ಅಶಕ್ತರಿಗೆ ಮನೆ ಕಟ್ಟುವ ಕಾಯಕದಲ್ಲಿ ಚಾರಿಟೆಬಲ್ ಟ್ರಸ್ಟ್-3ನೇ ಮನೆ ‘ಆಸರೆ’ ಪ್ರವೇಶಕ್ಕೆಸಿದ್ಧ


Team Udayavani, Sep 14, 2024, 12:53 PM IST

13-bedra

ಮೂಡುಬಿದಿರೆ: ಒಂಟಿ ಸಾಹಸದಲ್ಲಿ ಅಶಕ್ತರಿಗೆ ಮನೆ ಕಟ್ಟಿ ಕೊಡುತ್ತ ಬರುತ್ತಿರುವ ಮೂಡುಬಿದಿರೆ ಆನಿಲ್ ಮೆಂಡೋನ್ಸಾ 4 ತಿಂಗಳ ಅವಧಿಯಲ್ಲಿ ಕರಿಂಜೆಯಲ್ಲಿ ‘ಅನುಗ್ರಹʼ, ಅಲಂಗಾರ್ ನಲ್ಲಿ ‘ಆಶೀರ್ವಾದ’ ನಿರ್ಮಿಸಿದ ಬೆನ್ನಲ್ಲೇ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ನೆತ್ತೋಡಿಯ ನೆಕ್ಕಿದಡ್ಪು ಗುಡ್ಡದಲ್ಲಿ 3ನೇ ಮನೆಯನ್ನು ಪೂರ್ಣಗೊಳಿಸುತ್ತಿದ್ದಾರೆ. ಅದೇ ʼಆಸರೆʼ.

ಗೇರುಬೀಜ ಕಾರ್ಖಾನೆಯೊಂದರಲ್ಲಿ ಕಾರ್ಮಿಕೆಯಾಗಿರುವ ವನಿತಾ ಅವರು ಪತಿ ಶ್ರೀನಿವಾಸ ಜತೆಗೂಡಿ ನೆತ್ತೋಡಿಯ ನೆಕ್ಕಿದಡ್ಪು ಗುಡ್ಡದಲ್ಲಿ ಅಕ್ರಮ ಸಕ್ರಮದಲ್ಲಿ ಲಭ್ಯ ನಿವೇಶನದಲ್ಲಿ ಪುಟ್ಟ ಮನೆ ಕಟ್ಟುವ ಕನಸನ್ನು ಕಂಡು ಕೆಲಸ ಆರಂಭಿಸುವಾಗಲೇ ಅಂದರೆ ಸುಮಾರು 8 ತಿಂಗಳ ಹಿಂದೆ ಪತಿಯನ್ನು ಕಳೆದುಕೊಂಡರು. ಅವರೊಂದಿಗೆ ಹೈಸ್ಕೂಲ್, ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಇಬ್ಬರು ಪುತ್ರರೂ ಇದ್ದಾರೆ. ಕೈಯಲ್ಲಿ ಬಿಡಿಗಾಸಿಲ್ಲ, ಬದುಕು ಸಾಗಿಸುವುದೇ ಕಷ್ಟಕರವಾಗಿರುವಾಗ ಈ ಅರ್ಧದಲ್ಲೇ ನಿಂತ ಮನೆ ನಿರ್ಮಾಣ ಕಾರ್ಯವನ್ನು ಮುಂದುವರಿಸುವುದಾದರೂ ಹೇಗೆ?

ಅಲಂಗಾರಿನಲ್ಲಿ 2ನೇ ಮನೆಯನ್ನು ಪುನರ್‌ನಿರ್ಮಿಸುವ ವೇಳೆ ಅಚಾನಕ್ ಆಗಿ ಅನಿಲ್ ಗೆ ಈ ವಿಷಯ ತಿಳಿದು ಚಿಕ್ಕಾಸೂ ಇಲ್ಲದೇ ಅವರು ಮನೆಯ ನಿರ್ಮಾಣ ಕಾರ್ಯಕ್ಕೆ ಮುಂದಾದರು. ಅನಿಲ್ ಮೆಂಡೋನ್ಸಾ ಸದಸ್ಯರಾಗಿರುವ ಮೂಡುಬಿದಿರೆ ಲಯನ್ಸ್ ಕ್ಲಬ್ 20,000 ರೂ. ನೀಡಿತು. ಗೆಳೆಯ ಗಾಡ್ವಿನ್ ಫೆರ್ನಾಂಡಿಸ್ 300 ಕೆಂಪು ಕಲ್ಲು ಕೊಟ್ಟರು. ಕೃಷಿಕ, ಗುತ್ತಿಗೆದಾರ ಅಲ್ವಿನ್ ಮಿನೇಜಸ್  ಶೌಚಾಲಯದ ಗುಂಡಿ ತೆಗೆದುಕೊಟ್ಟರು.  ನೆತ್ತೋಡಿ ರಸ್ತೆಯಿಂದ ಇಳಿಜಾರು ಇಳಿದು ಮತ್ತೆ ಏರು ಹಾದಿಯಲ್ಲಿ  ಅದೂ ಮಳೆಬಿದ್ದಾಗ ಕೆಸರು ಕೆಸರಾದ ಮಾರ್ಗದಲ್ಲಿ ಸ್ವತ: ಅನಿಲ್ ಅವರೇ ಕೆಂಪುಕಲ್ಲು ಹೊತ್ತು ರಾಶಿ ಹಾಕಿದರು. ಅವರೇ ಪೆಯಿಂಟ್ ಕೂಡ ಕೊಡುತ್ತಿದ್ದಾರೆ!

ಇದೇ ಸೆ. 23ಕ್ಕೆ ವನಿತಾ ಮತ್ತು ಮಕ್ಕಳು ʼಆಸರೆʼ ಪಡೆದು ನೆಲೆಕಾಣಲಿದ್ದಾರೆ. ಸಿಟ್‌ಔಟ್, ಪುಟ್ಟ ಚಾವಡಿ, ಮಲಗುವ ಕೋಣೆ, ಆಗ್ನೇಯದಲ್ಲಿ ಅಡುಗೆ ಕೋಣೆ ಪೂರ್ಣಗೊಂಡಿದೆ. ಅದರಾಚೆ ಶೌಚಾಲಯ ನಿರ್ಮಾಣವಾಗಲಿದೆ. ನೀರಿನ ಸಮಸ್ಯೆ ಇದೆ. ಅದಕ್ಕೆ ಪರಿಹಾರ ಮಾರ್ಗ ಕಂಡುಕೊಳ್ಳಬೇಕಾಗಿದೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.