Baikampady ಜಂಕ್ಷನ್ ರಸ್ತೆಗೆ ಗುಣವಾಗದ ಕಾಯಿಲೆ!
ಹೊಂಡಗುಂಡಿಗಳಿಂದಾಗಿ ಹೈರಾಣು; ಲಾರಿಗಳ ಭಾರಕ್ಕೆ ಇಂಟರ್ಲಾಕ್ ನಾಶ
Team Udayavani, Sep 13, 2024, 3:14 PM IST
ಬೈಕಂಪಾಡಿ: ಇಲ್ಲಿನ ಕೈಗಾರಿಕಾ ಪ್ರದೇಶಕ್ಕೆ ಹೋಗುವ ರಸ್ತೆ ತೀರಾ ಹದೆಗೆಟ್ಟಿದ್ದು ಕೈಗಾರಿಕಾ ವಲಯಕ್ಕೆ ಪ್ರವೇಶ ಪಡೆಯುವ ಟ್ರಕ್, ಕಂಟೈನರ್ ಸಹಿತ ಘನ ವಾಹನಗಳ ಓಡಾಟಕ್ಕೆ ಸಮಸ್ಯೆಯಾಗಿದೆ. ಸರಿಸುಮಾರು 30 ಸಾವಿರ ಕಾರ್ಮಿಕರು ದಿನನಿತ್ಯ ಸಂಚರಿಸುವ ಪ್ರಮುಖ ರಸ್ತೆ ಇದಾಗಿದೆ.
ಸಾವಿರಾರು ದ್ವಿಚಕ್ರ ವಾಹನ, ಜೋಕಟ್ಟೆಗೆ ಹೋಗುವ ಬಸ್ ಸಹಿತ ಇತರ ವಾಹನಗಳು ಇಲ್ಲಿ ಸಂಚರಿಸುತ್ತಿದ್ದು, ಹೊಂಡಗುಂಡಿಗಳಿಂದಾಗಿ ‘ಅಯ್ಯೋ ಯಾಕಾದರೂ ಇಲ್ಲಿಂದ ಹೋಗುವ ದುಃಸ್ಥಿತಿ ನಮಗೆ ಬಂತೋ?’ ಎಂದು ಸವಾರರು ಹಳಹಳಿಸುವಂತಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)ದ ಅಧೀನದಲ್ಲಿದ್ದರೂ ಅಭಿವೃದ್ಧಿಗಾಗಿ ಭೂ ಸ್ವಾಧೀನವನ್ನು ಕೇಂದ್ರ ಸರಕಾರ ಮಾಡಿಕೊಡಬೇಕಾಗಿದೆ. ಈ ಕಾರಣದಿಂದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮತ್ತು ಸ್ಥಳೀಯ ಪಾಲಿಕೆ ಈ ಸಮಸ್ಯೆ ನಮ್ಮ ವ್ಯಾಪ್ತಿಗೆ ಸೇರಿದ್ದಲ್ಲ ಎಂದು ಕಣ್ಮುಚ್ಚಿ ಕುಳಿತಿವೆ. ಈ ಹಿಂದೆ ಬೃಹತ್ ಹೊಂಡವಾದಾಗ ಇಂಟರ್ ಲಾಕ್ ಹಾಕಲಾಗಿತ್ತು. ಘನ ವಾಹನಗಳ ಭಾರಕ್ಕೆ ಅವು ನಾಶವಾಗಿವೆ.
ಪ್ರಮುಖ ಕೈಗಾರಿಕಾ ಪ್ರದೇಶ ಇದಾಗಿರುವುದರಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ವ್ಯವಹಾರಗಳ ಒಟ್ಟಾರೆ ಉತ್ಪಾದಕತೆ ಮತ್ತು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ತತ್ಕ್ಷಣವೇ ಬೈಕಂಪಾಡಿ ಜಂಕ್ಷನ್ ರಸ್ತೆಯ ದುರಸ್ತಿಗೆ ಕ್ರಮ ಜರಗಿಸಬೇಕು ಎಂದು ಕೆನರಾ ಕೈಗಾರಿಕಾ ಸಂಘ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.