ಪಾರಂಪರಿಕ ಶೈಲಿಯ ಡಿಸಿ ಕಚೇರಿ ಸಂಕೀರ್ಣ ಕಾಮಗಾರಿಗೆ ಗ್ರಹಣ!

ಅನುದಾನ ವಿಳಂಬ; ಹೆಚ್ಚುವರಿ ಮೊತ್ತಕ್ಕೆ ಇನ್ನೂ ಸಿಗದ ಅನುಮೋದನೆ

Team Udayavani, Feb 11, 2022, 5:24 PM IST

ಪಾರಂಪರಿಕ ಶೈಲಿಯ ಡಿಸಿ ಕಚೇರಿ ಸಂಕೀರ್ಣ ಕಾಮಗಾರಿಗೆ ಗ್ರಹಣ!

ಪಡೀಲ್‌: ಆಕರ್ಷಕ ಪಾರಂಪ ರಿಕ ಕಟ್ಟಡ ಶೈಲಿಯ ಪಡೀಲ್‌ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗಳ ಸಂಕೀರ್ಣ ನಿರ್ಮಾಣಕ್ಕೆ ಅನುದಾನ ಕೊರತೆ ಎದುರಾದ ಹಿನ್ನೆಲೆಯಲ್ಲಿ ಕಾಮಗಾರಿ ನಿಧಾನವಾಗಿದೆ!

ಸಂಕೀರ್ಣದ ಸಂಪೂರ್ಣ ಕಾಮಗಾರಿ ಮುಗಿಸಲು ಎರಡನೇ ಹಂತದ ಯೋಜನೆ ಸಿದ್ಧಪಡಿಸಲಾಗಿದ್ದು, ಅದಕ್ಕೆ 29 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಿ, ಸರಕಾರಕ್ಕೆ ಕಳುಹಿಸಿ ಕೆಲವು ತಿಂಗಳು ಕಳೆದಿದೆ. ಆದರೆ ಸರಕಾರದಲ್ಲಿ ಇನ್ನೂ ಅನುಮೋದನೆ ದೊರಕಿಲ್ಲ. ಹೀಗಾಗಿ ಕಾಮಗಾರಿಗೆ ವೇಗ ನೀಡಲು ಸಾಧ್ಯವಾಗಿಲ್ಲ. ಬಹುತೇಕ ಕಟ್ಟಡ, ಮೆಲ್ಛಾವಣಿ, ಬಾಗಿಲು ರೇಲಿಂಗ್‌ ಕಾಮಗಾರಿ ಮುಗಿ ದಿದೆ. 2ನೇ ಹಂತದ ಕಾಮಗಾರಿಯಲ್ಲಿ ಸಂಪೂರ್ಣ ಕಟ್ಟಡದ ಫಿನಿಶಿಂಗ್‌, 2 ಲಿಫ್ಟ್‌ ಅಳವಡಿಕೆ, ಸಭಾಂಗಣದಲ್ಲಿ ಎಸಿ, ಕುರ್ಚಿ ಸಹಿತ ಒಟ್ಟು ಪಿಠೊಪಕರಣ, ಕೇಬಲ್‌ ನೆಟ್‌ವರ್ಕ್‌, ಪೈಂಟಿಂಗ್‌, ಕಟ್ಟಡದ ಪಕ್ಕದ ಮಳೆ ಚರಂಡಿ ಅಭಿವೃದ್ಧಿ, ಆವರಣ ಗೋಡೆ, ಸಂಪೂರ್ಣ ಇಂಟರ್‌ಲಾಕ್‌ ಅಳವಡಿಸಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ. ಸರಕಾರ 29 ಕೋ.ರೂ. ವೆಚ್ಚದ ಅಂದಾಜು ಪಟ್ಟಿಗೆ ಅನುಮೋದನೆ ನೀಡಿದರೆ ಟೆಂಡರ್‌ ಪ್ರಕ್ರಿಯೆ ಮುಗಿದು ಕಾಮಗಾರಿ ಮುಗಿಸಲು 1 ವರ್ಷ ಬೇಕಾಗ ಬಹುದು.

2018ರಲ್ಲಿ ಆರಂಭ
2014ರಲ್ಲಿ ನೂತನ ಡಿಸಿ ಕಚೇರಿ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ದೊರಕಿತ್ತು. ಅರಣ್ಯ ಇಲಾಖೆ ಜಾಗದ ಹಸ್ತಾಂತರ, ಮರ ಕಡಿಯುವ ವಿರುದ್ಧ ಪರಿಸರವಾದಿಗಳು ನ್ಯಾಯಾಲಯದ ಮೊರೆ ಹೋಗಿದ್ದರಿಂದ ಚೆನ್ನೈಯ ಹಸಿರು ಪೀಠದಲ್ಲಿ ವ್ಯಾಜ್ಯ ಮುಗಿದು, 2018ರ ಮಾರ್ಚ್‌ ತಿಂಗಳಲ್ಲಿ ಗೃಹ ನಿರ್ಮಾಣ ಮಂಡಳಿಯು ಕಾಮಗಾರಿ ಆರಂಭಿಸಿತ್ತು. ಪ್ರಥಮ ಹಂತದ ಒಟ್ಟು 55 ಕೋಟಿ ರೂ. ಮೊತ್ತದಲ್ಲಿ 37 ಕೋ. ರೂ. ಬಿಡುಗಡೆಯಾಗಿದ್ದು, ಉಳಿಕೆ ಹಣ ಗುತ್ತಿಗೆದಾರರಿಗೆ ಬಿಡುಗಡೆಗೆ ಬಾಕಿ ಇದೆ. ಇಲ್ಲಿ ಸುಮಾರು 50 ಕೋಟಿ ರೂ. ಮೊತ್ತದ ಕಾಮಗಾರಿ ನಡೆದಿದೆ. ಸರಕಾರದ ವಿವಿಧ ಇಲಾಖೆಗಳು ಅನುಮೋದನೆ ನೀಡುವಾಗ ತಡ ಮಾಡಿದ್ದರಿಂದ ಕಾಮಗಾರಿ ವಿಳಂಬ ವಾಯಿತು ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

2.26 ಲಕ್ಷ ಚದರ ಅಡಿ ಕಟ್ಟಡ
ಒಟ್ಟು 2.26 ಲಕ್ಷ ಚದರ ಅಡಿ ಕಟ್ಟಡದಲ್ಲಿ ಕಂದಾಯ ಇಲಾಖೆ ಕಚೇರಿಗಳ ಜತೆಯಲ್ಲಿ ಸುಮಾರು 38 ಇಲಾಖೆಗಳ ಕಚೇರಿಗಳು ಇಲ್ಲಿಗೆ ಬರಲಿವೆ. ಮಿನಿ ಸಭಾಂಗಣ, ಜಿಲ್ಲಾಧಿಕಾರಿ ಕೋರ್ಟ್‌ ಹಾಲ್‌, ಸಚಿವರು, ಸಂಸದರಿಗೆ ಕಚೇರಿ, ಕ್ಯಾಂಟಿನ್‌ ಮತ್ತಿತರ ಸೌಲಭ್ಯವಿವೆ. ಸುಮಾರು 200 ವಾಹನ ಪಾರ್ಕಿಂಗ್‌ ವ್ಯವಸ್ಥೆ ಇರಲಿದೆ.

ಅನುದಾನದ ನಿರೀಕ್ಷೆ
ಪಡೀಲ್‌ನಲ್ಲಿ ನೂತನ ಜಿಲ್ಲಾಧಿ ಕಾರಿ ಕಚೇರಿ ಕಾಮಗಾರಿ ನಡೆಯು ತ್ತಿದೆ. ಆದರೆ ಮುಂದಿನ ಕಾಮಗಾರಿಗೆ ಹೆಚ್ಚುವರಿ 29 ಕೋ.ರೂ. ಅಗತ್ಯವಿದ್ದು, ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾ ಗಿದೆ. ಅದು ಬಿಡುಗಡೆ ಬಳಿಕ ಈ ಕಾಮಗಾರಿಗಳಿಗೆ ವೇಗ ದೊರೆಯಲಿದೆ.
-ಡಾ| ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ ದ.ಕ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.