![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Aug 31, 2019, 1:31 PM IST
ಮಂಗಳೂರು: ಯಾವುದೇ ಮುಂಜಾಗೃತ ಕ್ರಮ ಕೈಗೊಳ್ಳದೆ ಅವೈಜ್ಞಾನಿಕವಾಗಿ ಪಚ್ಚನಾಡಿಯಲ್ಲಿ ತ್ಯಾಜ್ಯ ಸಂಗ್ರಹ ಮಾಡಿದ್ದರಿಂದ ನೆರೆ ಸಂದರ್ಭದಲ್ಲಿ ಬಹಳಷ್ಟು ಮನೆಗಳಿಗೆ ಹಾನಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪಚ್ಚನಾಡಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ತ್ಯಾಜ್ಯ ಹಾಕುವ ಮೊದಲು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಮೊದಲೇ ರಿಟೈನಿಂಗ್ ಹಾಲ್ ಹಾಕಿದ್ದರೆ ಈ ರೀತಿ ಹಾನಿ ಆಗುತ್ತಿರಲಿಲ್ಲ. ಈಗಾಗಲೇ 27 ಮನೆಗಳಿಗೆ ಹಾನಿಯಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಈ ಜಾಗವನ್ನು ಒತ್ತುವರಿ ಮಾಡಿ ಶಾಶ್ವತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಡಿಕೆಶಿ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ. ಕಾನೂನು ಪ್ರಕಾರ ಹೋರಾಟ ಮಾಡುವ ಮೂಲಕ ಡಿಕೆ ಶಿವಕುಮಾರ್ ಅವರು ಸಮಸ್ಯೆಯನ್ನು ಸರಿಪಡಿಸಿಕೊಳ್ಳಲಿದ್ದಾರೆ . ಕೆಪಿಸಿಸಿ ಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ ಏನು ಇಲ್ಲ ಎಂದು ಇದೇ ವೇಳೆ ತಿಳಿಸಿದರು .
ಬೆಳ್ತಂಗಡಿಗೆ ಆಗಮಿಸಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಕಚೇರಿಗೆ ತೆರಳಿ, ಆ ಬಳಿಕ ಪ್ರವಾಹ ಪೀಡಿತ ಚಾರ್ಮಾಡಿ ಪ್ರದೇಶಕ್ಕೆ ತೆರಳಲಿದ್ದಾರೆ. ಮಾಜಿ ಶಾಸಕ ಕೆ.ವಸಂತ ಬಂಗೇರ, ಮಾಜಿ ಸಚಿವ ಬಿ.ರಮಾನಾಥ ರೈ ಮೊದಲಾದ ಗಣ್ಯರು ಭಾಗಿಯಾಗಲಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.