Baikampady: ಮೊಗವೀರ ಮಹಾಸಭಾದಿಂದ ಬೈಕಂಪಾಡಿ ಶಾಲೆಗೆ ಹೊಸ ರೂಪ!

120 ವರ್ಷದ ಹಳೆಯ ಶಾಲೆಯಲ್ಲಿ 450 ಮಕ್ಕಳು: ಮರೈನ್‌ ಐಟಿಐ ಶಿಕ್ಷಣ ಸ್ಥಾಪಿಸಲು ಚಿಂತನೆ

Team Udayavani, Sep 10, 2024, 3:18 PM IST

Baikampady: ಮೊಗವೀರ ಮಹಾಸಭಾದಿಂದ ಬೈಕಂಪಾಡಿ ಶಾಲೆಗೆ ಹೊಸ ರೂಪ!

ಬೈಕಂಪಾಡಿ: ಕನ್ನಡ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿರುವ ಸಂದರ್ಭ ಕನ್ನಡ ಶಾಲೆ ಉಳಿಸಲು ಹಲವು ಕಸರತ್ತುಗಳು ನಡೆಯುತ್ತಿವೆ. ಅದೇ ರೀತಿ 120 ವರ್ಷಗಳ ಇತಿಹಾಸವಿರುವ ಬೈಕಂಪಾಡಿ ದ.ಕ. ಹಿ.ಪ್ರಾ. ಶಾಲೆಯಲ್ಲಿ (ಮೀನುಗಾರಿಕ ಶಾಲೆ) 450 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಇದೀಗ ಹೊಸ ರೂಪ ನೀಡಲು ಬೈಕಂಪಾಡಿ ಮೊಗವೀರ ಮಹಾಸಭಾದ ನೇತೃತ್ವದಲ್ಲಿ ತಯಾರಿ ನಡೆದಿದೆ.

ಬ್ರಿಟೀಷರ ಆಡಳಿತ ಕಾಲದಲ್ಲಿ ಮೊದಲ ಬಾರಿಗೆ ಬೈಕಂಪಾಡಿ ಮೊಗವೀರ ಮಹಾ ಸಭಾದ ಹಿರಿಯರು ಸೇರಿ ಊರಿಗೊಂದು ಶಾಲೆ ನಿರ್ಮಿಸುವ ಐತಿಹಾಸಿಕ ನಿರ್ಧಾರ ಕೈಗೊಂಡು ಇಂದಿಗೆ ಇತಿಹಾಸದ ಪುಟದಲ್ಲಿ ದಾಖಲಾಗಿದೆ. ಇಲ್ಲಿನ ಹತ್ತಾರು ಗ್ರಾಮಕ್ಕೆ ಇದುವೇ ಶಿಕ್ಷಣದ ಏಕೈಕ ಮೂಲವಾಗಿತ್ತು. ದೂರದ ಜೋಕಟ್ಟೆಯಿಂದ ಹಿಡಿದು ಮೈಲುಗಟ್ಟಲೆ ದೂರದಿಂದ ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಬಂದು, ಈ ಶಾಲೆಯಲ್ಲಿ ಕಲಿತ ಮಕ್ಕಳು ಇಂದು ದೇಶದ, ವಿದೇಶದಲ್ಲಿ ಉತ್ತಮ ಸ್ಥಾನದಲ್ಲಿದ್ದಾರೆ.

ಸ್ಥಳೀಯ ಎನ್‌ಎಂಪಿಎ ಸಹಿತ ವಿವಿಧ ಕಂಪೆನಿಗಳ ಸಿಎಸ್‌ಆರ್‌ ನೆರವಿನೊಂದಿಗೆ ಮೂರು ಕೋಟಿ ರೂ.ವೆಚ್ಚದಲ್ಲಿ ಹಳೆಯ ಕಟ್ಟಡವನ್ನು ಇದೀಗ ಹೊಸ ಕಟ್ಟಡವಾಗಿ ನಿರ್ಮಾಣ ಮಾಡಲಾಗುತ್ತಿದೆ, ಕಾಮಗಾರಿ ಯನ್ನು ಒಂದೂವರೆ ವರ್ಷದಲ್ಲಿ ಪೂರ್ಣ ಗೊಳಿಸಲು ನಿರ್ಧರಿಸಲಾಗಿದೆ.

ಉತ್ತಮ ಶಿಕ್ಷಣದಿಂದ ಮಕ್ಕಳ ಸಂಖ್ಯೆಯೂ ಇದೆ. 1ರಿಂದ 7ನೇ ತರಗತಿ ವರೆಗೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತಿದ್ದು, ಇದರಲ್ಲಿ ಶೇ 90ರಷ್ಟು ವಲಸೆ ಕಾರ್ಮಿಕರ ಮಕ್ಕಳಿದ್ದಾರೆ.

ಮೆರೈನ್‌ ಐಟಿಐ ಕೌಶಲ ಶಿಕ್ಷಣಕ್ಕೆ ಚಿಂತನೆ
ಕರಾವಳಿಯಲ್ಲಿ ಮೀನುಗಾರಿಕೆ ದೊಡ್ಡ ಉದ್ಯಮವಾಗಿದ್ದು, ಮೊಗವೀರ
ಸಮುದಾಯವೂ ಸಾಕಷ್ಟು ಸಂಖ್ಯೆ ಯಲ್ಲಿದೆ. ಹೀಗಾಗಿ ಯುವ ಮೊಗವೀರ ಯುವಕರ ಅನುಕೂಲಕ್ಕಾಗಿ, ಮೀನು ಗಾರಿಕೆಯಲ್ಲಿ ಮತ್ತಷ್ಟು ಪರಿಣತಿ ಪಡೆಯಲು ಮೆರೈನ್‌ ಐಟಿಐ ಸ್ಥಾಪನೆಯ ಚಿಂತನೆ ನಡೆದಿದೆ.

ಐತಿಹಾಸಿಕ ಶಾಲೆ ಉಳಿಯಬೇಕು
ಬೈಕಂಪಾಡಿ ಮೊಗವೀರ ಮಹಾಸಭಾದ ಆಶ್ರಯದಲ್ಲಿ ಈ ಶಾಲೆಯಿದ್ದು, ಕಟ್ಟಡ ಹಳೆಯದಾಗಿದೆ. ಎನ್‌ಎಂಪಿಎ ಹಾಗೂ ಸ್ಥಳೀಯ ಕಂಪೆನಿಗಳಲ್ಲಿ ಮಾತುಕತೆ ನಡೆಸಲಾಗಿದ್ದು, ಸಿಎಸ್‌ಆರ್‌ ನಿಧಿಯಿಂದ 3 ಕೋ.ರೂ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ಗುರಿ ಹೊಂದಲಾಗಿದೆ. ಇದಕ್ಕೆ ಗ್ರಾಮದವರು ಸರ್ವ ಸಹಕಾರವನ್ನು ನೀಡುತ್ತಾ ಬಂದಿದ್ದಾರೆ. ಐತಿಹಾಸಿಕ ಶಾಲೆ ಉಳಿಯಬೇಕು ಎಂಬುದು ನಮ್ಮ ಇಚ್ಛೆಯಾಗಿದೆ. ಜತೆಗೆ ಕೌಶಲಾಧಾರಿತ ಮೆರೈನ್‌ ಐಟಿಐ ಸ್ಥಾಪನೆಯ ಕನಸನ್ನು ನನಸಾಗಿಸಲು ಚಿಂತನೆ ನಡೆಸಿದ್ದೇವೆ. -ರಾಮಚಂದ್ರ ಬೈಕಂಪಾಡಿ, ಚೇರ್ಮನ್‌ ಕಟ್ಟಡ ನಿರ್ಮಾಣ ಸಮಿತಿ, ಬೈಕಂಪಾಡಿ ಮೊಗವೀರ ಮಹಾಸಭಾ

ಕೇಂದ್ರದ ಕೌಶಲ್ಯಾಭಿವೃದ್ಧಿ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಕೇಂದ್ರದ ಮಾನ್ಯತೆ ಪಡೆಯಲು ಪ್ರಾಥಮಿಕ ಹಂತದ ಮಾತುಕತೆ ನಡೆಸಲು ಉದ್ದೇಶಿಸಲಾಗಿದೆ. ಶಾಲೆಯಲ್ಲಿ ಬೇಕಾದ ಸೌಲಭ್ಯ ಅಳವಡಿಸಿ ಸಮೀಪದಲ್ಲೇ ಪ್ರತ್ಯೇಕ ಕಟ್ಟಡದಲ್ಲಿ ಐಟಿಐ ಮಾಡುವ ಯೋಜನೆ ರೂಪಿಸಲಾಗಿದೆ

ಇಂದು ಶಿಲಾನ್ಯಾಸ: ಸೆ. 10ರಂದು ಶಾಲೆಯ ಹೊಸ ಕಟ್ಟಡಕ್ಕೆ ಶಿಲಾನ್ಯಾಸ, ಸಭೆಯಿದ್ದು, ಸಂಸದ ಬ್ರಿಜೇಶ್‌ ಚೌಟ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌, ಎನ್‌ ಎಂಪಿಎ ಚೇರ್ಮನ್‌ ಡಾ| ಎ.ವಿ. ರಮಣ, ಶಾಸಕ ಡಾ| ಭರತ್‌ ಶೆಟ್ಟಿ ವೈ. ಮತ್ತಿತರರು ಪಾಲ್ಗೊಳ್ಳಲಿದ್ದು, ಸಭಾ ಅಧ್ಯಕ್ಷ ವಸಂತ ಅಮೀನ್‌ ಅಧ್ಯಕ್ಷತೆ ವಹಿಸಲಿದ್ದಾರೆ.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.