ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು


Team Udayavani, Jul 1, 2024, 1:34 PM IST

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

ಬಜಪೆ: ಬಜಪೆ- ಮಂಗಳೂರು ರಾಜ್ಯ ಹೆದ್ದಾರಿ 67ರಲ್ಲಿ ಕೆಂಜಾರು ವಿಮಾನ ನಿಲ್ದಾಣದಿಂದ ಮರವೂರು ಸೇತುವೆಯಾಗಿ ಮಂಗಳೂರು ಮಹಾನಗರ ಪಾಲಿಕೆಯ ಸ್ವಾಗತದ್ವಾರದ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆದಿದೆ. ಹೊಸ ಸೇತುವೆಯೂ ನಿರ್ಮಾಣವಾಗಿದೆ. ಆದರೆ ಮಂಗಳೂರಿನಿಂದ ವಿಮಾನ ನಿಲ್ದಾಣದ ಕಡೆಗೆ ಬರುವ ವಾಹನಗಳಿಗೆ ಮರಕಡದಲ್ಲಿ ರಾಜ್ಯ ಹೆದ್ದಾರಿ 67ರ ಪಾಲಿಕೆಯ ಸ್ವಾಗತ ದ್ವಾರದ ಬಳಿ ಮುಂದಕ್ಕೆ ಯಾವ ರಸ್ತೆ ಬಳಸಬೇಕು ಎಂಬ ಗೊಂದಲದಿಂದ  ಅಪಘಾತಕ್ಕೆ
ಕಾರಣವಾಗುತ್ತಿದೆ.

ಇಲ್ಲಿ ಹಾದಿಯನ್ನು ಸೂಚಿಸುವ ಸೂಚನ ಫಲಕ ಇಲ್ಲದಿರುವುದು ಇದಕ್ಕೆ ಮುಖ್ಯ ಕಾರಣವಾಗಿದೆ. ಮರಕಡದಿಂದ ಪಾಲಿಕೆಯ ಸ್ವಾಗತ ದ್ವಾರದ ಬಳಿಕ ಏಕಮುಖ ರಸ್ತೆಯಾಗಿದೆ. ಪಾಲಿಕೆಯ ಸ್ವಾಗತ ದ್ವಾರದಿಂದ ಕೆಂಜಾರು ವಿಮಾನ ನಿಲ್ದಾಣ ತನಕ ದ್ವಿಪಥ ರಸ್ತೆಯಾಗಿದೆ. ಇಲ್ಲಿಯ ತನಕ ಮಂಗಳೂರು ಪಾಲಿಕೆಯ ವ್ಯಾಪ್ತಿ ಇದೆ.

ಮರಕಡದಿಂದ ಸ್ವಾಗತ ದ್ವಾರದ ತನಕ ಏಕಮುಖ ರಸ್ತೆಯಲ್ಲಿ ಬಂದ ವಾಹನಗಳಿಗೆ ಹೊಸ ಸೇತುವೆ ಇರುವ ರಸ್ತೆ ಕಾಣುತ್ತಿಲ್ಲ. ಇದರಿಂದ ಅವರು ಹಳೆಯ ಸೇತುವೆಯ ರಸ್ತೆಯಲ್ಲಿ ನೇರವಾಗಿ ಬರುತ್ತಿರುವುದು ಅಪಘಾತಕ್ಕೆ ಕಾರಣವಾಗಿದೆ.

ದಿನ ನಿತ್ಯ ಪ್ರಯಾಣಿಸುವವರಿಗಿಂತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ವಾಹನಗಳೇ ಹೆಚ್ಚು ಇಲ್ಲಿ
ಸಂಚಾರ ಮಾಡುವುದರಿಂದ ಈ ರಸ್ತೆಯ ಬಗ್ಗೆ ಹೆಚ್ಚು ಮಾಹಿತಿ ಇರುವುದಿಲ್ಲ.

ವಿಮಾನ ನಿಲ್ದಾಣದಿಂದ ಹಾಗೂ ಬಜಪೆ ಕಡೆಯಿಂದ ಬರುವ ವಾಹನಗಳು ಮರವೂರು ಹಳೆ ಸೇತುವೆಯಲ್ಲಿ ನೇರವಾಗಿ ಬರುತ್ತದೆ. ಮರಕಡದಿಂದ ಬರುವ ವಾಹನಗಳು ಕೂಡ ದ್ವಾರದ ಬಳಿಕ ಎಡಕ್ಕೆ ಹೊಸ ಸೇತುವೆಯ ರಸ್ತೆಯಲ್ಲಿ ಚಲಿಸದೇ ನೇರವಾಗಿ ಹಳೆ ಸೇತುವೆ ಯಲ್ಲಿ ಸಂಚಾರ ಮಾಡಿದರೆ, ಅದು ವಾಹನಗಳು ನೇರನೇರ ಢಿಕ್ಕಿ ಹೊಡೆಯಲು ಕಾರಣವಾಗುತ್ತದೆ. ಮರಕಡದಿಂದ ನಿಲ್ದಾಣಕ್ಕೆ ಬರುವ ವಾಹನಗಳು ಈಗಲೂ ಹಳೆ ಸೇತುವೆಯಲ್ಲಿಯೇ ಬರುತ್ತಿದ್ದು, ಅಪಘಾತಕ್ಕೆ ಕಾರಣವಾಗಬಹುದು.

ಸೂಚನ ಫಲಕ ಅಗತ್ಯ
ಪಾಲಿಕೆಯ ದ್ವಾರದ ಬಳಿ ಯಾವ ಕಡೆಗೆ ತಿರುಗಬೇಕು ಎಂಬ ಸೂಚನ ಫಲಕ ಅಗತ್ಯವಾಗಿ ಬೇಕು. ಮಂಗಳೂರು, ಮರಕಡದಿಂದ ಬರುವ ವಾಹನಗಳಿಗೆ ಸಮರ್ಪಕವಾಗಿ ಕಾಣುವಂತೆ, ಮಳೆ ಬಂದರೂ, ರಾತ್ರಿಯಲ್ಲೂ ಕಾಣುವಂತೆ ಸೂಚನಾ ಫಲಕ ಹಾಕಬೇಕು.

ದ್ವಿಪಥ ರಸ್ತೆ ಕಾಮಗಾರಿ ಬಾಕಿ
ಮರಕಡದಿಂದ ಪಾಲಿಕೆಯ ಸ್ವಾಗತ ದ್ವಾರದ ಬಳಿ ತನಕ ದ್ವಿಪಥ ರಸ್ತೆ ಕಾಮಗಾರಿ ಮಾತ್ರ ಬಾಕಿ ಉಳಿದಿದ್ದು, ಇಲ್ಲಿ ವಾಹನ ಸಂಚಾರಕ್ಕೆ ಭಾರಿ ತೊಂದರೆಯಾಗಿದೆ. ಕಿರಿದಾದ ರಸ್ತೆ,ತಿರುವು, ಎರುಪೇರುಗಳಿಂದ ಕೂಡಿದೆ. ಉಳಿದ ದ್ವಿಪಥ ರಸ್ತೆ
ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕಾಗಿ ಸ್ಥಳೀ ಯರು ಆಗ್ರಹಿಸಿದ್ದಾರೆ. ಪ್ರತಿ ನಿತ್ಯ ವಾಹನಗಳು ಸದಾ ಸಾಲಾಗಿ ಸಾಗುತ್ತವೆ.

ಟಾಪ್ ನ್ಯೂಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ಉಪ್ಪಿನಂಗಡಿ: ಮುಗೇರಡ್ಕ ಬ್ಯಾರೇಜ್‌ ಸೇತುವೆ ಶೀಘ್ರ ಪೂರ್ಣ

ಉಪ್ಪಿನಂಗಡಿ: ಮುಗೇರಡ್ಕ ಬ್ಯಾರೇಜ್‌ ಸೇತುವೆ ಶೀಘ್ರ ಪೂರ್ಣ

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

ಮಂಗಳೂರು: ಕ್ರೀಡಾ ಹಾಸ್ಟೆಲ್‌- ಲೆಕ್ಕಕ್ಕುಂಟು, ಆಟಕ್ಕಿಲ್ಲ !

ಮಂಗಳೂರು: ಕ್ರೀಡಾ ಹಾಸ್ಟೆಲ್‌- ಲೆಕ್ಕಕ್ಕುಂಟು, ಆಟಕ್ಕಿಲ್ಲ !

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

2-dandeli

Dandeli: ಅರಣ್ಯ ಪ್ರದೇಶದಲ್ಲಿ ಆನೆ ದಾಳಿ : ಓರ್ವನಿಗೆ ಗಾಯ, ಚಿಕಿತ್ಸೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.