Mangaluru: ಸಿಟಿ ಬಸ್‌ಗಳಲಿನ್ನು ನಗದು ರಹಿತ ಪ್ರಯಾಣ !

ಚಿಲ್ಲರೆ ಕಿರಿ ಕಿರಿ ಇಲ್ಲ; ಮೊಬೈಲ್‌ನಲ್ಲೇ ಸ್ಕ್ಯಾನ್ ಮಾಡಿ ಹಣ ಪಾವತಿಸಿ

Team Udayavani, Jul 29, 2024, 11:24 AM IST

bus

ಮಹಾನಗರ: ಮಂಗಳೂರು ನಗರದ ಬಸ್‌ಗಳಲ್ಲಿ ಪ್ರಯಾಣಿಸುವವರಿಗಿನ್ನು ಚಿಲ್ಲರೆಯ ಕಿರಿ ಕಿರಿ ಇಲ್ಲ. ಅಂಗಡಿಗಳಲ್ಲಿ ಮೊಬೈಲ್‌ ಮೂಲಕ ಯಾವ ರೀತಿ ಸ್ಕ್ಯಾನ್ ಮಾಡಿ ಹಣ ಪಾವತಿ ಮಾಡುತ್ತೇವೋ ಅದೇ ರೀತಿ ಬಸ್‌ಗಳಲ್ಲಿಯೂ ಪಾವತಿ ಮಾಡಬಹುದು. ಈ ವಿನೂತನ ಮಾದರಿಯನ್ನು ಸಿಟಿ ಬಸ್‌ಗಳಲ್ಲಿ ಪರಿಚಯ ಮಾಡಲು ಸಿಟಿ ಬಸ್‌ ಮಾಲಕರ ಸಂಘ ಮುಂದಾಗಿದೆ.

ಖಾಸಗಿ ವಲಯದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಈ ಉಪಕ್ರಮ ಅಳವಡಿಸಲಾಗಿದೆ. ಪ್ರಾಯೋಗಿಕ ನೆಲೆಯಲ್ಲಿ ಸ್ಟೇಟ್‌ ಬ್ಯಾಂಕ್‌ನಿಂದ ಅತ್ತಾವರ – ಮಂಗಳಾದೇವಿ ನಡುವಣ ಸಂಚರಿಸುವ 27 ನಂಬರ್‌ನ 5 ಬಸ್‌ಗಳಲ್ಲಿ ಈ ಯೋಜನೆ ಈಗಾಗಲೇ ಜಾರಿಯಾಗಿದೆ. ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಪ್ರಯಾಣಿಕರು ಯುಪಿಐ ಮೂಲಕವೇ ನಗದು ರಹಿತವಾಗಿ ಟಿಕೆಟ್‌ ಹಣ ಪಾವತಿ ಮಾಡುತ್ತಿದ್ದಾರೆ. ಒಂದು ವೇಳೆ ಆನ್‌ ಲೈನ್‌ ವ್ಯವಸ್ಥೆ ಇಲ್ಲದಿದ್ದರೆ ನಗದು ನೀಡಿಯೂ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹಣ ಪಾವತಿ ಹೇಗೆ?

ಬಸ್‌ ಕಂಡಕ್ಟರ್‌ ಕೈಯಲ್ಲಿ ಇಟಿಎಂ ಯಂತ್ರ ಇರುತ್ತದೆ. ಪ್ರಯಾಣಿಕರು ಎಲ್ಲಿಂದ-ಎಲ್ಲಿಗೆ ಪ್ರಯಾಣಿಸುತ್ತಾರೆ ಎಂದು ಹೇಳಿದಾಗ ಇಟಿಎಂನಲ್ಲಿ ದರ ನಮೂದು ಆಗುತ್ತದೆ. ಆ ವೇಳೆ ಟಿಕೆಟ್‌ ದರಕ್ಕೆ ಅನುಗುಣವಾಗಿ ನಗದು ಅಥವಾ ಯುಪಿಐ ಎಂಬ ಆಯ್ಕೆ ಸಿಗುತ್ತದೆ. ಅಲ್ಲಿ ಯುಪಿಐ ಒತ್ತಿದರೆ ಕ್ಯೂ ಆರ್‌ ಕೋಡ್‌ ಬರುತ್ತದೆ. ಅದನ್ನು ಸ್ಕ್ಯಾನ್ ಮಾಡಿ, ಗೂಗಲ್‌ ಪೇ, ಫೋನ್‌ ಪೇ ಅಥವಾ ಇತರ ಯಾವುದೇ ಸ್ಕ್ಯಾನರ್ ಮೂಲಕ ಹಣ ಪಾವತಿ ಮಾಡಬಹುದು. ಹಣ ಪಾವತಿಯಾಗಿದೆ ಎಂಬ ಸಂದೇಶ ನಿರ್ವಾಹಕನಿಗೆ ಬರುತ್ತದೆ. ಆಗ ಬಸ್‌ ಟಿಕೆಟ್‌ ಪ್ರಿಂಟ್‌ ಆಗುತ್ತದೆ. ಬಸ್‌ ಮಾಲಕ ದಿಲ್‌ರಾಜ್‌ ಆಳ್ವ ಅವರು “ಸುದಿನ’ಕ್ಕೆ ಪ್ರತಿಕ್ರಿಯಿಸಿ, “ನಮ್ಮ ಬಸ್‌ಗಳಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಈ ನೂತನ ಉಪಕ್ರಮ ಜಾರಿಗೆ ತಂದಿದ್ದೇವೆ. ಪ್ರಯಾಣಿಕರಿಂದಲೂ ಉತ್ತಮ
ಪ್ರತಿಕ್ರಿಯೆ ಬರುತ್ತಿದೆ’ ಎನ್ನುತ್ತಾರೆ.

ಅಸಾಧ್ಯವಲ್ಲ, ಸವಾಲು !

ನಗರದಲ್ಲಿ ಸಂಚರಿಸುವ ಎಲ್ಲ ಬಸ್‌ಗಳಲ್ಲಿ ಕ್ಯೂ ಆರ್‌ ಕೋಡ್‌ ಆಧರಿಸಿ, ಹಣ ಪಾವತಿ ವಿಧಾನ ಜಾರಿ ಅಸಾಧ್ಯವೇನಲ್ಲ, ಆದರೆ ಸವಾಲು ಇದೆ. ಸದ್ಯ ಹೆಚ್ಚಿನ ಸಿಟಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ನಿರ್ವಾಹಕ ಬಸ್‌ ಟಿಕೆಟ್‌ ನೀಡುತ್ತಿಲ್ಲ ಎಂಬ ಆರೋಪ ಇದೆ.ಕೊರಳಿಗೆ ಇಟಿಎಂ ಯಂತ್ರವನ್ನೇ ಹಾಕುವುದಿಲ್ಲ. ಹೀಗಿದ್ದಾಗ ಯುಪಿಐ ಪಾವತಿ ಹೇಗೆ ಸಾಧ್ಯ ಎನ್ನುತ್ತಾರೆ ಸಾರ್ವಜನಿಕರು. ಆದರೂ ನಿರ್ವಾಹಕರ ಸಭೆ ನಡೆಸಿ, ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆಯ ಸಹಕಾರದಿಂದ ಜಾರಿ ಮಾಡಿಯೇ ಸಿದ್ಧ ಎನ್ನುತ್ತಾರೆ ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ಅಜೀಜ್‌ ಪರ್ತಿಪ್ಪಾಡಿ.

ಪ್ರಾಯೋಗಿಕ ಜಾರಿ

ನಗರದ ಸಿಟಿ ಬಸ್‌ಗಳಲ್ಲಿ ಬಸ್‌ ಟಿಕೆಟ್‌ ದರ ಪಾವತಿಗೆ ಯುಪಿಐ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಸದ್ಯ ಪ್ರಾಯೋಗಿಕವಾಗಿ ಸ್ಟೇಟ್‌ಬ್ಯಾಂಕ್‌-ಮಂಗಳಾದೇವಿ ನಡುವೆ ಸಂಚರಿಸುವ 5 ಬಸ್‌ಗಳಲ್ಲಿ ಜಾರಿಯಾಗಿವೆ. ಪ್ರಯಾಣಿಕರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಸದ್ಯದಲ್ಲೇ ಈ ವ್ಯವಸ್ಥೆಯನ್ನು ನಗರದ ಇನ್ನಷ್ಟು ಬಸ್‌ಗಳಲ್ಲಿ ಅಳವಡಿಸುತ್ತೇವೆ. ಚಿಲ್ಲರೆ ಸಮಸ್ಯೆ, ಪಾರದರ್ಶಕ ವ್ಯವಸ್ಥೆ ಇದರಿಂದ ಸಾಧ್ಯ.

– ಅಜೀಜ್‌ ಪರ್ತಿಪ್ಪಾಡಿ,

ಖಾಸಗಿ ಬಸ್‌ ಮಾಲಕರ ಸಂಘದ ಅಧ್ಯಕ್ಷ

ಚಲೋ ಕಾರ್ಡ್‌ ಚಾಲ್ತಿಯಲ್ಲಿರಲಿದೆ

ಕೆಲವು ವರ್ಷಗಳ ಹಿಂದೆ ಮಂಗಳೂರು ಸಿಟಿ ಬಸ್‌ಗಳಲ್ಲಿ ಜಾರಿಯಾದ ಚಲೋ ಸ್ಮಾರ್ಟ್‌ ಕಾರ್ಡ್‌ ವ್ಯವಸ್ಥೆ ಅದೇ ರೀತಿ ಮುಂದುವರಿಯಲಿದೆ. ಈಗಾಗಲೇ ಅನೇಕ ಮಂದಿ ಈ ವ್ಯವಸ್ಥೆಯನ್ನು ಬಳಕೆ ಮಾಡುತ್ತಿದ್ದು,ಚಲೋ ಕಾರ್ಡ್‌ ಖರೀದಿಸಿ, ಅದಕ್ಕೆ ರೀಚಾರ್ಜ್‌ ಮಾಡುವ ಮೂಲಕ ಟಿಕೆಟ್‌ಗೆ ಹಣ ನೀಡುವ ಬದಲು ಕಾರ್ಡ್‌ ಸ್ವೈಪ್ ಮಾಡುತ್ತಿದ್ದಾರೆ. ಆನ್‌ಲೈನ್‌ ಪಾವತಿ ವ್ಯವಸ್ಥೆಯನ್ನು ಕೂಡ ಚಲೋ ಸಂಸ್ಥೆ ವಹಿಸಿಕೊಂಡಿದ್ದು, ಇವೆರಡನ್ನು ಮುಂದುವರಿಸಲು ನಿರ್ಧಾರ ಮಾಡಿದೆ.

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.