Bandaru: ರಸ್ತೆಯಲ್ಲೇ ಗೂಡ್ಸ್ ವಾಹನ ಪಾರ್ಕಿಂಗ್, ಸಂಚಾರ ಸಂಕಷ್ಟ
ಮುಂಜಾನೆಯಿಂದ ಸಂಜೆವರೆಗೂ ರಸ್ತೆಯಲ್ಲೇ ನಿಲ್ಲುವ ಲಾರಿಗಳು.
Team Udayavani, Sep 10, 2024, 3:10 PM IST
ಬಂದರು: ಲಾರಿ, ಟೆಂಪೋ ಸಹಿತ ವಿವಿಧ ಗೂಡ್ಸ್ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವುದರಿಂದ ಬಂದರ್ನ ವಿವಿಧ ರಸ್ತೆಗಳಲ್ಲಿ ಲಘು ವಾಹನ ಗಳಲ್ಲಿ ಸಂಚರಿಸುವುದು ತ್ರಾಸ ದಾಯಕವಾಗಿದೆ ಎನ್ನುವ ಆರೋಪ ವಾಹನ ಸವಾರರು, ಆಸುಪಾಸಿನ ನಿವಾಸಿಗಳಿಂದ ಕೇಳಿ ಬಂದಿದೆ.
ಬಂದರು ಪ್ರದೇಶ ನಗರದ ಆರ್ಥಿಕ ವಹಿವಾಟಿನ ಪ್ರಮುಖ ಕೇಂದ್ರವೂ ಆಗಿದೆ. ಆದ್ದರಿಂದ ವಿವಿಧ ಗೋದಾಮುಗಳು, ಹೋಲ್ಸೇಲ್ ಅಂಗಡಿಗಳಿಗೆ ಸಾಮಾನು – ಸರಂಜಾಮುಗಳನ್ನು ತರುವ ಉದ್ದನೆಯ ಲಾರಿಗಳು, ಅಂಗಡಿಗಳಿಂದ ಸಮಾನುಗಳನ್ನು ಬೇರೆಕಡೆಗೆ ಸಾಗಿಸುವ ಟೆಂಪೋಗಳು, ಗೂಡ್ಸ್ ರಿಕ್ಷಾ ಸಹಿತ ವಿವಿಧ ಗೂಡ್ಸ್ ವಾಹನಗಳನ್ನು ರಸ್ತೆಯಲ್ಲೇ ಪಾರ್ಕ್ ಲೋಡಿಂಗ್- ಅನ್ಲೋಡಿಂಗ್ ಮಾಡುತ್ತಿ ರುವುದರಿಂದ ಇತರ ವಾಹನಗಳ ಸಂಚಾರಕ್ಕೆ ಅವಕಾಶವೇ ಇಲ್ಲದಂತಾಗಿದೆ.
ಕೆಲವು ಸಂದರ್ಭದಲ್ಲಿ 100 -200 ಮೀ. ದೂರ ಸಾಗಲು ಹದಿನೈದರಿಂದ ಇಪ್ಪತ್ತು ನಿಮಿಷ ಬೇಕಾಗುತ್ತದೆ ಎನ್ನುತ್ತಾರೆ ವಿವಿಧ ವಾಹನಗಳ ಸವಾರರು.
ಅಗಲ ಕಿರಿದಾದ ರಸ್ತೆ
ಬಂದರ್ ಜೆ.ಎಂ.ರೋಡ್, ನೆಲ್ಲಿಕಾಯಿ ರಸ್ತೆ, ಅಝೀಜುದ್ದೀನ್ ರೋಡ್ ಸಹಿತ ವಿವಿಧ ರಸ್ತೆಗಳಲ್ಲಿ ಇದೇ ಸಮಸ್ಯೆಯಾಗಿದೆ. ಮುಂಜಾನೆಯಿಂದ ಸಂಜೆ ವರೆಗೆಗೂ ಲಾರಿಗಳು ರಸ್ತೆಯಲ್ಲೇ ನಿಲ್ಲುತ್ತವೆ. ಇಲ್ಲಿನ ರಸ್ತೆಗಳು ದ್ವಿಪಥ ರಸ್ತೆಗಳಾಗಿದ್ದು, ಅಗಲ ಕಿರಿದಾಗಿದೆ. ಇಂತಹ ರಸ್ತೆಯ ಎರಡು ಲಾರಿಗಳು ಒಂದೇ ಸ್ಥಳದಲ್ಲಿ ಎದುರು ಬದುರಾಗಿ ನಿಂತು ಇತರ ವಾಹನಗಳಿಗೆ ಸಂಚಾರಕ್ಕೆ ಅಡ್ಡಿ ಮಾಡುವ ಉದಾಹರಣೆಗಳೂ ಇವೆ. ಇದರಿಂದಾಗಿ ತುರ್ತು ಕಾರ್ಯಗಳಿಗೆ ಸಾಗುವವರಿಗೂ ಸಮಸ್ಯೆಯಾಗುತ್ತದೆ. ಕೆಲವು ಅಂಗಡಿಯವರು ತಮಗೆ ಸಂಬಂಧಿಸಿದ ಸಾಮಾನುಗಳನ್ನು ರಸ್ತೆಯ ಬದಿಯಲ್ಲೇ ಇರಿಸುತ್ತಿದ್ದು, ಇದರಿಂದ ಪಾದಚಾರಿಗಳಿಗೆ ಸಮಸ್ಯೆ ಉಂಟು ಮಾಡುವುದರ ಜತೆಗೆ ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ ಎನ್ನುವ ಆರೋಪವೂ ಕೇಳಿ ಬಂದಿದೆ.
ಈ ಬಗ್ಗೆ ಸ್ಥಳೀಯರು ಸಾಕಷ್ಟು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದಾರೆ. ಪೊಲೀಸರು ಒಮ್ಮೆ ಒಂದು ಅಂಗಡಿಯವರಿಗೆ ಎಚ್ಚರಿಕೆ ನೀಡುತ್ತಾರೆ. ಕೆಲವು ದಿನಗಳ ಬಳಿಕ ಸಮಸ್ಯೆ ಯಥಾಸ್ಥಿತಿ ಮುಂದುವರಿಯುತ್ತದೆ. ಆದ್ದರಿಂದ ಪೊಲೀಸರು ಈ ಬಗ್ಗೆ ಗಹೆಚ್ಚಿನ ನಿಗಾ ವಹಿಸಿ ಸಮಸ್ಯೆಗೆ ಅಂತ್ಯ ಹಾಡಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.