ಅಂಬೇಡ್ಕರ್‌ ಭವನ ನಿರ್ವಹಣೆ ಜವಾಬ್ದಾರಿ ಪಾಲಿಕೆ ಹೆಗಲಿಗೆ !

ಸಮಾಜ ಕಲ್ಯಾಣ ಇಲಾಖೆಗೆ ತಲೆನೋವಾದ ನಿರ್ವಹಣೆ ಭಾರ

Team Udayavani, Mar 23, 2022, 10:53 AM IST

ambedkar

ಮಹಾನಗರ: ವರ್ಷ ಹಿಂದೆ ಉದ್ಘಾಟನೆಗೊಂಡ ಅಂಬೇಡ್ಕರ್‌ ಭವನ ನಿರ್ವಹಣೆ ಸಮಾಜ ಕಲ್ಯಾಣ ಇಲಾಖೆಗೆ ತಲೆನೋವಾಗಿ ಪರಿಣಮಿಸಿದ್ದು, ಭವನ ನಿರ್ವಹಣೆಯನ್ನು ಮಹಾನಗರ ಪಾಲಿಕೆ ವಹಿಸಲು ಸಿದ್ಧತೆ ನಡೆಯುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಅಂಬೇಡ್ಕರ್‌ ಭವನವನ್ನು ಉದ್ಘಾಟಿಸಿದ್ದು, ಇನ್ನೂ ಕಾರ್ಯ ಕ್ರಮಗಳಿಗೆ ತೆರೆದುಕೊಂಡಿಲ್ಲ. ಈಗಾಗಲೇ ಸುಮಾರು 40 ಸಾವಿರ ರೂ. ನಷ್ಟು ವಿದ್ಯುತ್‌ ಬಿಲ್‌ ಬರುತ್ತಿದ್ದು, ಕಾರ್ಯಕ್ರಮಗಳಿಗೆ ವಿನಿಯೋಗಿಸಿದರೆ 1 ಲಕ್ಷ ರೂ. ಮೀರುತ್ತದೆ. ಹೀಗಿದ್ದಾಗ, ಸಮಾಜಕಲ್ಯಾಣ ಇಲಾಖೆಯಲ್ಲಿ ಅಷ್ಟೊಂದು ಆದಾಯವಿಲ್ಲ. ಇದೇ ಕಾರಣಕ್ಕೆ ಮನಪಾಗೆ ಹಸ್ತಾಂತರಿಸುವ ಕುರಿತು ಸಮಾಜ ಕಲ್ಯಾಣ ಇಲಾಖೆ ಪಾಲಿಕೆಯೊಂದಿಗೆ ಮಾತುಕತೆ ನಡೆಸುತ್ತಿದೆ.

ಪಾಲಿಕೆಯಲ್ಲಿ ಇತ್ತೀಚೆಗೆ ನಡೆದ ಎಸ್‌ಸಿ/ಎಸ್‌ಟಿ ಕುಂದು ಕೊರತೆ ಸಭೆಯಲ್ಲಿಯೂ ಈ ಪ್ರಸ್ತಾವ ಬಂದಿತ್ತು. ಪಾಲಿಕೆ ಅನುದಾನದಿಂದ ನಿರ್ವಹಣೆ ಮಾಡುವ ಕುರಿತಂತೆ ಸಮಾಜದ ಪ್ರಮುಖರು ಅಭಿಪ್ರಾಯ ನೀಡಿದ್ದರು. ಇದೀಗ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಮತ್ತೂಂದು ಸುತ್ತಿನ ಸಭೆ ನಡೆಸಲು ಮುಂದಾಗಿದೆ. ಇದರಲ್ಲಿ ಪ್ರಮುಖ ವಿಷಯಗಳು ಚರ್ಚೆಗೆ ಬರುವ ಸಾಧ್ಯತೆ ಇದ್ದು, ಭವನದ ನಿರ್ವಹಣೆ, ಆದಾಯ ಹಂಚಿಕೆ, ಭವನ ಹಸ್ತಾಂತರ ಮುಂತಾದ ವಿಚಾರಗಳ ಬಗ್ಗೆ ಮಾತುಕತೆ ನಡೆಯಲಿವೆ.

ಭವನಕ್ಕೆ ಸೋಲಾರ್‌ ರೂಫ್‌ಟಾಪ್‌

ಭವನದಲ್ಲಿ ಸದ್ಯ ತಿಂಗಳಿಗೆ ಸುಮಾರು 42,000 ರೂ. ವಿದ್ಯುತ್‌ ಬಿಲ್‌ ಬರುತ್ತಿದ್ದು, ಭವನಕ್ಕೆ ಇನ್ನಿತರ ಕಚೇರಿ ಸ್ಥಳಾಂತರ ಸಹಿತ ಸಮಾರಂಭಗಳಿಗೆ ವಿದ್ಯುತ್‌ ಉಪಯೋಗಿಸಿದ್ದಲ್ಲಿ ತಿಂಗಳಿಗೆ ಸುಮಾರು 1 ಲಕ್ಷ ರೂ.ನಿಂದ 1.5 ಲಕ್ಷ ರೂ.ವರೆಗೆ ವಿದ್ಯುತ್‌ ಶುಲ್ಕ ತಗಲುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಿದ್ಯುತ್‌ ದರ ತಗ್ಗಿಸಲು ಸೋಲಾರ್‌ ರೂಫ್‌ಟಾಪ್‌ ಅಳವಡಿಕೆಗೆ ಚಿಂತನೆ ನಡೆಸಲಾಗುತ್ತಿದೆ. ಸ್ಮಾರ್ಟ್‌ಸಿಟಿಗೆ ಪತ್ರ ಬರೆಯಲಾಗಿದೆ.

ಸದ್ಯದಲೇ ಅಂತಿಮ ನಿರ್ಧಾರ

ಕೆಲವು ತಿಂಗಳ ಹಿಂದೆ ಉದ್ಘಾಟನೆಗೊಂಡ ಅಂಬೇಡ್ಕರ್‌ ಭವನ ನಿರ್ವಹಣೆ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯು ಪಾಲಿಕೆಯನ್ನು ಕೇಳಿಕೊಂಡಿದೆ. ಪಾಲಿಕೆಯಲ್ಲಿ ನಡೆದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯಲ್ಲಿ ಈ ಪ್ರಸ್ತಾಪ ಬಂದಿದೆ. ಈ ಕುರಿತು ಸದ್ಯದಲ್ಲೇ ಪಾಲಿಕೆಯು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಜತೆ ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು. -ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಚರ್ಚೆ ನಡೆಸಲಾಗಿದೆ

ಅಂಬೇಡ್ಕರ್‌ ಭವನ ನಿರ್ವಹಣೆಯನ್ನು ಮನಪಾಗೆ ನೀಡಬೇಕು ಎಂಬ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ಈ ಹಿಂದೆ ನಡೆದ ಸಭೆಯಲ್ಲಿ ಈ ಕುರಿತು ಅಭಿಪ್ರಾಯ ವ್ಯಕ್ತವಾಗಿದೆ. ಪಾಲಿಕೆಯಲ್ಲಿ ಪ್ರತ್ಯೇಕ ಎಂಜಿನಿಯರಿಂಗ್‌ ವಿಭಾಗ ಇದ್ದು, ತೆರಿಗೆ ಸಹಿತ ಇತರ ಮೂಲದಿಂದ ಅನುದಾನ ಹೊಂದಿಸಬಹುದು. ಸಾಮಾನ್ಯವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಭವನ ನಿರ್ಮಾಣ ಮಾಡಲಾಗುತ್ತದೆ. ಖರ್ಚು-ವೆಚ್ಚದಲ್ಲಿ ಅನುದಾನದ ಕೊರತೆ ಇರುತ್ತದೆ. ಭವನಕ್ಕೆ ಬಾಡಿಗೆ ನಿಗದಿಪಡಿಸುವ ನಿಟ್ಟಿನಲ್ಲಿ ಮುಂದಿನ ಹಂತದಲ್ಲಿ ತೀರ್ಮಾನಿಸಲಾಗುತ್ತದೆ. -ಸಿದ್ದಲಿಂಗೇಶ ಬೇವಿನಮಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.