ಇನ್ನೂ ನಿರ್ಮಾಣವಾಗಿಲ್ಲ ಬಸ್‌ ನಿಲ್ದಾಣ

ಶೌಚಾಲಯ ಸಹಿತ ಮೂಲ ಸೌಕರ್ಯ ಇಲ್ಲದೆ ಕಾರ್ಮಿಕ ವರ್ಗಕ್ಕೆ ಸಮಸ್ಯೆ

Team Udayavani, Jul 29, 2022, 4:50 PM IST

15

ಬೈಕಂಪಾಡಿ: ರಾಜ್ಯದ ಎರಡನೆಯ ಅತೀ ದೊಡ್ಡ ಕೈಗಾರಿಕಾ ವಲಯ ಇರುವ ಬೈಕಂಪಾಡಿ ಜಂಕ್ಷನ್‌, ಕೈಗಾರಿಕಾ ರಸ್ತೆ ಮುಂಭಾಗ ಬಸ್‌ ನಿಲ್ದಾಣವಿಲ್ಲದೆ ಕಾರ್ಮಿಕರು ಬಸ್‌ಗಾಗಿ ತಾಸುಗಟ್ಟಲೆ ನಿಂತೇ ಕಾಯಬೇಕಾದ ಸ್ಥಿತಿಯಿದೆ.

ರಾಷ್ಟ್ರೀಯ ಹೆದ್ದಾರಿ ಆದ ಬಳಿಕ ಇಲ್ಲಿ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣ ಮಾಡುವಲ್ಲಿ ಸಂಪೂರ್ಣ ಎಡವಿದೆ. ಮಂಗಳೂರು ಮಹಾನಗರ ಪಾಲಿಕೆಯೂ ಸ್ಥಳಾವಕಾಶದ ಕೊರತೆಯಿಂದ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿಲ್ಲ. ಮಳೆ, ಬಿಸಿಲಿಗೆ ರಸ್ತೆ ಬದಿ ಕಾಯುತ್ತಾ ನಿಲ್ಲುವ ಕಾರ್ಮಿಕ ಬವಣೆಗೆ ಇದುವರೆಗೆ ಯಾವುದೇ ಸ್ಪಂದನೆ ದೊರಕಿಲ್ಲ.

ಹೀಗಾಗಿ ಎಲ್ಲೆಂದರಲ್ಲಿ ಬಸ್‌ಗಳನ್ನು ದಿಢೀರ್‌ ಆಗಿ ನಿಲ್ಲಿಸಲಾಗುತ್ತಿದ್ದು, ಇತರ ವಾಹನ ಚಾಲಕರಿಗೂ ಇದರಿಂದ ಗೊಂದಲವಾಗುತ್ತಿದೆ. ಬೈಕಂಪಾಡಿ ಜಂಕ್ಷನ್‌ ಹಾಗೂ ಕೈಗಾರಿಕಾ ಪ್ರಾಂಗಣಕ್ಕೆ ಹೋಗುವ ದೀಪಕ್‌ ಪೆಟ್ರೋಲ್‌ ಬಂಕ್‌ ಮುಂಭಾಗ ಒಟ್ಟು ಎರಡು ಸುಸಜ್ಜಿತ ಬಸ್‌ ನಿಲ್ದಾಣ, ಕುಡಿಯುವ ನೀರಿನ ಸೌಲಭ್ಯ ಅಗತ್ಯವಿದೆ.

ಈ ಭಾಗದಲ್ಲಿ ಕೈಗಾರಿಕಾ ಪ್ರಾಂಗಣ ಹಾಗೂ ಸುತ್ತಮುತ್ತ ಲಾರಿಗಳ ಚಾಲಕರ ಸಮೂಹ ನಿತ್ಯವೂ ಇದ್ದು ಸೂಕ್ತ ಸಾರ್ವಜನಿಕ ಶೌಚಾಲಯದ ಕೊರತೆಯೂ ಕಾಡುತ್ತಿದೆ. ಬಹಿರ್ದೆಸೆಗಾಗಿ ಇಲ್ಲಿನ ರೈಲು ಹಳಿಯ ಸುತ್ತಮುತ್ತ ಇರುವ ಪೊದೆಗಂಟಿಗಳನ್ನು ಅವಲಂಬಿಸಬೇಕಾಗಿದೆ. ಬೈಕಂಪಾಡಿ ಜಂಕ್ಷನ್‌ ನಲ್ಲಿ ನವಮಂಗಳೂರು ಬಂದರಿನ 30 ಸೆಂಟ್ಸ್‌ ಜಾಗವಿದ್ದು ಇಲ್ಲಿ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಅವಕಾಶವಿದೆ. ಈ ಜಾಗವನ್ನು ಸಮತಟ್ಟುಗೊಳಿಸಿ ಮಂಗಳೂರು ಮಹಾನಗರ ಪಾಲಿಕೆ ಬಸ್‌ ನಿಲ್ದಾಣವನ್ನ ನಿರ್ಮಿಸಬಹುದಾಗಿದೆ. ಬಂದರು ಈಗಾಗಲೇ ಬಸ್‌ ನಿಲ್ದಾಣಕ್ಕೆ ಈ ಜಾಗವನ್ನು ಮೀಸಲಿರಿಸಿದೆ.

ಬೈಕಂಪಾಡಿ ಜಂಕ್ಷನ್‌ನಲ್ಲಿ ಸರ್ವಿಸ್‌ ರಸ್ತೆ ಇಲ್ಲ . ಹೀಗಾಗಿ ಜನರು ಹೆದ್ದಾರಿ ಬದಿಯೇ ನಡೆದಾಡುವಂಥಾಗಿದ್ದು ದಿನನಿತ್ಯ ಸಣ್ಣಪುಟ್ಟ ಅಪಘಾತಗಳ ಸರಮಾಲೆ ನಡೆಯುತ್ತಿದೆ. ಪಾದಾಚಾರಿ ದಾಟುವಿಕೆ, ಮಳೆ, ಗಾಳಿಗೆ ರಕ್ಷಣೆಯನ್ನು ಒದಗಿಸುವಂತಹ ಬಸ್‌ ನಿಲ್ದಾಣ ನಿರ್ಮಿಸುವ ಬಗ್ಗೆ ಸಾರ್ವಜನಿಕರ ಬೇಡಿಕೆಯಿದೆ. ಈ ಬಗ್ಗೆ ಶಾಸಕರು ಹಾಗೂ ಆಯುಕ್ತರಲ್ಲಿ ಚರ್ಚಿಸುತ್ತೇನೆ. –ಸುಮಿತ್ರ ಕರಿಯ, ಸ್ಥಳೀಯ ಮನಪಾ ಸದಸ್ಯರು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.