ಬೈಕಂಪಾಡಿ ಕೈಗಾರಿಕೆ ಟೌನ್‌ಶಿಪ್‌ ಪ್ರಾಧಿಕಾರಕ್ಕೆ “ನಿಯಮ’ವೇ ಅಡ್ಡಿ!


Team Udayavani, Apr 11, 2024, 2:20 PM IST

ಬೈಕಂಪಾಡಿ ಕೈಗಾರಿಕೆ ಟೌನ್‌ಶಿಪ್‌ ಪ್ರಾಧಿಕಾರಕ್ಕೆ “ನಿಯಮ’ವೇ ಅಡ್ಡಿ!

ಮಹಾನಗರ: ನಿರ್ಲಕ್ಷ್ಯಕ್ಕೆ ಒಳಗಾಗಿರುವ ಬೈಕಂಪಾಡಿ ಕೈಗಾರಿಕೆ ವಲಯದ ಅಭಿವೃದ್ಧಿಗೆ ಮರು ಜೀವ ನೀಡಬಹುದಾದ “ಬೈಕಂಪಾಡಿ ಕೈಗಾರಿಕೆ ಟೌನ್‌ಶಿಪ್‌ ಪ್ರಾಧಿಕಾರ’ ರಚನೆಗೆ  ಸರಕಾರದ ನಿಯಮಾವಳಿಯೇ ಈಗ ಅಡ್ಡಿಯಾಗಿದೆ!

ಟೌನ್‌ಶಿಪ್‌ ಪ್ರಾಧಿಕಾರ ರಚನೆಗೆ ಸರಕಾರ ಈ ಹಿಂದೆಯೇ ನಿರ್ಧರಿಸಿ ಈ ಕುರಿತ ಸಿದ್ಧತೆ ನಡೆಸಿತ್ತು. ಆದರೆ ಬಳಿಕ ಹೊಸದಾಗಿ ಕೈಗಾರಿಕೆ ನಿಯಮಾವಳಿ ರೂಪಿಸಿದ ಸಂದರ್ಭ ಇದಕ್ಕೆ ವಿಘ್ನ ಎದುರಾಯಿತು.

ಸರಕಾರದ ಹೊಸ ನಿಯಮಾವಳಿ ಪ್ರಕಾರ ಈಗ ಇರುವ ಕೈಗಾರಿಕೆ ಪ್ರದೇಶವು 1 ಸಾವಿರ ಎಕ್ರೆ ಹೊಂದಿದ್ದರೆ ಮಾತ್ರ
ಅದನ್ನು ಕೈಗಾರಿಕೆ ಟೌನ್‌ಶಿಪ್‌ ಪ್ರಾಧಿಕಾರ ಮಾಡಲಾಗುತ್ತದೆ. ಅದಕ್ಕಿಂತ ಕಡಿಮೆ ವಿಸ್ತಾರ  ಹೊಂದಿದ್ದರೆ ಪ್ರಾಧಿಕಾರ ಮಾಡಲು
ಆಗುವುದಿಲ್ಲ. ಸದ್ಯ ಬೈಕಂಪಾಡಿ ಕೈಗಾರಿಕೆ ಪ್ರದೇಶವು ಕಡಿಮೆ ವ್ಯಾಪ್ತಿ ಹೊಂದಿರುವುದರಿಂದ ಪ್ರಾಧಿಕಾರ ರಚನೆಗೆ ಅಡ್ಡಿಯಾಗಿದೆ.

ತೆರಿಗೆ ಬೇಕು-ಅಭಿವೃದ್ಧಿ ಇಲ್ಲ!
ಸುಮಾರು 50 ವರ್ಷಗಳ ಹಿಂದೆ ಸ್ಥಾಪನೆಯಾದ ಬೈಕಂಪಾಡಿ ಕೈಗಾರಿಕೆ ವ್ಯಾಪ್ತಿ ಕೆಐಎಡಿಬಿ ವ್ಯಾಪ್ತಿಗೆ ಬರುತ್ತದೆ. ಆದರೆ ಕೆಐಎಡಿಬಿ ಈ ಪ್ರದೇಶವನ್ನು ಅಭಿವೃದ್ಧಿ ಮಾಡುತ್ತಿಲ್ಲ. ಕೆಐಎಡಿಬಿಗೆ ಸರಕಾರದಿಂದ ಸೂಕ್ತ ಅನುದಾನ ಬಿಡುಗಡೆ ಆಗದ ಕಾರಣ ನಿರ್ವಹಣೆ ಧ್ಯವಾಗುತ್ತಿಲ್ಲ . ಇದೇ ವೇಳೆ ಪಾಲಿಕೆ ಅಥವಾ ಸ್ಥಳೀಯ ಸಂಸ್ಥೆಗಳು ತೆರಿಗೆ ಸಂಗ್ರಹ ಮಾಡುತ್ತಿವೆಯೇ
ವಿನಃ ಅಭಿವೃದ್ಧಿ ಮಾಡಲು ಆಸಕ್ತಿ
ತೋರುತ್ತಿರಲಿಲ್ಲ.

ಪ್ರಾಧಿಕಾರ ಯಾಕಾಗಿ?
ಇಂಡಸ್ಟ್ರಿಯಲ್‌ ಟೌನ್‌ ಶಿಪ್‌ ಪ್ರಾಧಿಕಾರ ಸ್ಥಾಪನೆ ಆದಲ್ಲಿ ಕೈಗಾರಿಕೆ ವಲಯದ ಸಮಗ್ರ ಅಭಿವೃದ್ಧಿ ಇದರ ವ್ಯಾಪ್ತಿಗೆ ಬರಲಿದೆ. ರಸ್ತೆ, ವಿದ್ಯುತ್‌, ಕುಡಿಯುವ ನೀರು, ಒಳಚರಂಡಿ ಸೇರಿ ಎಲ್ಲ ಅಭಿವೃದ್ಧಿಗಳನ್ನು ಈ ಪ್ರಾಧಿಕಾರವೇ ನಿರ್ವಹಿಸಬೇಕು. ಈ ಕಾರಣದಿಂದ ಕೈಗಾರಿಕೆ ವಲಯದ ವ್ಯಾಪ್ತಿಯ ಎಲ್ಲ ಸಂಸ್ಥೆಗಳ ತೆರಿಗೆಗಳು ಇದರ ವ್ಯಾಪ್ತಿಗೆ ಬರಲಿದೆ. ಇದರಲ್ಲಿ ಪಾಲಿಕೆ ಅಥವಾ ಸ್ಥಳೀಯ ಸಂಸ್ಥೆಗಳಿಗೆ ಶೇ.30ರಷ್ಟು ತೆರಿಗೆಯನ್ನು ಮಾತ್ರ ಪ್ರಾಧಿಕಾರ
ನೀಡಬೇಕಾಗುತ್ತದೆ.

500 ಎಕ್ರೆ ಪರಿಗಣಿಸಲು ಆಗ್ರಹ
1,000 ಎಕ್ರೆ ವ್ಯಾಪ್ತಿಯ ನಿಯಮ ಕೈಬಿಟ್ಟು 500 ಎಕ್ರೆ ವ್ಯಾಪ್ತಿಯ ಕೈಗಾರಿಕೆ ಪ್ರದೇಶವನ್ನು ಸರಕಾರ ಟೌನ್‌ಶಿಪ್‌ ಪ್ರಾಧಿಕಾರ ರಚಿಸುವಂತೆ ಆಗ್ರಹಿಸಿ ಈಗಾಗಲೇ ಸರಕಾರದ ಗಮನ ಸೆಳೆಯಲಾಗಿದೆ. ಪ್ರಾಧಿಕಾರ ರಚನೆಯಾದರೆ ಬೈಕಂಪಾಡಿ ಕೈಗಾರಿಕೆ ಪ್ರದೇಶದಲ್ಲಿ ವಿವಿಧ ರೀತಿಯ ಮೂಲ ವ್ಯವಸ್ಥೆಗಳು ಸುಧಾರಣೆಗೊಳ್ಳಲಿದೆ. ಈ ನಿಟ್ಟಿನಲ್ಲಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. – ಅರುಣ್‌ ಪಡಿಯಾರ್‌, ಅಧ್ಯಕ್ಷರು ಬೈಕಂಪಾಡಿ ಕೆನರಾ ಸಣ್ಣ ಕೈಗಾರಿಕೆಗಳ ಸಂಘ

*ದಿನೇಶ್‌ ಇರಾ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.