ಪ್ರಕರಣ ಇಳಿಮುಖ; ಶಿಶು – ತಾಯಿ ಮರಣ ಗಣನೀಯ ಇಳಿಕೆ


Team Udayavani, Jul 24, 2024, 1:35 PM IST

ಪ್ರಕರಣ ಇಳಿಮುಖ; ಶಿಶು – ತಾಯಿ ಮರಣ ಗಣನೀಯ ಇಳಿಕೆ

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಐದು ವರ್ಷಕ್ಕೆ ಹೋಲಿಸಿದರೆ ಶಿಶು ಮರಣ ಮತ್ತು ತಾಯಿ ಮರಣ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಜಿಲ್ಲೆಯಲ್ಲಿ 2019ರಲ್ಲಿ 19 ತಾಯಿ ಮರಣ ಮತ್ತು 354 ಶಿಶು ಮರಣವಾಗಿತ್ತು.
ಆದರೆ ಈ ವರ್ಷ ಮಾರ್ಚ್‌ವರೆಗೆ ಒಂದು ವರ್ಷದಲ್ಲಿ 10 ತಾಯಿ ಮರಣ ಮತ್ತು 300 ಶಿಶು ಮರಣ ಆಗಿದೆ. ಆದರೂ ಕೆಲವೊಂದು
ಸಂದರ್ಭಗಳಲ್ಲಿ ತಾಯಿ-ಮಗುವಿನ ಸಾವು ಆಗುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಆರೋಗ್ಯ ಇಲಾಖೆಯಿಂದ ಇನ್ನಷ್ಟು ನಿಗಾ ವಹಿಸಬೇಕಿದೆ.

ಆರೋಗ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ ಈವರೆಗೆ ಜಿಲ್ಲೆಯಲ್ಲಿ ಅಪೌಷ್ಟಿಕತೆ, ಎನಿಮಿಯ ಕಾರಣದಿಂದಾಗಿ ಯಾವುದೇ ಮರಣ ಸಂಭವಿಸಿಲ್ಲ. ಬದಲಾಗಿ ಗರ್ಭಿಣಿಗೆ ತೀವ್ರ ರಕ್ತಸ್ರಾವ, ಗರ್ಭಕೋಶ ಸಮಸ್ಯೆ, ಅವಧಿಗೂ ಮುನ್ನ ಹುಟ್ಟುವ ಮಗು ಸಹಿತ ಅನಿರೀಕ್ಷಿತ ಕಾರಣದಿಂದಾಗಿ ಮರಣ ಆಗುತ್ತಿದೆ.

ಗರ್ಭಿಣಿಯಾದ ಮೊದಲು ಮೂರು ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಹುಟ್ಟುವ ಮಗುವಿಗೆ ಮೆದುಳು ಸಂಬಂಧಿ ಸಮಸ್ಯೆ ಉಂಟಾಗಬಾರದು ಎಂಬ ಉದ್ದೇಶಕ್ಕೆ ಮೂರು ತಿಂಗಳ ಕಾಲ ತಾಯಿಗೆ ಫೋಲಿಕ್‌
ಆ್ಯಸಿಡ್‌ ಮಾತ್ರೆಯನ್ನು ನೀಡಲಾಗುತ್ತದೆ. ಬಳಿಕ ಮೂರು ತಿಂಗಳವರೆಗೆ ಅನಿಮಿಯಾ ನಿಯಂತ್ರಣಕ್ಕೆಂದು ಕಬ್ಬಿಣಾಂಶದ ಮಾತ್ರೆ
ಕೊಡಲಾಗುತ್ತದೆ. ಕ್ಯಾಲ್ಸಿಯಂ ಟ್ಯಾಬ್ಲೆಟ್‌ ಕೂಡ ನೀಡಿ, ಆರೋಗ್ಯ ಕಾಪಾಡಿಕೊಳ್ಳಲಾಗುತ್ತದೆ. ಇದರ ಜತೆ ನಿಯಮಿತವಾಗಿ
ವೈದ್ಯಕೀಯ ಪರೀಕ್ಷೆ, ಸ್ಕ್ಯಾನಿಂಗ್‌ ಮಾಡಲಾಗುತ್ತದೆ.

ಅಪೌಷ್ಟಿಕತೆ ಉಂಟಾಗಬಾರದು ಮತ್ತು ತಾಯಿ, ಮಗುವಿನ ಆರೋಗ್ಯದ ದೃಷ್ಟಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಗಳ ಮುಖಾಂತರ ವಿಟಮಿನ್‌ಯುಕ್ತ ಆಹಾರ ಪದಾರ್ಥಗಳನ್ನು ವಿತರಿಸುತ್ತಿದೆ. ಸೊಪ್ಪು ತರಕಾರಿ, ಹಣ್ಣು, ಒಣ ಹಣ್ಣು, ಮೊಟ್ಟೆ, ಮೀನು, ಹಾಲು, ಮೊಸರು ಮುಂತಾದವುಗಳ ಸೇವನೆಯಿಂದ ತಾಯಿ ಮತ್ತು ಮಗುವಿನ ದೇಹಕ್ಕೆ ವಿಟಮಿನ್‌ ದೊರೆಯುತ್ತದೆ.

ಗರ್ಭಿಣಿಯರ ನೋಂದಣಿಯಾದ ಕೂಡಲೇ ಅವರ ಆರೋಗ್ಯದ ಬಗ್ಗೆ ನಿಗಾ ಇಡುವ ಕೆಲಸ ಈಗಾಗಲೇ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ನಡೆಯುತ್ತಿದೆ. ರಕ್ತದೊತ್ತಡ, ರಕ್ತಹೀನತೆ ಪರೀಕ್ಷೆ ಮುಂತಾದ ಅಗತ್ಯ ತಪಾಸಣೆಗಳನ್ನು ಆರೋಗ್ಯ ಇಲಾಖೆ ಮೂಲಕ ನಡೆಸಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರ ಮುಖಾಂತರ ಆಗಾಗ ಮನೆ-ಮನೆ ಭೇಟಿ ನಡೆಸಲಾಗುತ್ತಿದೆ. ಹೈರಿಸ್ಕ್ ಪ್ರಕರಣಗಳಿದ್ದಲ್ಲಿ, ಹಿಂದೆ ಗರ್ಭಪಾತ, ಸಿಝೇರಿಯನ್‌ ಆಗಿದ್ದರೆ ಅಥವಾ ಈ ಮೊದಲು ನಿರ್ಜೀವ ಶಿಶು ಜನನವಾಗಿದ್ದಲ್ಲಿ ಅಂತಹವರ ಬಗ್ಗೆ ವಿಶೇಷವಾಗಿ ನಿಗಾ ವಹಿಸುವ ಕೆಲಸವೂ ಇಲಾಖೆಯಿಂದ ನಡೆಯುತ್ತಿದೆ.

ಅಂಗನವಾಡಿ ಕಾರ್ಯಕರ್ತೆಯರಿಂದ ಜಾಗೃತಿ
ತಾಯಿ ಮತ್ತು ಶಿಶುವಿನ ಆರೋಗ್ಯದ ದೃಷ್ಟಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ. ಪೋಷಣೆ ಅಭಿಯಾನ ಕಾರ್ಯಕ್ರಮದ ಮೂಲಕ ಪೌಷ್ಟಿಕ ಆಹಾರ, ಮನೆ ಭೇಟಿ, ಮಾತೃಪೂರ್ಣ ಯೋಜನೆಯ ಮೂಲಕ ಕೌನ್ಸಿಲಿಂಗ್‌ ಕೆಲಸ ನಿರಂತರವಾಗಿ ನಡೆಯುತ್ತಿದೆ. ಗರ್ಭಾವಸ್ಥೆಯಲ್ಲಿ ಮತ್ತು ಶಿಶು ಜನನದ ನಂತರವೂ ಆರೋಗ್ಯದ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮಾಹಿತಿ ನೀಡಲಾಗುತ್ತಿದೆ.
*ಉಸ್ಮಾನ್‌,ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ

ಅರಿವು ಮೂಡಿಸಲು ಕ್ರಮ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ವರ್ಷಕ್ಕೆ ಹೋಲಿಕೆ ಮಾಡಿದರೆ ತಾಯಿ ಮರಣ ಮತ್ತು ಶಿಶು ಮರಣ ಸಂಖ್ಯೆ ಇಳಿಕೆಯಾಗುತ್ತಿದೆ. ಸದ್ಯದ ಹೆಚ್ಚಿನ ಮರಣಗಳು ಅನಿರೀಕ್ಷಿತವಾಗಿಯೇ ಆಗಿದೆ. ಆದರೂ ಮರಣ ನಿಯಂತ್ರಿಸುವ
ಉದ್ದೇಶಕ್ಕೆ ಆರೋಗ್ಯ ಇಲಾಖೆಯಿಂದ ವಿಶೇಷ ಕ್ರಮ ವಹಿಸಲಾಗುತ್ತಿದೆ. ನಿಯಮಿತ ಆರೋಗ್ಯ ತಪಾಸಣೆ ಸಹಿತ ಗರ್ಭಿಣಿಯರಿಗೆ ಅರಿವು ಮೂಡಿಸುವ ಕೆಲಸವೂ ನಡೆಯುತ್ತಿದೆ.
ಡಾ| ತಿಮ್ಮಯ್ಯ,
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

*ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.