ಕರಾವಳಿ ಅಪರಾಧ ಸುದ್ದಿಗಳು
Team Udayavani, Apr 28, 2019, 10:34 AM IST
ಅರಂತೋಡು: ಗ್ಯಾಸ್ ವಿತರಣೆ ವಾಹನಕ್ಕೆ ಬೆಂಕಿ
ಅರಂತೋಡು: ಇಲ್ಲಗೆ ಸಮೀಪದ ಕಿರ್ಲಾಯದಲ್ಲಿ ಶುಕ್ರವಾರ ಸಂಜೆ ಗ್ಯಾಸ್ ವಿತರಣೆಯ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗಲು ಗಾಡಿ ಸಂಪೂರ್ಣ ಸುಟ್ಟು ಹೋಗಿದೆ.
ಅರಂತೋಡಿನ ಎಚ್.ಪಿ. ಗ್ಯಾಸ್ ಸಿಲಿಂಡರ್ಗಳನ್ನು ತಾಜುದ್ದೀನ್ ಟರ್ಲಿ ಅವರು ಕಮಿಷನ್ ಆಧಾರದಲ್ಲಿ ತನ್ನ ವಾಹನದಲ್ಲಿ ಮನೆ ಮನೆಗಳಿಗೆ ವಿತರಣೆ ಮಾಡುತ್ತಿದ್ದರು. ಕಿರ್ಲಾಯಕ್ಕೆ ತಲುಪಿದಾಗ ವಾಹನದಲ್ಲಿ ಹೊಗೆ ಕಂಡು ಬಂತು. ಕೂಡಲೇ ಅವರು ವಾಹನವನ್ನು ನಿಲ್ಲಿಸಿದ್ದು, ಆಗ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಅಗ್ನಿ ಶಾಮಕದಳದವರು ಬಂದು ಬೆಂಕಿ ನಂದಿಸಿದರು. ಗ್ಯಾಸ್ ತುಂಬಿದ್ದ ಮೂರು ಸಿಲಿಂಡರ್ಗಳು ಕೆಲವು ಖಾಲಿ ಸಿಲಿಂಡರ್ಗಳಿದ್ದವು. ಸುಮಾರು 25,000 ರೂ. ಹಾಗೂ ಇತರ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
*
ಕಾರುಗಳು ಢಿಕ್ಕಿ: ನಾಲ್ವರಿಗೆ ಗಾಯ
ಕುಂಬಳೆ: ಕಾಸರಗೋಡು ಹೊರ ವಲಯದ ಕಾಲಿಕ್ಕಡವು ಆಣೂರು ತಿರುವು ರಸ್ತೆಯಲ್ಲಿ ಕಾರುಗಳೆರಡು ಢಿಕ್ಕಿ ಹೊಡೆದು ನಾಲ್ವರು ಗಾಯಗೊಂಡಿದ್ದಾರೆ.
ಕರಿವೆಳ್ಳೂರಿನ ವಿವಾಹ ಸಮಾರಂಭವೊಂದಕ್ಕೆ ತೆರಳುತ್ತಿದ್ದ ಕಾಸರಗೋಡು ಜಿಲ್ಲಾ ಸಿ.ಪಿ.ಎಂ.ಕಾರ್ಯದರ್ಶಿ ಎಂ.ವಿ. ಬಾಲಕೃಷ್ಣನ್ ಮಾಸ್ಟರ್ (65) ಕಾರು ಚಾಲಕ ರಾಜನ್ ಪಾಲಾಯಿ (58) ಅವರು ಪಯ್ಯನ್ನೂರು ಸಹಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಪರಶಿನಕಡವು ಕೇÒತ್ರಕ್ಕೆ ತೆರಳಿ ಮರಳುತ್ತಿದ್ದ ಇನ್ನೊಂದು ಕಾರಿನಲ್ಲಿದ್ದ ಕುಂಡಂಗುಳಿ ನಿವಾಸಿ ಕೆ.ಮೋಹನನ್ (42) ಮತ್ತು ಪತ್ನಿ ಶೋಭಾ (37) ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
MRPL: ಕರಾವಳಿಗೆ ಮೊದಲ “ಗ್ರೀನ್ ಹೈಡ್ರೋಜನ್’ ಘಟಕ
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.