ಕೋವಿಡ್-19 ಗೆದ್ದ ನಾಲ್ವರು


Team Udayavani, Apr 7, 2020, 5:30 AM IST

ಕೋವಿಡ್-19 ಗೆದ್ದ ನಾಲ್ವರು

ಮಂಗಳೂರು: ಕೋವಿಡ್-19 ಸೋಂಕಿತ ರಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಸಂಪೂರ್ಣ ಗುಣಮುಖರಾಗಿ ಸೋಮವಾರ ಬಿಡುಗಡೆಗೊಂಡಿದ್ದಾರೆ. ಮುಂದಿನ 14 ದಿನಗಳ ಕಾಲ ಅವರೆಲ್ಲರೂ ಮನೆಯಲ್ಲೇ ನಿಗಾವಣೆಯಲ್ಲಿ ಇರಲಿದ್ದಾರೆ.

ದುಬಾೖಯಲ್ಲಿ ಬ್ರ್ಯಾಂಡೆಡ್‌ ವಾಚ್‌ ವ್ಯಾಪಾರ ನಡೆಸುತ್ತಿದ್ದ ಭಟ್ಕಳ ಮೂಲದ 22ರ ಯುವಕ, ದುಬಾೖಯಿದ ಮಂಗಳೂರಿಗೆ ಬಂದಿದ್ದ ಕಾಸರ ಗೋಡು ಮೂಲದ 32 ವರ್ಷದ ಯುವಕ, 47 ವರ್ಷದ ಪುರುಷ ಹಾಗೂ 24 ವರ್ಷದ ಯುವಕ ಆಸ್ಪತ್ರೆಯಿಂದ ಬಿಡುಗಡೆಯಾದವರು.

ಭಟ್ಕಳದ ಯುವಕ ಮಾ. 19ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ. ತಪಾಸಣೆ ಸಂದರ್ಭ ರೋಗ ಲಕ್ಷಣಗಳಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಂದಲೇ ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ. 22ರಂದು ಆತನಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಇದು ಮೊದಲ ಪ್ರಕರಣವಾಗಿತ್ತು. ಆತನಿಗೆ ಪ್ರತ್ಯೇಕ ಐಸೋಲೇಶನ್‌ ವಾರ್ಡ್‌ ನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. 14 ದಿನಗಳ ಅನಂತರ ಮತ್ತೂಮ್ಮೆ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿ ವರದಿ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಬಿಡುಗಡೆ ಮಾಡಲಾಯಿತು. ಮನೆ ಮಂದಿ ಕಾರಿನಲ್ಲಿ ಭಟ್ಕಳಕ್ಕೆ ಕರೆದೊಯ್ದರು.

ಉಳಿದ ಮೂವರೂ ಡಿಸ್‌ಚಾರ್ಜ್‌
ಆಸ್ಪತ್ರೆಯಿಂದ ಬಿಡುಗಡೆಯಾದ ಉಳಿದ ಮೂವರ ಪೈಕಿ ದುಬಾೖಯಿಂದ ಮಾ. 19ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕಾಸರಗೋಡಿನ 47 ವರ್ಷದ ವ್ಯಕ್ತಿ, 20ರಂದು ಆಗಮಿಸಿದ್ದ ಕಾಸರ ಗೋಡು ಮೂಲದ 32 ವರ್ಷ ಮತ್ತು 24 ವರ್ಷದ ವ್ಯಕ್ತಿಯನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಪಡಿಸಿದಾಗ ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ನೇರವಾಗಿ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆ್ಯಂಬುಲೆನ್ಸ್‌ ಮುಖಾಂತರ ಕಳುಹಿಸಿಕೊಡಲಾಗಿತ್ತು. ಅವರ ಪರೀಕ್ಷಾ ವರದಿಕ್ರಮವಾಗಿ ಮಾ. 23, 24ರಂದು ಬಂದಾಗ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಎ. 4ರಂದು ಮತ್ತೂಮ್ಮೆ ಎಲ್ಲರ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ವರದಿ ನೆಗೆಟಿವ್‌ ಬಂದಿದೆ. ಈ ಹಿನ್ನೆಲೆಯಲ್ಲಿ ಮೂವರನ್ನೂ ಮಧ್ಯಾಹ್ನದ ಬಳಿಕ ಬಿಡುಗಡೆ ಮಾಡಲಾಯಿತು.

ಜಿಲ್ಲಾಡಳಿತಕ್ಕೆ ಮೊದಲ ಯಶಸ್ಸು
ಜಿಲ್ಲೆಯಲ್ಲಿ ಮೊದಲ ಪಾಸಿಟಿವ್‌ ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತತ್‌ಕ್ಷಣದಿಂದಲೇ ಕೈಗೊಂಡಿತ್ತು. ಇದೊಂದು ಸವಾಲಿನ ಪ್ರಕರಣ ವಾಗಿತ್ತು. ಈ ನಿಟ್ಟಿನಲ್ಲಿ ವೆನ್ಲಾಕ್ ಅಧೀಕ್ಷಕರು, ವೈದ್ಯರು, ನರ್ಸ್‌ ಹಾಗೂ ಸಿಬಂದಿ ತಮ್ಮ ಪೂರ್ಣ ಸೇವೆಯನ್ನು ಮೀಸಲಿಟ್ಟು, ಅಂತಿಮವಾಗಿ ರೋಗಿಗಳನ್ನು ಗುಣಮುಖಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆತ್ಮವಿಶ್ವಾಸವಿರಲಿ
ಕೋವಿಡ್-19ಕ್ಕೆ ಹೆದರುವ ಅಗತ್ಯವಿಲ್ಲ. ಆತ್ಮವಿಶ್ವಾಸವೇ ಇಲ್ಲಿ ಮುಖ್ಯ. ಸೋಂಕಿನ ವಿರುದ್ಧ ಹೋರಾಡಲು ನಮ್ಮಲ್ಲಿ ಧೈರ್ಯ ಮುಖ್ಯ. ಇದು ದ.ಕ. ಜಿಲ್ಲೆಯಲ್ಲಿ ಕೊರೊನಾ ದಿಂದ ಗುಣಮುಖನಾದ ಭಟ್ಕಳದ ಯುವಕ ಜನರಿಗೆ ನೀಡಿದ ಧೈರ್ಯದ ಮಾತುಗಳು.

331 ಪೈಕಿ 319 ವರದಿ ನೆಗೆಟಿವ್‌
ದ.ಕ. ಜಿಲ್ಲೆಯಲ್ಲಿ ಈವರೆಗೆ ಪರೀಕ್ಷೆಗೆ ಕಳುಹಿಸಿರುವ 341 ಮಂದಿಯ ಗಂಟಲು ದ್ರವ ಮಾದರಿ ಪೈಕಿ 331 ಮಂದಿಯ ವರದಿ ಸ್ವೀಕರಿಸಲಾಗಿದ್ದು, 319 ನೆಗೆಟಿವ್‌ ಆಗಿದ್ದು, 12 ಪಾಸಿಟಿವ್‌ ಬಂದಿದೆ.ಇತ್ತೀಚೆಗೆ ದಾಖಲಾದವರ ಪೈಕಿ 21 ಮಂದಿಯ ಗಂಟಲು ದ್ರವ ಮಾದರಿ ವರದಿ ಸೋಮವಾರ ಜಿಲ್ಲಾಡಳಿತದ ಕೈ ಸೇರಿದ್ದು, ಎಲ್ಲವೂ ನೆಗೆಟಿವ್‌ ಆಗಿವೆ. 10 ವರದಿಗಳು ಸ್ವೀಕರಿಸಲು ಬಾಕಿ ಇದೆ. 10 ಮಾದರಿಗಳನ್ನು ಸೋಮವಾರ ಪರೀಕ್ಷೆಗೆ ಕಳುಹಿಸಲಾಗಿದೆ. 21 ಮಂದಿಯನ್ನು ಸೋಮವಾರ ತಪಾಸಣೆಗೊಳಪಡಿಸಲಾಗಿದೆ. ಈವರೆಗೆ 4,237 ಮಂದಿ ಗೃಹ ನಿಗಾವಣೆಯಲ್ಲಿದ್ದು, 10 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿದ್ದಾರೆ. 1,709 ಮಂದಿ ಇಲ್ಲಿವರೆಗೆ 29 ದಿನಗಳ ನಿಗಾ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.