Mudbidri: ಮುರಿದ ಕಿರು ಸೇತುವೆಗಳು: ತಾವೇ ನಿರ್ಮಿಸಲು ಮುಂದಾದ ಗ್ರಾಮಸ್ಥರು

ಪಡುಮಾರ್ನಾಡು, ತಾಕೊಡೆ ಮತ್ತಿತರ ಗ್ರಾಮಗಳಲ್ಲಿ ಜನರ ಹೊಸ ಹೆಜ್ಜೆ

Team Udayavani, Aug 6, 2024, 3:10 PM IST

Screenshot (107)

ಮೂಡುಬಿದಿರೆ: ಈ ವಾರ ಸುರಿದ ಭಾರೀ ಮಳೆಯಿಂದಾಗಿ ಎಲ್ಲ ಕಡೆ, ವಿಶೇಷವಾಗಿ ಗ್ರಾಮಾಂತರ ಪ್ರದೇಶದಲ್ಲಿರುವ ಅದೆಷ್ಟೋ ಕಿರುಸೇತುವೆಗಳು ನಾಶವಾಗಿವೆ, ಇಲ್ಲವೇ ಭಾಗಶಃ ಹಾನಿಗೀಡಾಗಿವೆ. ತೋಡು, ಹೊಳೆಗಳನ್ನು ಕಿರು ಸೇತುವೆಗಳ ಮೂಲಕ ಹಾದು ಹೋಗುವ ಅನಿವಾರ್ಯ ಪರಿಸ್ಥಿತಿ ಇರುವ ಜನರಿಗೆ, ವಿಶೇಷವಾಗಿ ವಿದ್ಯಾರ್ಥಿಗಳು, ರೈತರು, ಪೇಟೆಯತ್ತ ಬರುವವರಿಗೆಲ್ಲ ಸಮಸ್ಯೆ ಉಂಟಾಗಿದೆ. ಇದಕ್ಕೆಲ್ಲ ಸರಕಾರಿ/ ಸ್ಥಳೀಯ ಆಡಳಿತ ಮಟ್ಟದಲ್ಲಿ ಸುಯೋಗ್ಯ ಕ್ರಮ ಜರಗಿಸುವಾಗ ಸಹಜವಾಗಿ ಕೊಂಚ ತಡವಾಗು ವುದನ್ನು ಗ್ರಾಮಸ್ಥರು ಮನವರಿಕೆಮಾಡಿಕೊಂಡಿದ್ದಾರೆ ಮತ್ತು ತಾವೇ ತಮ್ಮಿಂದಾದ ಮಟ್ಟಿಗೆ ಪರಿಹಾರ ಕ್ರಮ ಕೈಗೆತ್ತಿಕೊಂಡಿರುವುದನ್ನು ಗಮನಿಸಬಹುದು.

ಪಡುಮಾರ್ನಾಡು ಗ್ರಾಮದ ಕೇಂಪುಲುನಲ್ಲಿ ನೂರಾರು ಜನರ, ಮಾಡಿಕೊಟ್ಟಿರುವ ಸ್ಥಳೀಯರೊಬ್ಬರ ಜಾಗದಲ್ಲಿದ್ದ ಪುಟ್ಟ ಮೋರಿಯೊಂದು ಮಳೆಗೆ ನಾಶವಾಗಿ ಹೋಗಿದೆ. ಅದಕ್ಕೆ ತಾತ್ಕಾಲಿಕವಾಗಿಯಾದರೂ “ಪರಿಹಾರ ಮಾರ್ಗ’ ಕಂಡುಕೊಳ್ಳಬೇಕಾದ ಅನಿವಾರ್ಯ ಗ್ರಾಮಸ್ಥರಿಗಿದೆ. ಈ ಹಿನ್ನೆಲೆಯಲ್ಲಿ ಜಯಂತ ಪೂಜಾರಿ, ಸತೀಶ್‌, ಮೋನಪ್ಪ ಪೂಜಾರಿ, ಸತೀಶ್‌ ಅಡ್ಕರೆ ಸಹಿತ ಗ್ರಾಮಸ್ಥರು ಅಡಿಕೆ ಮರಗಳನ್ನು ಬಳಸಿ ಪುಟ್ಟ ಸೇತುವೆ ನಿರ್ಮಿಸಿಕೊಂಡಿದ್ದಾರೆ. ಪಿಡಿಒ/ ತಾಲೂಕು ಪಂಚಾಯತ್‌ ಸಹಾಯಕ ನಿರ್ದೇಶಕ ಸಾಯೀಶ್‌ ಚೌಟ, ಗ್ರಾಮ ಪಂಚಾಯತ್‌ ಸದಸ್ಯ ರಮೇಶ್‌ ಶೆಟ್ಟ ಗ್ರಾಮಸ್ಥರ ಕಾರ್ಯವನ್ನು ಶ್ಲಾಘಿಸಿದ್ದಾರೆ. ಪಂಚಾಯತ್‌ ವತಿಯಿಂದ ನೀರಿನ ಪೈಪ್‌ ಒದಗಿಸಿ ಮೋರಿಯನ್ನು ತಕ್ಕಮಟ್ಟಿಗೆ ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ.

ತಾತ್ಕಾಲಿಕ ಸಂಪರ್ಕ

ಹೊಸಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಪುಚ್ಚಮೊಗರು ಗ್ರಾಮದ ತಾಕೊಡೆಯ ಅಮ್ಮಿ ಕೋಟ್ಯಾನ್‌ ಅವರ ಮನೆಯ ಬಳಿಯ ತೋಟದಿಂದ ಹಾದು ಹೋಗುವ ಕಿಂಡಿ ಅಣೆಕಟ್ಟು ಅಪಾಯಸ್ಥಿತಿಯಲ್ಲಿದೆ.
ಅನಿವಾರ್ಯವಾಗಿ ಸಂಚಾರ ನಿರ್ಬಂಧಿಸಲಾಗಿದೆ. ಇದೀಗ ಅಡಿಕೆ ಮರಗಳನ್ನು ಬಳಸಿ ತಾತ್ಕಾಲಿಕ ಸಂಪರ್ಕ ಕಲ್ಪಿಸಲಾಗಿದೆ. ಅಧ್ಯಕ್ಷೆ ಸೌಮ್ಯ ಸದಾಶಿವ ಪೂಜಾರಿ ಇವರ ನೇತೃತ್ವ, ಸದಸ್ಯರಾದ ರೆಕ್ಸನ್‌, ರುಖೀಯಾ, ಗ್ರಾಮಸ್ಥರು, ಪಿಡಿಒ ಶೇಖರ ಇವರ ಸಹಕಾರ ಒದಗಿ ಬಂದಿದೆ.

ಹೀಗೆಯೇ ಕೊಚ್ಚಿ ಹೋಗಿದ್ದ, ಮೂಡುಬಿದಿರೆ ತಾಲೂಕಿನ ಪಣಪಿಲ ಗ್ರಾಮದ ಪಣಪಿಲ ಮತ್ತು ಬೋರುಗುಡೆಯನ್ನು ಜೋಡಿಸುವ ಬಿರ್ಮೆರಬೈಲು ಸೇತುವೆಯನ್ನು ತಾತ್ಕಾಲಿಕ ವಾಗಿ ರವಿವಾರ ಪಂಚಾಯತ್‌ ಸದಸ್ಯರು, ಗ್ರಾಮಸ್ಥರು ಸೇರಿಕೊಂಡು ನಿರ್ಮಿಸಿರುವುದನ್ನು ಗಮನಿಸಬಹುದಾಗಿದೆ. ಇನ್ನೂ ಹಲವೆಡೆ ಇಂಥ ಪ್ರಯತ್ನಗಳು ನಡೆಯುತ್ತಿರುವುದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.