Global ಮಾರುಕಟ್ಟೆಯ 5 ದೊಡ್ಡ, 20 ಸಣ್ಣ ಹಣ್ಣುಹಂಪಲು ಅಂಗಡಿಗಳು ಭಸ್ಮ, ಕೋಟ್ಯಂತರ ನಷ್ಟ
Team Udayavani, Jun 10, 2024, 12:07 PM IST
ಉಳ್ಳಾಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ. ನಷ್ಟ ಉಂಟಾಗಿದೆ.
ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ ನಷ್ಟ (1 ಕೋಟಿ ರೂ), ಸುಹೈಲ್ ಎಂಬವರಿಗೆ ಸೇರಿದ ಕೆ.ಎಫ್.ಕೆ (40 ಲಕ್ಷ), ಲತೀಫ್ ಎಂಬವರ ಕೆ.ಕೆ.ಫ್ರೂಟ್ಸ್ (70 ಲಕ್ಷ), ಇಂಡಿಯನ್ (60 ), ಸಲಾಂ ಅವರ ಬಿ.ಎಸ್.ಆರ್ (15 ರಿಂದ 20 ಲಕ್ಷ), ಝುಲ್ಫೀಕರ್ ಅವರ ಪಿಕೆಎಸ್ (15-20), ನಾಸೀರ್ ಎಂಬವರ ಕೆಜಿಎನ್ ಫ್ರೂಟ್ಸ್ (15-20) ನಷ್ಟ ಅಂದಾಜಿಸಲಾಗಿದೆ.
ಅದರ ಹತ್ತಿರದಲ್ಲಿರುವ ಸಣ್ಣ ಅಂಗಡಿಗಳಾದ ಗಣೇಶ್ ಮಾರ್ಕೆಟ್, ಇಮ್ತಿಯಾಝ್, ಅಮೀರ್ ಸೇರಿದಂತೆ ಒಟ್ಟು 20 ಅಂಗಡಿಗಳು ಸುಟ್ಟುಹೋಗಿವೆ.
ಎಸ್ ಎನ್ ಫ್ರೂಟ್ಸ್ ಮಾಲೀಕರು ಭಾನುವಾರ ಸಂಜೆ ವೇಳೆಯಷ್ಟೇ ರೂ. 40 ಲಕ್ಷದ ಹಣ್ಣುಹಂಪಲುಗಳನ್ನು ಮಾರಾಟಕ್ಕೆ ತರಿಸಿದ್ದರು. ಎಲ್ಲಾ ಮಳಿಗೆಗಳಲ್ಲಿ ಫ್ರೀಝರ್ ಗಳಿದ್ದೂ, ಅವುಗಳು ಸುಟ್ಟುಹೋಗಿವೆ.
ರಾತ್ರಿ 2.30 ರ ಸುಮಾರಿಗೆ ಬೀಗ ಹಾಕಿದ್ದ ಅಂಗಡಿಗಳ ಒಳಗಿನಿಂದ ಬೆಂಕಿ ಕಾಣಿಸಿಕೊಂಡಿದ್ದು ಒಮ್ಮಿಂದೊಮ್ಮೆಲೆ 25 ಅಂಗಡಿಗಳಿಗೆ ವ್ಯಾಪಿಸಿದೆ. ಮಂಗಳೂರಿನಿಂದ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಕೈಗೊಂಡ ಹಿನ್ನೆಲೆಯಲ್ಲಿ ಉಳಿದ 60 ಅಂಗಡಿಗಳಿಗೆ ಬೆಂಕಿ ಹರಡಿಲ್ಲ.
ಘಟನಾ ಸ್ಥಳಕ್ಕೆ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.