜಿಲ್ಲಾಡಳಿತಕ್ಕೆ ಅರ್ಹ ಸ್ಥಳೀಯರ ಮಾಹಿತಿ ಕಲೆ ಹಾಕಿ ಉದ್ಯೋಗ ದೊರಕಿಸಲು ಆದೇಶಿಸಬೇಕು ಎಂದು ಒತ್ತಾಯಿಸಿದರು.

ಭರವಸೆಗಳ ಈಡೇರಿಕೆಗೆ ಮನವಿ

ದ.ಕ. ಜಿಲ್ಲೆ ಸೂಕ್ಷ್ಮ ಜಿಲ್ಲೆಯಾಗಿದ್ದು ಸಮುದ್ರ, ನದಿ ಸಹಿತ ಪರಿಸರಕ್ಕೆ ಹಾನಿಯಾದಲ್ಲಿ ಹವಾಮಾನ ವೈಪರೀತ್ಯ ವಾಗಬಹುದು ಮಾತ್ರವಲ್ಲ, ಇಲ್ಲಿನ ಕೃಷಿ, ಮೀನುಗಾರಿಕೆ, ಕುಲ ಕಸುಬುಗಳಿಗೆ ಭಾರೀ ಹಾನಿ ಯಾಗಲಿದೆ. ಕೈಗಾರಿಕೆಗಳು ಜವಾಬ್ದಾರಿಯುತವಾಗಿ ಪರಿಸರಕ್ಕೆ ಮಾರಕವಾಗದಂತೆ ಉತ್ತಮ ವ್ಯವಸ್ಥೆ ಕೈಗೊಂಡು ದೇಶದ ಆರ್ಥಿಕತೆಗೆ ಕೊಡುಗೆ ನೀಡುವಂತಾಗಬೇಕು. ಸ್ಥಳೀಯರಿಗೆ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು. ಪ್ರವಾಸದ ಸಮಗ್ರ ಮಾಹಿತಿಯನ್ನು ಸರಕಾರಕ್ಕೆ ಸಲ್ಲಿಸಿ ಬಾಕಿ ಉಳಿದ ಭರವಸೆಗಳ ಈಡೇರಿಕೆಗೆ ಮನವಿ ಮಾಡಲಾಗುವುದು ಎಂದು ಭರವಸೆ ಸಮಿತಿಗಳ ಅಧ್ಯಕ್ಷ ಬಿ.ಎಂ ಫಾರೂಕ್‌ ಹೇಳಿದರು.

ದೀಪಕ್‌ ಪೆರ್ಮುದೆ ಮಾಹಿತಿ ನೀಡಿದರು. ಜಿಲ್ಲಾಧಿಕಾರಿಯವರಲ್ಲಿ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದು ಕಚೇರಿಯಲ್ಲಿ ಮಾಹಿತಿ ಪಡೆದು ನಿಮ್ಮಲ್ಲಿರುವ ದಾಖಲೆ ಸಲ್ಲಿಸಲು ಸಮಿತಿ ಅಧ್ಯಕ್ಷ ಬಿ.ಎಂ. ಫಾರೂಕ್‌ ಸೂಚಿಸಿದರು. ಸಮಿತಿ ಸದಸ್ಯರಾದ ಯು.ಬಿ. ವೆಂಕಟೇಶ್, ಎಸ್‌.ವಿ. ಸಂಕನೂರು, ಕೆ.ಟಿ. ಶ್ರೀಕಂಠೇಗೌಡ, ಶಶಿಲ್‌ ನಮೋಶಿ, ರುದ್ರೇಗೌಡ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಮೊದೀನ್‌ ಬಾವಾ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.