ದನ ಸಾಗಾಟ ಶಂಕೆಯಲ್ಲಿ ಮಾವಿನ ಹಣ್ಣಿನ ವಾಹನ ತಡೆದು ಹಲ್ಲೆ: ಓರ್ವ ಆಸ್ಪತ್ರೆಗೆ ದಾಖಲು


Team Udayavani, Jul 8, 2019, 9:49 AM IST

assaul

ಮಂಗಳೂರು: ಜಾನುವಾರು ಸಾಗಿಸಲಾಗುತ್ತಿದೆ ಎಂದು ತಪ್ಪಾಗಿ ಭಾವಿಸಿ ಮಾವಿನ ಹಣ್ಣು ಸಾಗಾಟದ ವಾಹನವನ್ನು ತಡೆದು, ಅದರಲ್ಲಿದ್ದವರಿಗೆ ಹಲ್ಲೆ ನಡೆಸಿದ ಘಟನೆ ನಗರದ ಕುಲಶೇಖರ ಚೌಕಿ ಬಳಿ ರವಿವಾರ ಮುಂಜಾನೆ ಸಂಭವಿಸಿದೆ.

ಗಾಯಗೊಂಡ ಉಮರ್‌ ಫಾರೂಕ್‌ (35) ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ
ರವಿವಾರ ಮುಂಜಾನೆ 4 ಗಂಟೆಗೆ ಉಮರ್‌ ಫಾರೂಕ್‌, ಅಶಕ್‌ ಮತ್ತು ಲತೀಫ್‌ ಅವರು 407 ಟೆಂಪೋದಲ್ಲಿ ಮಾವಿನ ಹಣ್ಣಿನ ಬಾಕ್ಸ್‌ಗಳನ್ನು ತುಂಬಿಸಿ ಉಳಾಯಿಬೆಟ್ಟಿನಿಂದ ಮಂಗಳೂರು ಮಾರ್ಕೆಟ್‌ ಕಡೆಗೆ ತೆರಳುತ್ತಿದ್ದರು. ಆಗ ಮೂವರು ದುಷ್ಕರ್ಮಿಗಳು ಅಕ್ರಮವಾಗಿ ದನ ಸಾಗಿಸುತ್ತಿದ್ದಾರೆಂದು ಶಂಕಿಸಿ ವಾಹನವನ್ನು ಬೆನ್ನಟ್ಟಿದ್ದರು. ವಾಹನದಲ್ಲಿದ್ದವರು ಮಾವಿನ ಹಣ್ಣು ಎಂದು ಹೇಳಿದರೂ ಕೇಳದೆ ವಾಹನಕ್ಕೆ ತಡೆ ಒಡ್ಡಿದ್ದರು. ಈ ಸಂದರ್ಭ ಚಾಲಕ ಸಹಿತ ಇಬ್ಬರು ಟೆಂಪೋವನ್ನು ಕುಲಶೇಖರ ಚೌಕಿ ಬಳಿ ನಿಲ್ಲಿಸಿ ಓಡಿ ಹೋಗಿದ್ದು, ಟೆಂಪೋದಲ್ಲಿದ್ದ ಫಾರೂಕ್‌ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದರು. ಅಲ್ಲದೆ 70,000 ರೂ. ಅನ್ನು ದರೋಡೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಟೆಂಪೋ ಕೊಂಡೊಯ್ದರು
ಹಲ್ಲೆಯ ಬಳಿಕ ದುಷ್ಕರ್ಮಿಗಳು 407 ಟೆಂಪೋವನ್ನು ಕುಲಶೇಖರ ಚೌಕಿಯಿಂದ ಕುಲಶೇಖರ ಚರ್ಚ್‌ ಸಮೀಪ ಕೊಂಡೊಯ್ದು ನಿಲ್ಲಿಸಿದ್ದಾರೆ. ಟೆಂಪೋದಲ್ಲಿ ಮಾವಿನ ಹಣ್ಣು ಕೊಂಡೊಯ್ಯುತ್ತಿದ್ದವರ ಮೊಬೈಲ್‌ ದೊರಕಿದೆ.

ಆರೋಪಿಗಳಿಗೆ ಶೋಧ
ಹಲ್ಲೆ ನಡೆಸಿದವರು ಯಾರೆಂದು ತಿಳಿದು ಬಂದಿಲ್ಲ. ಸಿಸಿಕೆಮರಾದಲ್ಲಿ ಚಹರೆ ಪತ್ತೆಯಾಗಿದ್ದು, ಅವರಿಗೆ ಶೋಧ ನಡೆಯುತ್ತಿದೆ.

ಜನ ಜಮಾಯಿಸಿದರು
ಮಾವಿನ ಹಣ್ಣು ಕೊಂಡೊಯ್ಯುತ್ತಿದ್ದವರ ಮೇಲೆ ಹಲ್ಲೆ ನಡೆಸಿದ ಸುದ್ದಿ ತಿಳಿಯುತ್ತಿದ್ದಂತೆ ಕುಲಶೇಖರ ಚೌಕಿ ಬಳಿ ಜನ ಜಮಾಯಿಸಿದ್ದರು. ಆದರೆ ಪೊಲೀಸರು ಎಲ್ಲರನ್ನು ತೆರಳುವಂತೆ ಸೂಚಿಸಿದರು. ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.