‘ಒಡಿಎಫ್‌ ಪ್ಲಸ್‌ ಪ್ಲಸ್‌’ ಗರಿಯತ್ತ ಮಹಾನಗರ ಪಾಲಿಕೆ

ಸಮುದಾಯ, ಸಾರ್ವಜನಿಕ ಶೌಚಾಲಯ ಸುಸ್ಥಿರತೆ ಮಾನದಂಡ

Team Udayavani, Apr 19, 2022, 10:57 AM IST

corporation

ಮಹಾನಗರ: ಬಿಬಿಎಂಪಿ ಮತ್ತು ಮೈಸೂರು ಪಾಲಿಕೆಯ ಬಳಿಕ ಇದೀಗ ಮಂಗಳೂರು ಪಾಲಿಕೆಯು ‘ಒಡಿಎಫ್‌ ಪ್ಲಸ್‌ ಪ್ಲಸ್‌’ ಗರಿಯನ್ನು ತನ್ನದಾಗಿಸಲು ಮುಂದಡಿ ಇಡುತ್ತಿದೆ.

ಮಂಗಳೂರು ಮಹಾನಗರ ಪಾಲಿಕೆ ಈಗಾಗಲೇ ಒಡಿಎಫ್‌ ಮತ್ತು ಒಡಿಎಫ್‌ ಪ್ಲಸ್‌ ಗ್ರೇಡ್‌ ಹೊಂದಿದ್ದು, ಈ ವರ್ಷ ಒಡಿಎಫ್‌ ಪ್ಲಸ್‌ ಪ್ಲಸ್‌ ಸ್ಥಾನಕ್ಕಾಗಿ ಸ್ಪರ್ಧೆಗಿಳಿದಿದೆ. ನಗರದ ಶೌಚಾಲಯಗಳನ್ನು ಅತ್ಯಂತ ಉತ್ತಮ ಮಟ್ಟದಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದು ಒಡಿಎಫ್‌ ಪ್ಲಸ್‌ ಪ್ಲಸ್‌ ಪ್ರಮುಖ ಮಾನದಂಡವಾಗಿದ್ದು, ಈಗಾಗಲೇ ಈ ನಿಟ್ಟಿನಲ್ಲಿ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ನಗರದಲ್ಲಿ ಸರ್ವೇ ನಡೆಸಿದ್ದಾರೆ. ಇನ್ನೇನು ಕೆಲವು ದಿನಗಳಲ್ಲಿಯೇ ಫಲಿತಾಂಶವೂ ಹೊರ ಬೀಳಲಿದೆ.

ಒಡಿಎಫ್‌ ಪ್ಲಸ್‌ ಪ್ಲಸ್‌ ಸ್ಥಾನಮಾನ ಹೊಂದಲು ನಗರದ ಸಾರ್ವಜನಿಕ ಹಾಗೂ ಸಮುದಾಯ ಶೌಚಾಲಯಗಳು ಸ್ವಚ್ಛವಾಗಿರಬೇಕು. ಏರ್‌ಪ್ರಷನರ್‌, ಟವೆಲ್‌, ಸಾಬೂನು, ಮಕ್ಕಳಿಗೆ ಅನುಕೂಲಕರ ಶೌಚಾಲಯ (ಎತ್ತರ), ನ್ಯಾಪ್‌ ಕಿನ್‌, ಕೈ ಒಣಗಿಸುವ ಯಂತ್ರ ಇದ್ದು, ಶೌಚಾಲಯದ ಹೊರ ಪ್ರದೇಶ ರಾತ್ರಿ ವೇಳೆ ಕತ್ತಲಿನಿಂದ ಕೂಡಿರಬಾರದು. ಎಲ್ಲ ಶೌಚಾಲಯಗಳ ಕಟ್ಟಡಗಳು ಸುವ್ಯವಸ್ಥೆಯಲ್ಲಿವೆ ಎಂದು ಪ್ರಮಾಣೀಕರಿಸಿರಬೇಕು ಎನ್ನುವುದು ಸಹಿತ ಹಲವು ಪ್ರಮುಖ ಮಾನದಂಡಗಳ ಮೇಲೆ ಒಡಿಎಫ್‌ ಪ್ಲಸ್‌ ಪ್ಲಸ್‌ ಗ್ರೇಡ್‌ ಸಿಗುತ್ತದೆ.

ಪಾಲಿಕೆಯಲ್ಲಿ ಹರಿನಾಥ್‌ ಅವರು ಮೇಯರ್‌ ಆಗಿದ್ದಾಗ ಮಂಗಳೂರನ್ನು ಬಯಲು ಮಲ ವಿಸರ್ಜನೆ ಮುಕ್ತ ನಗರವೆಂದು (ಒಡಿಎಫ್‌) ಘೋಷಣೆ ಮಾಡಲಾಗಿತ್ತು. ಮುಂದೆ ‘ಒಡಿಎಫ್‌ ಪ್ಲಸ್‌’ ನಗರವಾಗಿ ಬೆಳೆಯಲು ಅರ್ಹತೆ ಪಡೆದಿತ್ತು. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸಮುದಾಯ ಮತ್ತು ಸಾರ್ವಜನಿಕ ಶೌಚಾಲಯಗಳ ಸುಸ್ಥಿರತೆ ಉದ್ದೇಶದಿಂದ ಮಂಗಳೂರು ನಗರವನ್ನು ಕಳೆದ ವರ್ಷ ಒಡಿಎಫ್‌ ಪ್ಲಸ್‌ ಆಗಿ ಘೋಷಣೆ ಮಾಡಲಾಗಿತ್ತು.

ಸರ್ವೇ ಪೂರ್ಣ

ಮಂಗಳೂರು ಮಹಾನಗರ ಪಾಲಿಕೆ ಈ ಬಾರಿ ಒಡಿಎಫ್‌ ಪ್ಲಸ್‌ ಪ್ಲಸ್‌ ಸ್ಪರ್ಧೆಯಲ್ಲಿ ಸ್ಪರ್ಧಿಸುತ್ತಿದೆ. ಕಳೆದ ಬಾರಿ ಪಾಲಿಕೆಗೆ ಒಡಿಎಫ್‌ ಪ್ಲಸ್‌ ಪ್ರಮಾಣಪತ್ರ ಸಿಕ್ಕಿತು. ಒಡಿಎಫ್‌ ಪ್ಲಸ್‌ ಪ್ಲಸ್‌ ಸ್ಪರ್ಧೆಯ ಹಿನ್ನೆಲೆಯಲ್ಲಿ ಕೇಂದ್ರದ ತಂಡ ಈಗಾಗಲೇ ಮಂಗಳೂರು ನಗರದಲ್ಲಿ ಸರ್ವೇ ನಡೆಸಿದ್ದು, ಇನ್ನು ಫಲಿತಾಂಶ ಘೋಷಣೆ ಮಾಡಿಲ್ಲ. ಈ ಫಲಿತಾಂಶವು ಸ್ವಚ್ಛ ಸರ್ವೇಕ್ಷಣೆ ಉತ್ತಮ ಅಂಕ ಪಡೆಯಲು ಸಹಕಾರಿಯಾಗಲಿದೆ. -ಅಕ್ಷಯ್‌ ಶ್ರೀಧರ್‌, ಪಾಲಿಕೆ ಆಯುಕ್ತರು

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.