ಪ್ರಕರಣ ಇಳಿಮುಖ; ಶಿಶು – ತಾಯಿ ಮರಣ ಗಣನೀಯ ಇಳಿಕೆ


Team Udayavani, Jul 24, 2024, 1:35 PM IST

ಪ್ರಕರಣ ಇಳಿಮುಖ; ಶಿಶು – ತಾಯಿ ಮರಣ ಗಣನೀಯ ಇಳಿಕೆ

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಐದು ವರ್ಷಕ್ಕೆ ಹೋಲಿಸಿದರೆ ಶಿಶು ಮರಣ ಮತ್ತು ತಾಯಿ ಮರಣ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಜಿಲ್ಲೆಯಲ್ಲಿ 2019ರಲ್ಲಿ 19 ತಾಯಿ ಮರಣ ಮತ್ತು 354 ಶಿಶು ಮರಣವಾಗಿತ್ತು.
ಆದರೆ ಈ ವರ್ಷ ಮಾರ್ಚ್‌ವರೆಗೆ ಒಂದು ವರ್ಷದಲ್ಲಿ 10 ತಾಯಿ ಮರಣ ಮತ್ತು 300 ಶಿಶು ಮರಣ ಆಗಿದೆ. ಆದರೂ ಕೆಲವೊಂದು
ಸಂದರ್ಭಗಳಲ್ಲಿ ತಾಯಿ-ಮಗುವಿನ ಸಾವು ಆಗುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಆರೋಗ್ಯ ಇಲಾಖೆಯಿಂದ ಇನ್ನಷ್ಟು ನಿಗಾ ವಹಿಸಬೇಕಿದೆ.

ಆರೋಗ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ ಈವರೆಗೆ ಜಿಲ್ಲೆಯಲ್ಲಿ ಅಪೌಷ್ಟಿಕತೆ, ಎನಿಮಿಯ ಕಾರಣದಿಂದಾಗಿ ಯಾವುದೇ ಮರಣ ಸಂಭವಿಸಿಲ್ಲ. ಬದಲಾಗಿ ಗರ್ಭಿಣಿಗೆ ತೀವ್ರ ರಕ್ತಸ್ರಾವ, ಗರ್ಭಕೋಶ ಸಮಸ್ಯೆ, ಅವಧಿಗೂ ಮುನ್ನ ಹುಟ್ಟುವ ಮಗು ಸಹಿತ ಅನಿರೀಕ್ಷಿತ ಕಾರಣದಿಂದಾಗಿ ಮರಣ ಆಗುತ್ತಿದೆ.

ಗರ್ಭಿಣಿಯಾದ ಮೊದಲು ಮೂರು ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಹುಟ್ಟುವ ಮಗುವಿಗೆ ಮೆದುಳು ಸಂಬಂಧಿ ಸಮಸ್ಯೆ ಉಂಟಾಗಬಾರದು ಎಂಬ ಉದ್ದೇಶಕ್ಕೆ ಮೂರು ತಿಂಗಳ ಕಾಲ ತಾಯಿಗೆ ಫೋಲಿಕ್‌
ಆ್ಯಸಿಡ್‌ ಮಾತ್ರೆಯನ್ನು ನೀಡಲಾಗುತ್ತದೆ. ಬಳಿಕ ಮೂರು ತಿಂಗಳವರೆಗೆ ಅನಿಮಿಯಾ ನಿಯಂತ್ರಣಕ್ಕೆಂದು ಕಬ್ಬಿಣಾಂಶದ ಮಾತ್ರೆ
ಕೊಡಲಾಗುತ್ತದೆ. ಕ್ಯಾಲ್ಸಿಯಂ ಟ್ಯಾಬ್ಲೆಟ್‌ ಕೂಡ ನೀಡಿ, ಆರೋಗ್ಯ ಕಾಪಾಡಿಕೊಳ್ಳಲಾಗುತ್ತದೆ. ಇದರ ಜತೆ ನಿಯಮಿತವಾಗಿ
ವೈದ್ಯಕೀಯ ಪರೀಕ್ಷೆ, ಸ್ಕ್ಯಾನಿಂಗ್‌ ಮಾಡಲಾಗುತ್ತದೆ.

ಅಪೌಷ್ಟಿಕತೆ ಉಂಟಾಗಬಾರದು ಮತ್ತು ತಾಯಿ, ಮಗುವಿನ ಆರೋಗ್ಯದ ದೃಷ್ಟಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಗಳ ಮುಖಾಂತರ ವಿಟಮಿನ್‌ಯುಕ್ತ ಆಹಾರ ಪದಾರ್ಥಗಳನ್ನು ವಿತರಿಸುತ್ತಿದೆ. ಸೊಪ್ಪು ತರಕಾರಿ, ಹಣ್ಣು, ಒಣ ಹಣ್ಣು, ಮೊಟ್ಟೆ, ಮೀನು, ಹಾಲು, ಮೊಸರು ಮುಂತಾದವುಗಳ ಸೇವನೆಯಿಂದ ತಾಯಿ ಮತ್ತು ಮಗುವಿನ ದೇಹಕ್ಕೆ ವಿಟಮಿನ್‌ ದೊರೆಯುತ್ತದೆ.

ಗರ್ಭಿಣಿಯರ ನೋಂದಣಿಯಾದ ಕೂಡಲೇ ಅವರ ಆರೋಗ್ಯದ ಬಗ್ಗೆ ನಿಗಾ ಇಡುವ ಕೆಲಸ ಈಗಾಗಲೇ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ನಡೆಯುತ್ತಿದೆ. ರಕ್ತದೊತ್ತಡ, ರಕ್ತಹೀನತೆ ಪರೀಕ್ಷೆ ಮುಂತಾದ ಅಗತ್ಯ ತಪಾಸಣೆಗಳನ್ನು ಆರೋಗ್ಯ ಇಲಾಖೆ ಮೂಲಕ ನಡೆಸಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರ ಮುಖಾಂತರ ಆಗಾಗ ಮನೆ-ಮನೆ ಭೇಟಿ ನಡೆಸಲಾಗುತ್ತಿದೆ. ಹೈರಿಸ್ಕ್ ಪ್ರಕರಣಗಳಿದ್ದಲ್ಲಿ, ಹಿಂದೆ ಗರ್ಭಪಾತ, ಸಿಝೇರಿಯನ್‌ ಆಗಿದ್ದರೆ ಅಥವಾ ಈ ಮೊದಲು ನಿರ್ಜೀವ ಶಿಶು ಜನನವಾಗಿದ್ದಲ್ಲಿ ಅಂತಹವರ ಬಗ್ಗೆ ವಿಶೇಷವಾಗಿ ನಿಗಾ ವಹಿಸುವ ಕೆಲಸವೂ ಇಲಾಖೆಯಿಂದ ನಡೆಯುತ್ತಿದೆ.

ಅಂಗನವಾಡಿ ಕಾರ್ಯಕರ್ತೆಯರಿಂದ ಜಾಗೃತಿ
ತಾಯಿ ಮತ್ತು ಶಿಶುವಿನ ಆರೋಗ್ಯದ ದೃಷ್ಟಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ. ಪೋಷಣೆ ಅಭಿಯಾನ ಕಾರ್ಯಕ್ರಮದ ಮೂಲಕ ಪೌಷ್ಟಿಕ ಆಹಾರ, ಮನೆ ಭೇಟಿ, ಮಾತೃಪೂರ್ಣ ಯೋಜನೆಯ ಮೂಲಕ ಕೌನ್ಸಿಲಿಂಗ್‌ ಕೆಲಸ ನಿರಂತರವಾಗಿ ನಡೆಯುತ್ತಿದೆ. ಗರ್ಭಾವಸ್ಥೆಯಲ್ಲಿ ಮತ್ತು ಶಿಶು ಜನನದ ನಂತರವೂ ಆರೋಗ್ಯದ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮಾಹಿತಿ ನೀಡಲಾಗುತ್ತಿದೆ.
*ಉಸ್ಮಾನ್‌,ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ

ಅರಿವು ಮೂಡಿಸಲು ಕ್ರಮ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ವರ್ಷಕ್ಕೆ ಹೋಲಿಕೆ ಮಾಡಿದರೆ ತಾಯಿ ಮರಣ ಮತ್ತು ಶಿಶು ಮರಣ ಸಂಖ್ಯೆ ಇಳಿಕೆಯಾಗುತ್ತಿದೆ. ಸದ್ಯದ ಹೆಚ್ಚಿನ ಮರಣಗಳು ಅನಿರೀಕ್ಷಿತವಾಗಿಯೇ ಆಗಿದೆ. ಆದರೂ ಮರಣ ನಿಯಂತ್ರಿಸುವ
ಉದ್ದೇಶಕ್ಕೆ ಆರೋಗ್ಯ ಇಲಾಖೆಯಿಂದ ವಿಶೇಷ ಕ್ರಮ ವಹಿಸಲಾಗುತ್ತಿದೆ. ನಿಯಮಿತ ಆರೋಗ್ಯ ತಪಾಸಣೆ ಸಹಿತ ಗರ್ಭಿಣಿಯರಿಗೆ ಅರಿವು ಮೂಡಿಸುವ ಕೆಲಸವೂ ನಡೆಯುತ್ತಿದೆ.
ಡಾ| ತಿಮ್ಮಯ್ಯ,
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

*ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.