Mangaluru: ಸಾಕು ಪ್ರಾಣಿಗಳ ಅಂತ್ಯಕ್ರಿಯೆಗೆ ಪ್ರತ್ಯೇಕ ಶ್ಮಶಾನ

ಪ್ರಾಣಿಪ್ರಿಯರ ನೋವಿಗೆ ಸಿಕ್ಕಿತು ಸ್ಪಂದನೆ; ನಂದಿಗುಡ್ಡದಲ್ಲಿ ಜಾಗ ನಿಗದಿ; ಶೀಘ್ರ ಕಾಮಗಾರಿ ಆರಂಭ

Team Udayavani, Jul 30, 2024, 4:22 PM IST

Screenshot (30)

ಮಹಾನಗರ: ಮುದ್ದಿನಿಂದ ಸಾಕಿದ ನಾಯಿ, ಬೆಕ್ಕುಗಳು ಮೃತಪಟ್ಟಾಗ ಅವುಗಳ ಅಂತ್ಯಕ್ರಿಯೆ ಹೇಗೆ, ಎಲ್ಲಿ ಮಾಡುವುದು ಎಂದು ತಿಳಿಯದೆ ಕಂಗಾಲಾಗುವ ಪ್ರಾಣಿಪ್ರಿಯರ ಸಂಕಟಕ್ಕೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ. ನಂದಿಗುಂಡ್ಡದಲ್ಲಿರುವ ಶ್ಮಶಾನದ ಪಕ್ಕದ ಜಾಗವನ್ನು ಇದೀಗ ಪ್ರಾಣಿಗಳ ಅಂತ್ಯಸಂಸ್ಕಾರಕ್ಕಾಗಿ ಮೀಸಲಿಡಲು ಮಂಗಳೂರು ಪಾಲಿಕೆ ತೀರ್ಮಾನಿಸಿದೆ. ನಂದಿಗುಡ್ಡೆ ಶ್ಮಶಾನದ ಒಂದು ಭಾಗದಲ್ಲಿ 20 ಸೆಂಟ್ಸ್‌ ಜಾಗ ಗುರುತಿಸಲಾಗಿದ್ದು, ಪಾಲಿಕೆ ಸಭೆಯಲ್ಲಿ ಅನುಮತಿ ಪಡೆಯಲಾಗಿದೆ. ಅನುದಾನ ಕಾಯ್ದಿರಿಸಿ ಶೀಘ್ರ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆ ಇದೆ.

ಪ್ರಾಣಿಗಳ ಶವ ಸಂಸ್ಕಾರಕ್ಕೆ ನಗರದಲ್ಲಿ ಸೂಕ್ತ ವ್ಯವಸ್ಥೆ ಇಲ್ಲ. ವಿಶಾಲ ಜಾಗ ಉಳ್ಳವರು ತಮ್ಮ ಮನೆಯ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸಿದರೆ, ಅಪಾರ್ಟ್‌ಮೆಂಟ್‌,ಸಣ್ಣ ಜಾಗದಲ್ಲಿ ವಾಸ ಮಾಡುವವರಿಗೆ ತೊಂದರೆ ಆಗುತ್ತಿತ್ತು. ನಗರದೊಳಗೆ ಸಣ್ಣ ಜಾಗ ಗುರುತಿಸಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಬೇಕು ಎಂದು ಪ್ರಾಣಿ ಪ್ರಿಯರು ಅನೇಕ ವರ್ಷದಿಂದ ಆಗ್ರಹಿಸುತ್ತಿದ್ದರು.

ಕೆತ್ತಿಕಲ್‌ನಲ್ಲಿ ಉದ್ದೇಶಿಸಲಾಗಿತ್ತು
ಈ ಹಿಂದೆ ಮಂಗಳೂರಿನ ತಿರುವೈಲು ಗ್ರಾಮದ ಕೆತ್ತಿಕಲ್‌ನಲ್ಲಿ ಪ್ರಾಣಿಗಳ ಶ್ಮಶಾನ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಇಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಾರ್ವಜನಿಕ ಶ್ಮಶಾನದ ಪಕ್ಕದಲ್ಲೇ ಮೂಕಪ್ರಾಣಿಗಳ ಅಂತ್ಯಕ್ರಿಯೆಗೂ ಅವಕಾಶ ನೀಡಲು ಸಿದ್ಧತೆ ನಡೆಸಲಾಗಿತ್ತು. 2024-25 ಬಜೆಟ್‌ನಲ್ಲಿ 1.50 ಕೋ. ರೂ. ಕಾಯ್ದಿರಿಸಲಾಗಿತ್ತು. ಗ್ರಾಮಾಂತರಕ್ಕಿಂತ ನಗರದಲ್ಲಿನಿರ್ಮಿಸಬೇಕೆಂಬ ಆಗ್ರಹ ಹೆಚ್ಚಿರುವ ಕಾರಣ ಮೊದಲ ಹಂತದಲ್ಲಿ ನಗರ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗ ಹೇಗೆ ನಡೆಯುತ್ತಿದೆ ಅಂತ್ಯಕ್ರಿಯೆ?

ನಗರ ಫ್ಲ್ಯಾಟ್‌ವಾಸಿಗಳಲ್ಲಿ ಶೇ.40ಕ್ಕೂ ಅಧಿಕ ಜನ ನಾಯಿ ಹಾಗೂ ಬೆಕ್ಕುಗಳನ್ನುಸಾಕುತ್ತಾರೆ. ಸಣ್ಣಪುಟ್ಟ ಮನೆಗಳಲ್ಲೂ ನಾಯಿ, ಬೆಕ್ಕುಗಳಿವೆ. ಅನಾರೋಗ್ಯ ಸಂದರ್ಭಗಳಲ್ಲಿ ವೈದ್ಯರಲ್ಲಿಗೆ ಕೊಂಡೊಯ್ದು ಚಿಕಿತ್ಸೆಕೊಡಿಸುತ್ತಾರೆ. ಆದರೆ ಸಾವು ಸಂಭವಿಸಿದ ವೇಳೆ ಅಂತ್ಯಕ್ರಿಯೆ ನಡೆಸಲು ಭಾರಿ ಸಮಸ್ಯೆ ಎದುರಿಸುತ್ತಾರೆ.

ಕೆಲವರು ಖಾಸಗಿ ಜಾಗಗಳಲ್ಲಿರುವ ತಮ್ಮ ಸ್ನೇಹಿತರಲ್ಲಿ ವಿನಂತಿ ಮಾಡಿಕೊಂಡು ಅವುಗಳನ್ನು ಮಣ್ಣು ಮಾಡುತ್ತಾರೆ.

ಹೆಚ್ಚಿನವರು ಒಲ್ಲದ ಮನಸ್ಸಿನಿಂದ ಪಾಲಿಕೆಯ ಕಸದೊಂದಿಗೆ ಎಸೆಯುತ್ತಾರೆ. ವಿಷಯ ಗೊತ್ತಾದರೆ ಸಿಬ್ಬಂದಿಯೂ ಅದನ್ನು ಒಯ್ಯಲು ನಿರಾಕರಿಸುವುದೂ ಇದೆ.

ಭಾವನಾತ್ಮಕ ಸಂಬಂಧವಿದ್ದರೂ ನ್ಯಾಯಯುತ ಅಂತ್ಯ ಸಂಸ್ಕಾರ ನೀಡಲು ಸಾಧ್ಯವಾಗುತ್ತಿಲ್ಲ ಎನ್ನುವ ಅಳಲು ಪ್ರಾಣಿಪ್ರಿಯರನ್ನು ಕಾಡುತ್ತದೆ.

ಎಲ್ಲ ನಗರಗಳಲ್ಲೂ ಪ್ರಾಣಿಗಳ ಶ್ಮಶಾನ ನಿರ್ಮಿಸಬೇಕು ಎಂದು ಕೇಂದ್ರದ ಪ್ರಾಣಿ ದಯಾ ಸಂಘದಿಂದ ಸೂಚನೆ ಇದೆ. ಮುದ್ದಿನಿಂದ ಸಾಕಿದ ಪ್ರಾಣಿಗಳನ್ನು ಗೌರವಯುತವಾಗಿ ದಫನ ಮಾಡಬೇಕು. ಇದಕ್ಕಾಗಿ ನಗರದಲ್ಲಿ ಶ್ಮಶಾನದ ಅಗತ್ಯವಿದ್ದು, ನಂದಿಗುಡ್ಡೆಯಲ್ಲಿ ಪಾಲಿಕೆ ನಿರ್ಮಾಣಕ್ಕೆ ಮುಂದಾಗಿರುವುದು ಸ್ವಾಗತಾರ್ಹ.

– ಕಟೀಲು ದಿನೇಶ್‌ ಪೈ, ಪ್ರಾಣಿ ದಯಾ ಸಂಘದ ಸದಸ್ಯರು

ಮೂಕ ಪ್ರಾಣಿಗಳಿಗೂ ಗೌರವಯುತ ಅಂತ್ಯಕ್ರಿಯೆ ನಡೆಸಬೇಕು. ಪ್ರಾಣಿಗಳ ಶವ ಸಂಸ್ಕಾರಕ್ಕೆ ನಗರದೊಳಗೆ ಶ್ಮಶಾನ ಬೇಕೆಂಬುವುದು ಪ್ರಾಣಿ ಪ್ರಿಯರ ಆಗ್ರಹ. ಅದರಂತೆ ಅತ್ತಾವರ ನಂದಿಗುಡ್ಡ ರುದ್ರಭೂಮಿಯಲ್ಲಿ ಜಾಗ ಗುರುತಿಸಲಾಗಿದೆ. ಶೀಘ್ರದಲ್ಲೇ ಈ ಕಾಮಗಾರಿ ಆರಂಭಗೊಳ್ಳಲಿದೆ.

– ಸುಧೀರ್‌ ಶೆಟ್ಟಿ ಕಣ್ಣೂರು, ಪಾಲಿಕೆ ಮೇಯರ್‌

– ಸಂತೋಷ್‌ ಮೊಂತೇರೊ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.