ಬಂಟ್ವಾಳ: ಪಂಜಿಕಲ್ಲಿನ ಗುಡ್ಡ ಕುಸಿತ ಪ್ರಕರಣ : ಮೃತರ ಕುಟುಂಬಕ್ಕೆ ಪರಿಹಾರ ಹಸ್ತಾಂತರ


Team Udayavani, Jul 13, 2022, 1:23 AM IST

ಬಂಟ್ವಾಳ: ಪಂಜಿಕಲ್ಲಿನ ಗುಡ್ಡ ಕುಸಿತ ಪ್ರಕರಣ : ಮೃತರ ಕುಟುಂಬಕ್ಕೆ ಪರಿಹಾರ ಹಸ್ತಾಂತರ

ಬಂಟ್ವಾಳ : ಪಂಜಿಕಲ್ಲಿನ ಮುಕ್ಕುಡದಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿ ಮೃತಪಟ್ಟ ಕೇರಳ ಮೂಲದ ಮೂವರು ರಬ್ಬರ್‌ ಟ್ಯಾಪಿಂಗ್‌ ಕಾರ್ಮಿಕರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಂಟ್ವಾಳದ ನಿರೀಕ್ಷಣಾ ಮಂದಿರದಲ್ಲಿ ತಲಾ 5 ಲಕ್ಷ ರೂ.ಗಳ ಚೆಕ್‌ ವಿತರಿಸಿದರು.

ಬಳಿಕ ಸಿಎಂ ಮಾತನಾಡಿ, ಈ ಬಾರಿ ಬಂಟ್ವಾಳದಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳ ಚಿತ್ರಣವನ್ನು ವಿಡಿಯೋ ಮೂಲಕ ವೀಕ್ಷಿಸಿದರು. ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ತಾಲೂಕಿನ ಪರಿಸ್ಥಿತಿಯನ್ನು ಸಿಎಂ ಅವರಿಗೆ ವಿವರಿಸಿದರು. ಬಳಿಕ ಕೆಲಹೊತ್ತು ಸಚಿವರು-ಶಾಸಕರ ಜತೆ ಗೌಪ್ಯ ಮಾತುಕತೆ ನಡೆಸಿದರು.

ಮೃತರ ಕುಟುಂಬದವರ ಆಗಮನ
ಘಟನೆಯಲ್ಲಿ ಮೃತಪಟ್ಟ ಬಿಜು ಪಾಲಕ್ಕಾಡ್‌, ಸಂತೋಷ್‌ ಅಲಪುರ, ಬಾಬು ಕೊಟ್ಟಾಯಂ ಅವರ ಕುಟುಂಬಸ್ಥರು ಆಗಮಿಸಿ ಪರಿಹಾರದ ಚೆಕ್‌ ಪಡೆದರು. ಅವರಿಗೆ ಮಲಯಾಳಂ ಹೊರತುಪಡಿಸಿದರೆ ಉಳಿದಂತೆ ಯಾವುದೇ ಭಾಷೆ ಬರುತ್ತಿರಲಿಲ್ಲ.

ದ.ಕ.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು, ಕಂದಾಯ ಸಚಿವ ಆರ್‌.ಅಶೋಕ್‌, ಲೋಕೋ ಪಯೋಗಿ ಸಚಿವ ಸಿ.ಸಿ. ಪಾಟೀಲ್‌, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್‌ಕುಮಾರ್‌, ಮೀನುಗಾರಿಕಾ ಸಚಿವ ಎಸ್‌.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ನಿಗಮಗಳ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್‌, ರವೀಂದ್ರ ಶೆಟ್ಟಿ ಉಳಿದೊಟ್ಟು, ಸಂತೋಷ್‌ ಕುಮಾರ್‌ ರೈ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ, ದ.ಕ.ಜಿ.ಪಂ. ಸಿಇಒ ಡಾ| ಕುಮಾರ್‌, ಮಂಗಳೂರು ಸಹಾಯಕ ಕಮೀಷನರ್‌ ಮದನ್‌ಮೋಹನ್‌ ಸಿ, ಬಂಟ್ವಾಳ ತಹಶೀಲ್ದಾರ್‌ ಡಾ| ಸ್ಮಿತಾ ರಾಮು, ತಾ.ಪಂ.ಇಒ ರಾಜಣ್ಣ, ಪುರಸಭಾ ಮುಖ್ಯಾಧಿಕಾರಿ ಎಂ.ಆರ್‌.ಸ್ವಾಮಿ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಬುಡಾ ಅಧ್ಯಕ್ಷ ಬಿ.ದೇವದಾಸ್‌ ಶೆಟ್ಟಿ, ನಗರ ನೀರು ಸರಬರಾಜು ಮಂಡಳಿಯ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್‌, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್‌ ಕರ್ಕಳ ಮೊದಲಾದವರಿದ್ದರು.

ಮಸಾಲೆ ದೋಸೆ ಸವಿದ ಸಿಎಂ
ಸಂಜೆ 6.15ಕ್ಕೆ ಆಗಮಿಸಿದ ಸಿಎಂ ಅವರು ಅರ್ಧ ತಾಸು ಕಾಲ ಇದ್ದರು. ಬಂಟ್ವಾಳ ಆರ್ಯದುರ್ಗಾ ಕ್ಯಾಟರಿಂಗ್‌ನವರ ಮಸಾಲೆ ದೋಸೆ, ಅವಲಕ್ಕಿ, ಹಲ್ವಾ, ಗೋಳಿಬಜೆ, ಶೀರಾ, ಚಟ್ನಿ ಹಾಗೂ ಗೋಡಂಬಿ ಸವಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.