Dakshina Kannada: ಎಸೆಸೆಲ್ಸಿಯ 4,742 ವಿದ್ಯಾರ್ಥಿಗಳಿಗೆ ‘ದತ್ತಾಂಶ ಸೂತ್ರ’!

ಫಲಿತಾಂಶದಲ್ಲಿ ಅಗ್ರ ಸ್ಥಾನಕ್ಕಾಗಿ ಶಿಕ್ಷಣ ಇಲಾಖೆ ಸಂಕಲ್ಪ

Team Udayavani, Oct 25, 2024, 8:30 AM IST

WhatsApp Image 2024-10-25 at 02.14.40

ಮಂಗಳೂರು: ಎಸೆಸೆಲ್ಸಿಯಲ್ಲಿ 2023-24ರಲ್ಲಿ ಶೇ.92.12 ಫಲಿತಾಂಶದೊಂದಿಗೆ ರಾಜ್ಯದಲ್ಲಿ 2ನೇ ಸ್ಥಾನ ಪಡೆದ ದಕ್ಷಿಣ ಕನ್ನಡ ಜಿಲ್ಲೆಯು ಈ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ‘ದತ್ತಾಂಶ ಸೂತ್ರ’ವೊಂದನ್ನು ಶಿಕ್ಷಣ ಇಲಾಖೆ ಹೊಸದಾಗಿ ಅನುಷ್ಠಾನಿಸಿದೆ.

ದ. ಕ. ಜಿಲ್ಲೆಯಲ್ಲಿ 525 ಶಾಲೆಗಳಿದ್ದು 10ನೇ ತರಗತಿಯಲ್ಲಿ 28,612 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಪೈಕಿ 4742 ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದವರು ಎಂದು ಇಲಾಖೆ ಪತ್ತೆ ಹಚ್ಚಿತ್ತು. ಇವರನ್ನು ಇತರ ಮಕ್ಕಳ ಸಾಲಿಗೆ ತರುವ ನಿಟ್ಟಿನಲ್ಲಿ ದತ್ತಾಂಶ ಸೂತ್ರ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ.

ಬಂಟ್ವಾಳ ವಲಯದಲ್ಲಿ 1052, ಬೆಳ್ತಂಗಡಿ 650, ಮಂಗಳೂರು ಉತ್ತರ 773, ಮಂಗಳೂರು ದಕ್ಷಿಣ 1064, ಮೂಡುಬಿದಿರೆ 342, ಪುತ್ತೂರು 627, ಸುಳ್ಯ 234 ವಿದ್ಯಾರ್ಥಿಗಳನ್ನು ನಿಧಾನ ಕಲಿಕೆಯವರು ಎಂದು ಗುರುತಿಸಲಾಗಿದೆ.

ನಿಧಾನ ಕಲಿಕೆಯ ಮಕ್ಕಳನ್ನು ಆಯಾ ಶಾಲಾ ಶಿಕ್ಷಕರಿಗೆ ಹಂಚಿಕೆ ಮಾಡಿ ಮಕ್ಕಳಿಗೆ ಕಠಿನ ಇರುವ ವಿಷಯಗಳ ಬಗ್ಗೆ ಶಿಕ್ಷಕರು ಹೆಚ್ಚಿನ ತರಬೇತಿ ನೀಡುತ್ತಿದ್ದಾರೆ. ಜತೆಗೆ ಆ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸುವುದು, ಶಾಲೆಯಲ್ಲಿ ಆನಂದದಾಯಕ ಕಲಿಕಾ ವಾತಾವರಣ ನಿರ್ಮಿಸುವುದು ಇದರ ಉದ್ದೇಶ. ವಿಶೇಷ ತರಗತಿ ಆಯೋಜಿಸಿ ಪ್ರತಿದಿನ ಬೆಳಗ್ಗೆ 1 ಗಂಟೆ ತರಗತಿ ನಡೆಸಲಾಗುತ್ತದೆ. ದೀಕ್ಷಾ ಆ್ಯಪ್‌, ಇ-ಲರ್ನಿಂಗ್‌ ಸಾಧನ ಬಳಸಿ ಪಾಠ ಬೋಧಿಸಲಾಗುತ್ತದೆ. ಇದಕ್ಕಾಗಿಯೇ ಶಿಕ್ಷಕರಿಗೆ ವಿಷಯವಾರು ತರಬೇತಿ ನೀಡಲಾಗಿದೆ.

ನಿಧಾನ ಕಲಿಕೆಯ ವಿದ್ಯಾರ್ಥಿಗಳಿಗೆ ಹಾಗೂ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತಿದಿನ ಸ್ಟುಡಿಯೋ ಮೂಲಕ ಆನ್‌ಲೈನ್‌ ತರಬೇತಿ ನೀಡಲು ಉದ್ದೇಶಿಸಲಾಗಿದೆ.

‘ದತ್ತಾಂಶ ಸೂತ್ರದ ಪ್ರಯೋಗ ಆರಂಭವಾದ 2 ತಿಂಗಳ ಒಳಗೆ ನಿಧಾನ ಕಲಿಕೆಯ 4,742 ವಿದ್ಯಾರ್ಥಿಗಳ ಪೈಕಿ 1,200ರಷ್ಟು ವಿದ್ಯಾರ್ಥಿಗಳು ಕಲಿಕೆಯಲ್ಲಿ ಬಹಳಷ್ಟು ಸುಧಾರಣೆ ಕಂಡಿದ್ದಾರೆ’ ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

5-biggboss

BBK11: ಬಿಗ್ ಬಾಸ್ ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..! ಅಂಥದ್ದೇನಾಯಿತು?

3-dhyan-chand

Sports Ministry: ಧ್ಯಾನ್‌ಚಂದ್‌ ಪ್ರಶಸ್ತಿ ಬದಲು ಜೀವಮಾನದ ಅರ್ಜುನ ಪ್ರಶಸ್ತಿ

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-10-25 at 02.11.37

Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ

1

Surathkal: ತುಳುನಾಡಿನ ಆಹಾರ, ಐತಿಹಾಸಿಕ ಪರಂಪರೆ ಮಾಹಿತಿಗೆ ‘ಸೊಲ್ಮೆಲು’

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಯಾಣಿಕರ ಸಂಖ್ಯೆ ಹೆಚ್ಚಳ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

4

Surathkal: ಸಸಿಹಿತ್ಲು ಆಳಸಮುದ್ರದಲ್ಲಿ ಪ್ರಜ್ವಲ್‌ ಮೃತದೇಹ ಪತ್ತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

7-bng

Bengaluru: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ: ಸಿಎಂ

abhimanyu kashinath ellige payana yavudo daari movie

Ellige Payana Yavudo Daari Movie; ದಾರಿ ಹೊಸದಾಗಿದೆ ಗೆಲುವು ಬೇಕಾಗಿದೆ

9

Sullia ಆಸ್ಪತ್ರೆ ಶೆಡ್‌ನ‌ಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್‌ ಈಗ ರಸ್ತೆ ಬದಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.