ಆಸಕ್ತರಿಲ್ಲದೆ ಯಶ ಕಾಣದ ‘ಟ್ರಾಫಿಕ್ ವಾರ್ಡನ್‌’ ವ್ಯವಸ್ಥೆ

ಸಂಚಾರ ಪೊಲೀಸರಿಗೆ ಸಾಥ್‌ ನೀಡುವವರು ಸಿಗುತ್ತಿಲ್ಲ

Team Udayavani, Aug 5, 2024, 6:01 PM IST

traffic

ಮಹಾನಗರ: ಮಂಗಳೂರು ನಗರದಲ್ಲಿ 2 ವರ್ಷಗಳ ಹಿಂದೆ ಆರಂಭಗೊಂಡ “ಟ್ರಾಫಿಕ್ ವಾರ್ಡನ್‌ ಆರ್ಗನೈಜೇಷನ್‌'(ಟಿಡಬ್ಲ್ಯುಒ)ಗೆ ಟ್ರಾಫಿಕ್ ವಾರ್ಡನ್‌ಗಳ ಕೊರತೆ ಉಂಟಾಗಿದೆ. ಪೊಲೀಸರೊಂದಿಗೆ ಸಂಚಾರಿ ಸೇವೆಗೆ ಜನತೆ ಆಸಕ್ತಿ ತೋರಿಸದಿರುವುದರಿಂದ “ಟಿಡಬ್ಲ್ಯುಒ’ ಸಮರ್ಪಕಅನುಷ್ಠಾನಕ್ಕೆ ಹಿನ್ನಡೆಯಾಗಿದೆ.

ನಗರದಲ್ಲಿ 2016 ರಿಂದ 2020ರ ವರೆಗೆ “ಟ್ರಾಫಿಕ್ ವಾರ್ಡನ್‌ ಸ್ಕ್ವಾಡ್‌’ ಅಸ್ತಿತ್ವದಲ್ಲಿತ್ತು. 2 ವರ್ಷಗಳ ಹಿಂದೆ ಟ್ರಾಫಿಕ್ ವಾರ್ಡನ್‌ ವ್ಯವಸ್ಥೆಯನ್ನು ಬದಲಾಯಿಸಿ ಬೆಂಗಳೂರು ಸಹಿತ ದೇಶದ ಪ್ರಮುಖ ನಗರಗಳಲ್ಲಿರುವ ಟಿಡಬ್ಲ್ಯುಒ ಮಾದರಿಯಲ್ಲಿ “ಮಂಗಳೂರು ಸಿಟಿ ಪೊಲೀಸ್‌-ಟ್ರಾಫಿಕ್ವಾರ್ಡನ್‌ ಆರ್ಗನೈಜೇಷನ್‌(ಎಂಸಿಸಿ-ಟಿಡಬ್ಲ್ಯುಒ) ಅಸ್ತಿತ್ವಕ್ಕೆ ತರಲಾಗಿತ್ತು. ಇದಕ್ಕೆ ಸುಮಾರು ನೂರು ಮಂದಿ “ಟ್ರಾಫಿಕ್ ವಾರ್ಡನ್‌’ಗಳನ್ನು ಸೇರಿಸಿಕೊಳ್ಳುವ ಉದ್ದೇಶ ಹೊಂದಲಾಗಿತ್ತು. ಆದರೆ ನಿರೀಕ್ಷಿತ ಸ್ಪಂದನೆ ದೊರೆಯದೆ ಸದ್ಯ ಇಬ್ಬರು ಮಾತ್ರವೇ ಟಿಡಬ್ಲ್ಯುಒ ವ್ಯವಸ್ಥೆಯಡಿ ಟ್ರಾಫಿಕ್ ವಾರ್ಡನ್‌ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಏನಿದು ಟ್ರಾಫಿಕ್ ವಾರ್ಡನ್‌?

ವಾಹನ ಸಂಚಾರ ವ್ಯವಸ್ಥೆ ನಿರ್ವಹಣೆಯಲ್ಲಿ ಸಂಚಾರ ಪೊಲೀಸರ ಜತೆಗೆ ಸಾರ್ವಜನಿಕರು ಕೂಡ ಸೇವೆ ಸಲ್ಲಿಸುವುದೇ ಟ್ರಾಫಿಕ್ ವಾರ್ಡನ್‌ ವ್ಯವಸ್ಥೆ. ಬೇರೆ ಉದ್ಯೋಗ ಮಾಡುತ್ತಿರುವವರು, ನಿವೃತ್ತರು ನಿರ್ದಿಷ್ಟ ಸಮಯದಲ್ಲಿ ಪೊಲೀಸರ ಸೂಚನೆಯಂತೆ ಅಗತ್ಯ ಸ್ಥಳ ಗಳಲ್ಲಿ ಸಂಚಾರ ನಿರ್ವಹಣೆಯಲ್ಲಿ ಉಚಿತವಾಗಿ ಸಲ್ಲಿಸುವ ಸೇವೆ ಇದಾಗಿರುತ್ತದೆ.

ಅರ್ಹತೆ ಏನು?

ಈ ಹಿಂದೆ ಟ್ರಾಫಿಕ್ ವಾರ್ಡನ್‌ ವ್ಯವಸ್ಥೆ ಇದ್ದಾಗ ಸುಮಾರು 15ಕ್ಕೂ ಅಧಿಕ ಮಂದಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಹೊಸ ವ್ಯವಸ್ಥೆ ಅನುಷ್ಠಾನಕ್ಕೆ ಬಂದಾಗ ಹೊಸ ಕೆಲವೊಂದು ನಿಬಂಧನೆಗಳನ್ನು ಒಪ್ಪಿಕೊಂಡು ಬರಲು ಕೆಲವರು ಹಿಂದೇಟು ಹಾಕಿದ್ದಾರೆ. ಸ್ವಯಂಸೇವೆಯ ತುಡಿತವಿರುವ 25ರಿಂದ 55 ವರ್ಷ ವಯೋಮಾನದ ಕನಿಷ್ಠ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ನಾಗರಿಕರು ಸೇರ್ಪಡೆಯಾಗಬಹುದು. ಫ‌ಲಾಪೇಕ್ಷೆ ಇಲ್ಲದೆ ದಿನಕ್ಕೆ 2 ಗಂಟೆ, ವಾರದಲ್ಲಿ 6 ಗಂಟೆ, ತಿಂಗಳಿಗೆ 24 ಗಂಟೆ (ಕನಿಷ್ಟ) ಸೇವೆ ಮಾಡಲು ಇಚ್ಛೆ ಉಳ್ಳ ಆರೋಗ್ಯವಂತರು, ಇಂಗ್ಲಿಷ್‌, ಕನ್ನಡ ಓದಲು, ಬರೆಯಲು ಬರುವವರು ಈ ಟ್ರಾಫಿಕ್ ವಾರ್ಡನ್‌ ಆರ್ಗನೈಜೇಷನ್‌ನಲ್ಲಿ ಪಾಲ್ಗೊಳ್ಳ ಬಹುದು. ಸೇವೆಯಲ್ಲಿ ತೊಡಗಿಕೊಂಡವರಿಗೆ ಹಂತ ಹಂತವಾಗಿ ಭಡ್ತಿಯನ್ನು ಕೂಡ ನೀಡಲಾಗುತ್ತದೆ.

ಸಾರಥಿಯೂ ಇಲ್ಲ

ಟ್ರಾಫಿಕ್ ವಾರ್ಡನ್‌ ಆರ್ಗನೈಜೇಷನ್‌ಗೆ ಮಂಗಳೂರಿನ ಮುಖ್ಯಸ್ಥರಾಗಿ ಸ್ಕ್ವಾಡ್ರನ್‌ ಲೀಡರ್‌ ಪ್ರೊ| ಎಂ.ಎಲ್‌. ಸುರೇಶ್ ನಾಥ್‌ ಸೇವೆ ಸಲ್ಲಿಸುತ್ತಿದ್ದರು. ಟ್ರಾಫಿಕ್ ವಾರ್ಡ ನ್‌ಗೆ ಜನರು ಆಸಕ್ತಿ ತೋರಿಸದ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಸದ್ಯ ಆ ಹುದ್ದೆಯೂ ಖಾಲಿ ಇದೆ.

ಬಸ್‌ಪಾಸ್‌, ವಿಮೆ ಸೌಲಭ್ಯ

ಟ್ರಾಫಿಕ್ ವಾರ್ಡನ್‌ಗಳಾಗಿ ಸೇರ್ಪಡೆಗೊಳ್ಳುವವರು ಯಾವುದೇ ಪ್ರತಿಫ‌ಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸಬೇಕು. ಬೆಂಗಳೂರು ನಗರದಲ್ಲಿ ಪ್ರೊಫೆಸರ್‌ಗಳು, ವೈದ್ಯರು, ಎಂಜಿನಿಯರ್‌ಗಳು, ಉದ್ಯಮಿಗಳು, ಐಟಿ-ಬಿಟಿ ಕಂಪೆನಿಯವರು ಸಹಿತ ನೂರಾರು ಮಂದಿ ಸೇವೆ ಸಲ್ಲಿಸುತ್ತಿದ್ದಾರೆ. ಟ್ರಾಫಿಕ್ ವಾರ್ಡನ್‌ಗಳಾಗಿ ಸೇರ್ಪಡೆಗೊಳ್ಳುವವರಿಗೆ ಉಚಿತ ಬಸ್‌ ಪಾಸ್‌, ಆರೋಗ್ಯ ತಪಾಸಣೆ, ಉಚಿತ ವಿಮೆ ಮೊದಲಾದ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿತ್ತು. ಆದರೂ ಯಾರು ಕೂಡ ಆಸಕ್ತಿ ತೋರಿಸುತ್ತಿಲ್ಲ.

ಸಾರ್ವಜನಿಕರ ಸಹಕಾರ ಬೇಕು

ಟ್ರಾಫಿಕ್ ವಾರ್ಡನ್‌ಗಳ ಅವಶ್ಯಕತೆ ಇದೆ. ಆದರೆ ಸಾರ್ವಜನಿಕರು ಆಸಕ್ತಿ ತೋರಿಸುತ್ತಿಲ್ಲ. ಸಾರ್ವಜನಿಕರಿಂದ ಸ್ಪಂದನೆ ದೊರೆಯದಿದ್ದರೆ ಕಷ್ಟಸಾಧ್ಯ. ಎಲ್ಲ ಕಡೆ ಕೇವಲ ಪೊಲೀಸರಿಂದ ಮಾತ್ರವೇ ಸಂಚಾರ ನಿಯಂತ್ರಣ ಮಾಡುವುದು ಕಷ್ಟಸಾಧ್ಯ. ಟ್ರಾಫಿಕ್ ವಾರ್ಡನ್‌ಗಳು ಕೂಡ ಇದ್ದರೆ ಅನುಕೂಲವಾಗುತ್ತದೆ.
-ದಿನೇಶ್‌ ಕುಮಾರ್‌ ಬಿ.ಪಿ., ಡಿಸಿಪಿ ಅಪರಾಧ ಮತ್ತು ಸಂಚಾರ ವಿಭಾಗ

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.