Bajpe: ವೇಗ ಪಡೆಯಲಿ ರಸ್ತೆ ವಿಸ್ತರಣೆ ಕಾಮಗಾರಿ

ಮಳೆ ಬಂದಲ್ಲಿ ಅಂಗಡಿ, ಮನೆಯೊಳಗೆ ನೀರು ನುಗ್ಗುವ ಸಾಧ್ಯತೆ

Team Udayavani, May 17, 2023, 3:43 PM IST

Bajpe: ವೇಗ ಪಡೆಯಲಿ ರಸ್ತೆ ವಿಸ್ತರಣೆ ಕಾಮಗಾರಿ

ಬಜಪೆ: ಬಜಪೆ ಕಿನ್ನಿಪದವಿನಿಂದ ಪೇಟೆಯ ರಸ್ತೆ ವಿಸ್ತರಣೆ ಹಾಗೂ ಕಾಂಕ್ರೀಟ್‌ ಕಾಮಗಾರಿ ಆರಂಭವಾಗಿ ಸುಮಾರು 5ತಿಂಗಳು ಕಳೆದದ್ದು, ಆಮೆಗತಿಯಲ್ಲಿ ಈ ಕಾಮಗಾರಿಗಳು ಸಾಗುತ್ತಿವೆ.

ಒಂದು ಬದಿಯ ಕಾಂಕ್ರೀಟ್‌ ಕಾಮಗಾರಿಗಳು ಈಗಾಗಲೇ ಮುಗಿದಿವೆ. ಮಾರ್ಚ್‌, ಎಪ್ರಿಲ್‌ ತಿಂಗಳಲ್ಲಿ ಕಾಮಗಾರಿಗಳು ನಡೆಯದೇ ಈಗ ಪುನಃ ಆರಂಭವಾಗಿದೆ. ಇನ್ನೇನು ಮಳೆ ಆರಂಭ ವಾದಲ್ಲಿ ಮಳೆಯ ನೀರು ಹರಿದಾಡಲು ಚರಂಡಿಯೇ ಇಲ್ಲದೇ ಮನೆ, ಅಂಗಡಿಗಳಿಗೆ ಮಳೆಯ ನೀರು ನುಗ್ಗುವ ಸಾಧ್ಯತೆ ಇದೆ.

ಡಿಸೆಂಬರ್‌ ತಿಂಗಳಲ್ಲಿ ಈ ಕಾಮಗಾರಿ ಆರಂಭವಾಗಿತ್ತು. ಕಿನ್ನಿಪದವಿನಿಂದ ಶ್ರೀ ವಿಜಯ ವಿಟuಲ ಭಜನ ಮಂದಿರದವರೆಗೆ ಒಂದು ಬದಿಯ ಕಾಂಕ್ರೀಟ್‌ ಕಾಮ ಗಾ ರಿ, ಅಲ್ಲಿಂದ ಬಜಪೆ ಮಸೀದಿಯವರಿಗೆ ಎರಡು ಬದಿಯ ಕಾಂಕ್ರೀಟ್‌ಗೊಂಡಿದ್ದು ಅಲ್ಲಿಂದ ಬಜಪೆ ಹೊಸ ಪೆಟ್ರೋಲ್‌ ಪಂಪ್‌ನ ವರೆಗೆ ಒಂದು ಬದಿಯ ರಸ್ತೆ ಕಾಂಕ್ರೀಟ್‌ ಕಾಮಗಾರಿಗೊಂಡಿತ್ತು.

ಬಜಪೆ ಮಸೀದಿಯಿಂದ ಹೊಸ ಪೆಟ್ರೋಲ್‌ ಪಂಪ್‌ನವರಗೆ ಇನ್ನೊಂದು ಬದಿ ಅಗೆದು ಹಾಕಿದ್ದು ಇದರಿಂದ ಪ್ರದೇಶವಿಡೀ ಧೂಳುಮಯಗೊಂಡಿದೆ. ಲಘು ವಾಹನಗಳು ಇದರಲ್ಲಿ ಸಂಚಾರ ಮಾಡುತ್ತಿದ್ದು ಘನ ವಾಹನಗಳಿಗೆ ಪ್ರವೇಶ ನಿಷೇಧವಾಗಿತ್ತು. ವಾಹನಗಳು ಸಂಚಾರ ಮಾಡದಂತೆ ಅಡ್ಡ ಮಣ್ಣು ಹಾಗೂ ವಾಹನ ಸಂಚಾರ ನಿಷೇಧ ಫಲಕಗಳು ಹಾಕಲಾಗಿತ್ತು. ಇದನ್ನು ಲೆಕ್ಕಿಸದೇ ಕೆಲವು ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚಾರ ಮಾಡುತ್ತಿವೆ.
ವ್ಯಾಪಾರಕ್ಕೂ ತೊಂದರೆ ಇಲ್ಲ.

ಕೆಲವು ಅಂಗಡಿಗಳು ಮುಚ್ಚಿದ್ದ, ಜನರು ಬಾರದೇ ಹಾಗೂ ಧೂಳಿನಿಂದ ಕೆಲವು ಹೊಟೇಲ್‌ ಬೆಳಗ್ಗೆ ಮಾತ್ರ ತೆರೆಯುತ್ತಿದೆ. ಡಿಸೆಂಬರ್‌ನಿಂದ ಇಂದಿನವರಗೆ ವ್ಯಾಪಾರ ಇಲ್ಲದೇ ವ್ಯಾಪಾರಿಗಳು ಪರದಾಟ ಮಾಡುತ್ತಿದ್ದಾರೆ. ಕಾಮಗಾರಿಗಳನ್ನು ನಿಧಾನ ಗತಿಯಲ್ಲಿ ಸಾಗುತ್ತಿದ್ದು ಅದನ್ನು ಬೇಗೆ ಮುಗಿಸಿ, ಒಂದೆಡೆಯಿಂದ ಬಸ್‌ ಹಾಗೂ ವಾಹನಗಳಿಗೆ ಸಂಚಾರ ಮಾಡಲು ಅನುವು ಮಾಡಿಕೊಡಬೇಕು.

ಬಜಪೆ ಪೇಟೆಯಲ್ಲೂ ಜನ ಸಂಚಾರ ವಿರಳವಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ವೇಗ ಪಡೆಯಬೇಕು. ಅಭಿವೃದ್ಧಿಗೆ ವಿರೋಧವಿಲ್ಲ. ಅದರೆ ಕಾಮಗಾರಿ ನಿಧಾನವಾಗಿ ಮಾಡದೇ ಯಾರಿಗೂ ತೊಂದರೆಯಾಗದೇ ಗುತ್ತಿಗೆದಾರರು ನೋಡಿ ಕೊಳ್ಳಬೇಕು. ಇದಕ್ಕೆ ಸಾರ್ವಜನಿಕರ ಸಹಕಾರವೂ ಸಿಗಲಿದೆ.

ಚುನಾವಣೆ ಮುಗಿಯಿತು ಇನ್ನಾದರೂ ಕಾಮಗಾರಿಗೆ ವೇಗ ಪಡೆಯಲಿ. ಮಳೆ ಬರುವ ಮುಂಚೆ ರಸ್ತೆ ಜತೆ ಚರಂಡಿ ಕಾಮಗಾರಿಗಳು ನಡೆಯಲಿ.

ವಾಹನ ಸಂಚಾರ ನಿಷೇಧ
ಈ ಕಾಮಗಾರಿ ಕಳೆದ ಡಿಸೆಂಬರ್‌ನಲ್ಲಿ ಆರಂಭವಾಗಿತ್ತು. ಕೆಲವು ದ್ವಿಚಕ್ರ, ಲಘು ವಾಹನಗಳು ಬಜಪೆ ಪಟ್ಟಣ ಪಂಚಾಯತ್‌, ಬ್ರಹ್ಮಶ್ರೀ ನಾರಾಯಣ ಗುರು ರಸ್ತೆಯಾಗಿ ಸಂಚರಿಸುತ್ತಿದ್ದು, ಇನ್ನೂ ಕೆಲವು ವಾಹನಗಳು ಬಜಪೆ ಚರ್ಚ್‌ ಸರ್ಕಲ್‌ ಆಗಿ, ಪೊಲೀಸ್‌ ಠಾಣೆಯಾಗಿ, ಮುರನಗರ ಹಳೆ ವಿಮಾನನಿಲ್ದಾಣ ರಸ್ತೆಯಾಗಿ ಮಂಗಳೂರಿಗೆ ಬಸ್‌ ಹಾಗೂ ಇತರೆ ವಾಹನಗಳು ಸಂಚರಿಸುತ್ತಿದೆ. ಬಸ್‌ಗಳು ಬದಲಿ ರಸ್ತೆಯಾಗಿ ಸಂಚರಿಸುವ ಕಾರಣ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಸುಮಾರು 3 ಕಿ.ಮೀ.ದೂರವಾಗಿ ಸಂಚಾರ ಮಾಡಬೇಕಾಗಿದೆ. ಬಸ್‌ ಮಾಲಕರಿಗೆ ಒಂದೆಡೆ ಖರ್ಚು ಜಾಸ್ತಿ, ಪ್ರಯಾಣಿಕರಿಲ್ಲದೇ ನಷ್ಟಕ್ಕೆ ಕಾರಣವಾಗಿದೆ. ಈ ಕಾಮಗಾರಿಯನ್ನು ತುರ್ತಾಗಿ ವೇಗವಾಗಿ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.