Mangaluru: ವೆ‌ನ್ಲಾಕ್‌ನಲ್ಲಿ ಸುಸಜ್ಜಿತ ಸರ್ಜಿಕಲ್‌ ಬ್ಲಾಕ್‌ ಸಿದ್ಧ

ಸ್ಮಾರ್ಟ್‌ ಸಿಟಿ ಯೋಜನೆಯಡಿ 53 ಕೋಟಿ ವೆಚ್ಛದಲ್ಲಿ ನಿರ್ಮಾಣ

Team Udayavani, Aug 7, 2024, 2:18 PM IST

Screenshot (129)

ಮಹಾನಗರ: ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಮಂಗಳೂರಿನ ವೆನ್ಲಾಕ್‌ ಸರಕಾರಿ ಆಸ್ಪತ್ರೆ ಯಲ್ಲಿ ನಿರ್ಮಾಣಗೊಂಡ ಅತ್ಯಾಧುನಿಕ ಸರ್ಜಿಕಲ್‌ ಬ್ಲಾಕ್‌ ಕಟ್ಟಡ ರೋಗಿಗಳ ಸೇವೆಗೆ ಸಿದ್ಧವಾಗಿದೆ.

ಸುಮಾರು 53 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ 2020ರ ಡಿಸೆಂಬರ್‌ ತಿಂಗಳಿನಲ್ಲಿ ಶಿಲಾನ್ಯಾಸ ಗೊಂಡ ಕಟ್ಟಡ ಈಗಾಗಲೇ ಉದ್ಘಾಟನೆ ಗೊಳ್ಳಬೇಕಿತ್ತು. ಕಟ್ಟಡ ಕಾಮಗಾರಿ ಬೇಗ ಆದರೂ ಕೆಲವೊಂದು ತಾಂತ್ರಿಕ ತೊಂದರೆ ಎಂಬ ನೆಪದಿಂದಾಗಿ ಉದ್ಘಾಟನೆ ಮಾತ್ರ ವಿಳಂಬವಾಗಿತ್ತು. ಸಮಸ್ಯೆ ಬಗೆಹರಿಸಿ, ಶೀಘ್ರ ಲೋಕಾರ್ಪಣೆಗೊಳಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂ ರಾವ್‌ ಅವರು ಕೂಡ ಸೂಚನೆ ನೀಡಿದ್ದರು. ಅದರಂತೆ ಸದ್ಯ ಉದ್ಘಾಟನೆಗೆ ರೆಡಿಯಾಗಿದೆ.

ವಿಳಂಬವೇಕೆ?

ಸ್ಮಾರ್ಟ್‌ಸಿಟಿಯಿಂದ ಅತ್ಯಾಕರ್ಷವಾಗಿ ಹೊಸ ಕಟ್ಟಡ ನಿರ್ಮಾಣವಾದರೂ ಇದು ಜನರಿಗೆ ಉಪಯೋಗಕ್ಕೆ ಸಿಗುವಂತಾಗಲು ಹಲವು ವರ್ಷ ಬೇಕಾಯಿತು. ಆರಂಭಿಕ ಯೋಜನೆಯ ಪ್ರಕಾರ ಸ್ಮಾರ್ಟ್ ಸಿಟಿಯಿಂದ ಕಟ್ಟಡ ನಿರ್ಮಾಣಕ್ಕೆ ಮಾತ್ರ ಅನುದಾನ ನೀಡಲಾಗಿತ್ತು. ಕಟ್ಟಡ ಕಾಮಗಾರಿ ಆದರೂ, ಇಲ್ಲಿ ಶಸ್ತ್ರಚಿಕಿತ್ಸೆಗೆ, ಚಿಕಿತ್ಸೆಗೆ ಸಂಬಂಧಿತ ಉಪಕರಣ ಇದ್ದಿಲ್ಲ. ವೆನ್ಲಾಕ್‌ ಹಳೆ ಕಟ್ಟಡದಲ್ಲಿರುವ ಸರ್ಜಿಕಲ್‌ ಬೆಡ್‌, ಸರ್ಜಿಕಲ್‌ ಉಪಕರಣವನ್ನು ಹೊಸ ಬ್ಲಾಕ್‌ನಲ್ಲಿ ಅಳವಡಿಸುವ ಉದ್ದೇಶ ಇತ್ತು. ಆರೋಗ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂ ರಾವ್‌ ಈ ಹಿಂದೆ ಸಭೆ ನಡೆಸಿ, ಹೊಸ ಉಪಕರಣ ಖರೀದಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಮಾರ್ಟ್‌ಸಿಟಿಯು ವೆನ್ಲಾಕ್‌ಗೆ ಹೆಚ್ಚುವರಿ ಅನುದಾನ ನೀಡಿ ಉಪಕರಣ ಖರೀದಿ ಮಾಡಲಾಗಿದೆ.

ಆ.15ಕ್ಕೆ ಉದ್ಘಾಟನೆ ಸಾಧ್ಯತೆ

ಆರೋಗ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂ ರಾವ್‌ ಅವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿ ಯಾಗಲು ಆ.15ರಂದು ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ. ವೆನ್ಲಾಕ್‌ ನಲ್ಲಿ ನಿರ್ಮಾಣಗೊಂಡ ಅತ್ಯಾಧುನಿಕ ಸರ್ಜಿಕಲ್‌ ಬ್ಲಾಕ್‌ ಕಟ್ಟಡವನ್ನು ಇದೇ ಸಂದರ್ಭದಲ್ಲಿ ಸಚಿವರಿಂದ ಉದ್ಘಾಟನೆ ಗೊಳಿಸಲು ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಏನೇನಿದೆ ಸರ್ಜಿಕಲ್‌ ಬ್ಲಾಕ್‌ನಲ್ಲಿ?

ಸಂಪೂರ್ಣ ಹವಾನಿಯಂತ್ರಿತ ಕಟ್ಟಡವು ತಳಮಹಡಿ, ನೆಲಮಹಡಿಯಲ್ಲದೆ ಹೆಚ್ಚುವರಿ 5 ಮಹಡಿ ಹೊಂದಿದೆ.
ಒಟ್ಟು 12 ಆಪರೇಷನ್‌ ಥಿಯೇಟರ್‌ ಮತ್ತು ಒಟ್ಟು 250 ಹಾಸಿಗೆಗಳೊಂದಿಗೆ ಸಂಪೂರ್ಣ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಸ್ಪೆಷಾಲಿಟಿ, ಸೂಪರ್‌ ಸ್ಪೆಷಾಲಿಟಿ ವಿಭಾಗಗಳಿವೆ.
ಹಳೆ ಮೆಡಿಸಿನ್‌ ಬ್ಲಾಕ್‌ನಿಂದ ಸರ್ಜಿಕಲ್‌ ಬ್ಲಾಕ್‌ಗೆ ಸಂಪರ್ಕಿಸಲು ಪಾದಾಚಾರಿ ಸೇತುವೆ ನಿರ್ಮಾಣ ಮಾಡಲಾಗಿದೆ.
ಕಟ್ಟಡದಲ್ಲಿ ಸಮಗ್ರ ಸುರಕ್ಷತೆ ಮತ್ತು ಸಂರಕ್ಷಣೆಗೆ ಬೇಕಾದ ಸೌಕರ್ಯ ಒದಗಿಸಲಾಗಿದೆ.

ಕ್ಯಾಥ್‌ ಲ್ಯಾಬ್‌ ನಿರ್ಮಾಣಕ್ಕೆ ಚಿಂತನೆ

ಹೃದಯ ಸಂಬಂಧಿಸಿದ ರೋಗಗಳ ಅತ್ಯಾಧುನಿಕ ತಪಾಸಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಇರುವ ಕಾರ್ಡಿಯಾಕ್‌ ಕ್ಯಾಥಟರೈಜೇಶನ್‌ ಲ್ಯಾಬ್‌ (ಕ್ಯಾಥ್‌ ಲ್ಯಾಬ್‌) ಸ್ಥಾಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಚಿಂತನೆ ನಡೆಸಿದೆ. ವೆನ್ಲಾಕ್‌ನಲ್ಲಿ ಈಗಾಗಲೇ ನಿರ್ಮಾಣ ಆಗಿರುವ ಅತ್ಯಾಧುನಿಕ ಸರ್ಜಿಕಲ್‌ ಬ್ಲಾಕ್‌ ಕಟ್ಟಡದ ಅಂತಸ್ತಿನಲ್ಲಿಯೇ ಲ್ಯಾಬ್‌ ಆರಂಭವಾಗುವ ಸಾಧ್ಯತೆ ಇದೆ.

ಸ್ಮಾರ್ಟ್‌ಸಿಟಿ ಯೋಜನೆ ಯಲ್ಲಿ ಅತ್ಯಾಧುನಿಕ ಸರ್ಜಿ ಕಲ್‌ ಬ್ಲಾಕ್‌ ಕಟ್ಟಡ ನಿರ್ಮಾಣ ಗೊಂಡಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ವೈದ್ಯಕೀಯ ಉಪಕರಣ ಜೋಡಣೆ ನಡೆಯುತ್ತಿದೆ. ವಾರದೊಳಗೆ ಪೂರ್ಣಗೊ ಳ್ಳಲಿದೆ. ಬಳಿಕ ಉದ್ಘಾಟನೆ ದಿನಾಂಕ ನಿಗದಿಯಾಗಲಿದೆ.

-ರಾಜು, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ

ಸ್ಮಾರ್ಟ್‌ಸಿಟಿ ವತಿಯಿಂದ ಸರ್ಜಿಕಲ್‌ ಬ್ಲಾಕ್‌ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ನಾಲ್ಕನೇ ಮಹಡಿಯವರೆಗೆ ಈಗಾಗಲೇ ಹಸ್ತಾಂತರಗೊಳಿಸಲಾಗಿದೆ. ಕೆಲವೊಂದು ಸೇವೆಗಳು ಮೊದಲನೇ ಹಂತದಲ್ಲಿ ಶೀಘ್ರ ಆರಂಭವಾಗಲಿದೆ.

– ಡಾ| ಜೆಸಿಂತ ಡಿ’ಸೋಜಾ, ಅಧೀಕ್ಷಕರು, ಜಿಲ್ಲಾ ಶಸ್ತ್ರಚಿಕಿತ್ಸಕರು ವೆನ್ಲಾಕ್‌ ಜಿಲ್ಲಾಸ್ಪತ್ರೆ ಮಂಗಳೂರು

ಹಲವು ಸೇವೆ ಆರಂಭ

ಹೊಸ ಸರ್ಜಿಕಲ್‌ ಬ್ಲಾಕ್‌ನಲ್ಲಿ ಮೊದಲನೇ ಹಂತದಲ್ಲಿ ಕೆಲವೊಂದು ಸೇವೆಗಗಳು ಶೀಘ್ರವೇ ಆರಂಭವಾಗಲಿದೆ. ಮುಖ್ಯವಾಗಿ ತಳ ಮಹಡಿ ರೇಡಿಯಾಲಜಿ ವಿಭಾಗದಲ್ಲಿ ಎಕ್ಸರೇ, ಅಲ್ಟ್ರಾಸೌಂಡ್‌, ಎಂಡೋಸ್ಕೋಪಿ, ಮೊದಲನೇ ಮಹಡಿಯಲ್ಲಿ ಯುರೋಲಜಿ, ಇಎನ್‌ಟಿ ವಿಭಾಗ ಆರಂಭಗೊಳ್ಳಲಿದೆ. ಎರಡನೇ ಮಹಡಿಯಲ್ಲಿ ನ್ಯೂರೋ ಸರ್ಜರಿ, ಹೃದಯಶಾಸ್ತ್ರ, ನೇತ್ರ ಶಾಸ್ತ್ರ ವಾರ್ಡ್‌, ಸೂಪರ್‌ ಸ್ಪೆಷಾಲಿಟಿ ಬೆಡ್‌ ಗಳು ಆರಂಭವಾಗಲಿದೆ. ಐದು ಮಾಡ್ಯುಲರ್‌ ಸೂಪರ್‌ ಸ್ಪೆಷಾಲಿಟಿ ಆಪರೇಷನ್‌ ಥಿಯೇಟರ್‌ಗಳು ಆರಂಭ ಆಗಲಿದೆ. ಕೆಎಂಸಿ ಮತ್ತು ವೆನ್ಲಾಕ್‌ ಸರಕಾರಿ ವೈದ್ಯರು ಸಹಕಾರ ನೀಡಲಿದ್ದಾರೆ. ಹೆಚ್ಚುವರಿ ಮಾನವ ಸಂಪನ್ಮೂಲಗಳನ್ನು ಕೆಎಂಸಿಯಿಂದ ನೀಡಲಾಗುತ್ತಿದೆ. ಕೆಎಂಸಿ ವತಿಯಿಂದ ಕ್ಯಾಥ್‌ ಲ್ಯಾಬ್‌ ಕಾಮಗಾರಿ, 8 ಬೆಡ್‌ ಗಳ ತುರ್ತು ಐಸಿಯು, ಅಪಘಾತ ತುರ್ತು ಚಿಕಿತ್ಸಾ ವಿಭಾಗ, ಜನರಲ್‌ ಸರ್ಜರಿ ಆಥೋìಪೆಡಿಕ್ಸ್‌ ವಿಭಾಗ ಎರಡನೇ ಹಂತದಲ್ಲಿ ಆರಂಭ ಆಗಲಿದೆ.

 

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.