ಕೋರ್ಟ್‌ ಆವರಣದ ರಕ್ತದ ಕಲೆಗೆ ತಿರುವು!


Team Udayavani, Jul 18, 2019, 9:03 AM IST

blodd

ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯ ಆವರಣದ ಕಾರು ಪಾರ್ಕಿಂಗ್‌ ಜಾಗದಲ್ಲಿ ಜು.12ರಂದು ರಕ್ತದ ಕಲೆ ಕಾಣಿಸಿ ಸಾಕಷ್ಟು ಆತಂಕ ಹಾಗೂ ಕುತೂಹಲಕ್ಕೆ ಇತೆರೆ ಎಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಯ ಆಧಾರದಲ್ಲಿ ನ್ಯಾಯಾಲಯದ ಆವರಣದಲ್ಲಿ ಪತ್ತೆಯಾಗಿದ್ದ ರಕ್ತ ನಾಯಿಯದ್ದು ಎಂದು ದೃಢಪಟ್ಟಿದೆ! ಈ ಕುರಿತ ವರದಿಯ ಪ್ರತಿಯನ್ನು ಮಂಗಳೂರು ಪೊಲೀಸ್‌ ಆಯುಕ್ತರಿಗೆ ನೀಡಿದ್ದು, ಈ ಮೂಲಕ ಕಳೆದ ಒಂದು ವಾರದಿಂದ ರಕ್ತದ ಕಲೆಯ ಬಗ್ಗೆ ಇದ್ದ ಕುತೂಹಲ ಹಾಗೂ ನಿಗೂಢತೆಗೆ ಕಾರಣ ಗೊತ್ತಾಗಿದೆ.

ಕಳೆದ ಶುಕ್ರವಾರ ಮಧ್ಯಾಹ್ನ ನ್ಯಾಯಾಲಯದ ಮುಖ್ಯ ದ್ವಾರದ ಎದುರಿನ ಪರಿಸರದಲ್ಲಿ ಕಸ ಗುಡಿಸುವವರು ಸ್ಕಾರ್ಪಿಯೋ ಕಾರಿನ ಬಾಗಿಲು ಹಾಗೂ ಪಕ್ಕದಲ್ಲಿ ರಕ್ತ ಚೆಲ್ಲಿರುವುದನ್ನು ಗಮನಿಸಿದ್ದರು. ಕೂಡಲೇ ಬಂದರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದ್ದರು. ಅಷ್ಟೇಅಲ್ಲ, ಖುದ್ದು ನಗರ ಪೊಲೀಸ್‌ ಆಯುಕ್ತರೇ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಆ ಕುರಿತಂತೆ ತನಿಖೆ ಕೈಗೊಂಡಿದ್ದರು.

ಕೋರ್ಟ್‌ನಲ್ಲಿ ಅಳವಡಿಸಿದ್ದ ಸಿಸಿ ಕೆಮರಾದ ದೃಶ್ಯದ ಪರಿಶೀಲನೆ ಕೂಡ ನಡೆಸಲಾಗಿತ್ತು. ಆದರೆ, ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂಬ ಕಾರಣದಿಂದ ಪೊಲೀಸರಿಗೂ ಈ ಪ್ರಕರಣ ಸವಾಲಾಗಿತ್ತು. ಬಳಿಕ ರಕ್ತದ ಕಲೆಯನ್ನು ಪರಿಶೀಲನೆಗಾಗಿ ವಿಧಿ-ವಿಜ್ಞಾನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ, ಅಲ್ಲಿಂದ ವರದಿ ಬಂದಿದ್ದು, ಕೋರ್ಟ್‌ ಆವರಣದಲ್ಲಿ ಗಾಯಗೊಂಡಿದ್ದ ನಾಯಿಯ ದೇಹದಿಂದ ಆ ರೀತಿಯಲ್ಲಿ ರಕ್ತ ಚೆಲ್ಲಿದ್ದು ಎನ್ನುವುದು ದೃಢಪಟ್ಟಿದೆ.

ಆದರೆ ರಕ್ತದ ಕಲೆ ಕಾಣಿಸಿದ ತಕ್ಷಣವೇ ಆ ಬಗ್ಗೆ ನಿರ್ಲಕ್ಷ ವಹಿಸದೆ ಹೆಚ್ಚಿನ ಮುತುವರ್ಜಿಯಿಂದ ತನಿಖೆ ಕೈಗೊಂಡು ಸತ್ಯಾಂಶ ಬಹಿರಂಗಪಡಿಸಿ ಜನರಲ್ಲಿ ಮನೆ ಮಾಡಿದ್ದ ಆತಂಕ-ಕುತೂಹಲಕ್ಕೆ ತೆರೆ ಎಳೆಯುವ ಕಾರ್ಯವನ್ನು ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಮಾಡಿರುವುದು ಗಮನಾರ್ಹ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.