Dakshina Kannada ಜಿಲ್ಲೆಯ ಧಾರಣಾ ಸಾಮರ್ಥ್ಯ ಅಧ್ಯಯನ: ಫಾರೂಕ್‌


Team Udayavani, Sep 8, 2023, 11:44 PM IST

1-wqwqe

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಪ್ರಾರಂಭದ ಮುನ್ನ ಈ ಭಾಗದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ಸಮಗ್ರ ವರದಿ ನೀಡುವಂತೆ ಸ್ಥಳೀಯ ಪ್ರಾಧಿಕಾರದ ಸಮಿತಿಗೆ ಸೂಚಿಸಲಾಗಿದೆ ಎಂದು ವಿಧಾನ ಪರಿಷತ್‌ನ ಸರಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಬಿ.ಎಂ.ಫಾರೂಕ್‌ ಅವರು ಹೇಳಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಗೆ ಭೇಟಿ ನೀಡಿದ ವೇಳೆ ಅನೇಕ ಕಡೆ ಭರವಸೆ ಅನುಷ್ಠಾನಗೊಳ್ಳದಿರುವುದು ಗಮನಕ್ಕೆ ಬಂದಿದೆ. ಅವುಗಳನ್ನು ಕಾರ್ಯಗತಗೊಳಿಸಲು ಸೂಚಿಸಲಾ ಗಿದೆ. ಇನ್ನೂ ಕೆಲವು ಭರವಸೆಗಳ ಈಡೇರಿಕೆಗೆ ಅನೇಕ ತೊಡಕುಗಳಿವೆ.. ಆದರೂ ಬೃಹತ್‌ ಯೋಜನೆಗಳು ಇಲ್ಲಿ ಸದ್ದಿಲ್ಲದೆ ಸ್ಥಾಪನೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಭೌಗೋಳಿಕ ಧಾರಣಾ ಸಾಮರ್ಥ್ಯದ ಬಗ್ಗೆ ಸಮಿತಿ ರಚಿಸಿ ಅಧ್ಯಯನ ನಡೆಸುವಂತೆ ಸ್ಥಳೀಯ ಪ್ರಾಧಿಕಾರಕ್ಕೆ ಸೂಚಿಸಲಗಿದೆ. ಈ ಸಮಿತಿ ವರದಿಯನ್ನು ಭರವಸೆಗಳ ಸಮಿತಿ ಅಧ್ಯಯನ ನಡೆಸಿ ಬಳಿಕ ಸರಕಾರಕ್ಕೂ ಸಲ್ಲಿಸಲಿದೆ ಎಂದರು.

ಕೈಗಾರಿಕೆಗಳಿಂದ ಉಂಟಾಗುವ ಪರಿಸರ, ಮಾಲಿನ್ಯ ಮತ್ತಿತರ ಅಂಶಗಳ ಕುರಿತು ಸ್ವತಂತ್ರ ಅಧ್ಯಯನ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ನೀರಿ ಸಂಸ್ಥೆಗೆ ಸೂಚಿಸಲಾಗಿತ್ತು. ಅದರಂತೆ ನೀರಿ ಸಂಸ್ಥೆ ಗುರುವಾರ ವರದಿ ಸಲ್ಲಿಸಿದೆ. ಅದನ್ನು ಸಮಿತಿ ಇನ್ನಷ್ಟೆ ಪರಿಶೀಲಿಸಬೇಕಿದೆ ಎಂದರು. ಜೋಕಟ್ಟೆ ಪರಿಸರದಲ್ಲಿ ಕೈಗಾರಿಕಾ ಕಲುಷಿತ ವಾತಾವರಣ ಬಗ್ಗೆಯೂ ಸ್ಥಳೀಯರು ದೂರು ನೀಡಿದ್ದು, ಆ ಬಗ್ಗೆಯೂ ಗಮನ ಹರಿಸುವಂತೆ ಸೂಚಿಸಲಾಗಿದೆ ಎಂದರು.

ಡಾ| ಸರೋಜಿನಿ ಮಹಿಷಿ ವರದಿ ಅನುಷ್ಠಾನ ದಿಸೆಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಎಂಆರ್‌ಪಿಎಲ್‌ಗೆ ಸೂಚನೆ ನೀಡಿದ್ದು,. 5ನೇ ಹಂತ ಅನುಷ್ಠಾನ ವೇಳೆ ಸಂಸದ ರೊಂದಿಗೆ ಚರ್ಚಿಸಿ ಎ ಹಾಗೂ ಬಿ ಗ್ರೇಡ್‌ ಹುದ್ದೆಗಳಿಗೂ ಸ್ಥಳೀಯರನ್ನೇ ನೇಮಿಸುವಂತೆ ತಿಳಿಸಲಾಗಿದೆ. ಪ್ರಸಕ್ತ 650 ಮಂದಿ ಸ್ಥಳೀಯರಿಗೆ ಉದ್ಯೋಗ ನೀಡಿದ್ದರೂ ಅದು ಸಿ ಮತ್ತು ಡಿ ದರ್ಜೆಯದ್ದು ಎಂದರು.

ಎಚ್‌ಪಿಸಿಎಲ್‌ನಿಂದ ಎಲ್‌ಪಿಜಿ ಸುರಂಗ
ಮಂಗಳೂರಿನಲ್ಲಿ ಭೂಗತ ತೈಲಸಂ ಗ್ರಹಾ ಗಾರ ಬಳಿಕ ಇನ್ನೊಂದು ಬೃಹತ್‌ ಭೂಗತ ಸುರಂಗ ರಚನೆ ಯಾಗುತ್ತಿದೆ. ಇನ್ನು ಐದಾರು ತಿಂಗಳಲ್ಲಿ ಈ ಸುರಂಗ ಕಾಮಗಾರಿ ಪೂರ್ಣಗೊಳ್ಳಲಿದೆ. ಎಚ್‌ಪಿಸಿಎಲ್‌ ಕಂಪೆನಿಯು ಎಲ್‌ಪಿಜಿ ಅನಿಲ ಸಂಗ್ರಹಕ್ಕೆ ಈ ಸುರಂಗ ನಿರ್ಮಿಸುತ್ತಿದೆ ಎಂದರು.

ನಿಯೋಗ ಗುರುವಾರ ಈ ಸುರಂಗ ನಿರ್ಮಾಣ ಕಾಮಗಾರಿ ವೀಕ್ಷಿಸಿದೆ. ಭೂಮಿಯ ಮೇಲ್‌ಸ್ತರದಿಂದ ಸುಮಾರು 500 ಅಡಿ ಆಳದಲ್ಲಿ ಬಂಡೆಯನ್ನೇ ಕೊರೆದು ಸುರಂಗ ನಿರ್ಮಿಸುತ್ತಿದ್ದು, ಎಲ್‌ಪಿಜಿ ಗ್ಯಾಸ್‌ ಶೇಖರಣೆ ಇದರ ಗುರಿಯಾಗಿದೆ. ಈಗಾಗಲೇ ಪೆರ್ಮುದೆಯಲ್ಲಿ ತೈಲ ಸಂಗ್ರಹಾಗಾರದ ಸುರಂಗ ಇದೆ ಎಂದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.