‘ಮಾತೃಭಾಷೆಯೊಂದಿಗೆ ಸಂಸ್ಕಾರವನ್ನೂ ರೂಢಿಸಿ’


Team Udayavani, Jun 2, 2018, 12:56 PM IST

2-june-13.jpg

ಮೂಡಬಿದಿರೆ: ಕನ್ನಡವೆಂದರೆ ನಮ್ಮ ಹೆತ್ತ ತಾಯಿ. ಆಂಗ್ಲ ಭಾಷೆ ಮಲತಾಯಿ. ಭಾಷೆಯಾಗಿ ಇಂಗ್ಲಿಷ್‌ ಬಳಸಬಹುದು. ಆದರೆ ಕನ್ನಡವನ್ನು ತಿರಸ್ಕರಿಸಿ ಅಲ್ಲ. ಮಾತೃಭಾಷೆಯೊಂದಿಗೆ ಮಗು ಸಂಸ್ಕಾರವನ್ನೂ ರೂಢಿಸಿಕೊಂಡು ಬೆಳೆಯುವಂಥ ಶೈಕ್ಷಣಿಕ ವಾತಾವರಣ ನಿರ್ಮಿಸಬೇಕಾಗಿದೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ನುಡಿದರು.

ಕಡಲಕೆರೆಯ ಬಳಿ ಪ್ರೇರಣಾ ಶಿಶು ಮಂದಿರ ಹಾಗೂ 94 ವರ್ಷಗಳ ಇತಿಹಾಸವುಳ್ಳ ಸೈಂಟ್‌ ಇಗ್ನೇಶಿಯಸ್‌ ಹಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ ಶಿಲಾನ್ಯಾಸವನ್ನು ಶುಕ್ರವಾರ ನೆರವೇರಿಸಿದ ಅವರು, ‘ಸಾಧಕರು ತಮ್ಮ ಮಾತೃಭಾಷೆಯಲ್ಲೇ ಕಲಿತವರೆಂಬುದನ್ನು ಅರಿತರೆ ಆಂಗ್ಲ ಭಾಷಾ ಮಾಧ್ಯಮದ ಕುರಿತಾದ ಪೋಷಕರ ವ್ಯಾಮೋಹ ಕಡಿಮೆಯಾಗಲಿದೆ ಎಂದರು.

ಕರ್ನಾಟಕ ದಕ್ಷಿಣ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಸಂಘ ಚಾಲಕ್‌ ಡಾ| ವಾಮನ ಶೆಣೈ ದೀಕ್ಷಾ ವಿಧಿ ಪ್ರಬೋಧನೆಗೈದರು.

ಸಂಸದರ ನೆರವು
ಮುಖ್ಯ ಅಭ್ಯಾಗತರಾಗಿ ಪಾಲ್ಗೊಂಡ ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಕಡಲಕೆರೆ ಶಾಲೆಗೆ ಈ ಹಿಂದೆ ಸಂಸದರ ನಿಧಿಯಿಂದ ರೂ. 2 ಲಕ್ಷ ನೀಡಿದ್ದು ಈಗ ಮತ್ತೆ 3ಲಕ್ಷ ರೂ. ಒದಗಿಸುವ ಜತೆಗೆ ಇತರ ಉದ್ಯಮಗಳ ಸಿಎಸ್‌ಆರ್‌ ನಿಧಿಯಿಂದಲೂ ಸಹಾಯಧನ ಒದಗಿಸಲಾಗುವುದು ಎಂದರು.

ಶಾಸಕ ಉಮಾನಾಥ ಕೋಟ್ಯಾನ್‌ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಗಳು ಸೊರಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮಗೆಲ್ಲರಿಗೂ ಇದೆ ಎಂದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಹನೀಫ್‌ ಅಲಂಗಾರು ಮುಖ್ಯ ಅತಿಥಿಯಾಗಿದ್ದರು. ಅಧ್ಯಕ್ಷತೆ ವಹಿಸಿದ್ದ ಸೇವಾಂಜಲಿ ಎಜುಕೇಶನ್‌ ಟ್ರಸ್ಟ್‌ ಸಂಚಾಲಕ ಪ್ರೊ| ಎಂ. ವಾಸುದೇವ ಭಟ್‌ ಪ್ರಸ್ತಾವನೆಗೈದರು.

ರೂ. 25,000 ಕೊಡುಗೆ
ಉದ್ಯಮಿ ರಂಜಿತ್‌ ಪೂಜಾರಿ ಅವರು ನೂತನ ಕಟ್ಟಡ ನಿಧಿಗೆ ರೂ. 25,000ದ ಕೊಡುಗೆ ನೀಡಿದರು. ಪ್ರೇರಣಾ ಸೇವಾ ಟ್ರಸ್ಟ್‌ ಸಂಚಾಲಕ ಚೇತನ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ವೆಂಕಟರಮಣ ಕೆರೆಗದ್ದೆ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯ ಬಿ. ಜಯರಾಮ ರಾವ್‌ ವಂದಿಸಿದರು.

ತಾಲೂಕಿಗೊಂದು ಆದರ್ಶ ಕನ್ನಡ ಶಾಲೆ 
ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಯನ್ನು ವಾರ್ಷಿಕ 5 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಉಚಿತವಾಗಿ ನಡೆಸುತ್ತಿರುವ ತಮ್ಮ ಪ್ರಯತ್ನದ ಬಗ್ಗೆ ಬೆಳಕು ಚೆಲ್ಲಿ, ಸರಕಾರ ತಾಲೂಕಿಗೊಂದಾದರೂ ಆದರ್ಶವಾದ ಕನ್ನಡ ಶಾಲೆಯನ್ನು ತೆರೆದು ನಡೆಸಬೇಕು ಎಂದರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.