ಅಭಿವೃದ್ಧಿ, ಹೈಕೋರ್ಟ್‌ ಪೀಠ ಸ್ಥಾಪನೆಗೆ ಆದ್ಯತೆ: ಜೆ.ಆರ್‌.ಲೋಬೋ

ಮಂಗಳೂರಿನಲ್ಲಿ ವಕೀಲರೊಂದಿಗೆ ಸಂವಾದ

Team Udayavani, May 8, 2023, 3:34 PM IST

ಅಭಿವೃದ್ಧಿ, ಹೈಕೋರ್ಟ್‌ ಪೀಠ ಸ್ಥಾಪನೆಗೆ ಆದ್ಯತೆ: ಜೆ.ಆರ್‌.ಲೋಬೋ

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್‌ ಕಾನೂನು ವಿಭಾಗದ ನೇತೃತ್ವದಲ್ಲಿ ಜಿಲ್ಲೆಯ ವಕೀಲರು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜೆ.ಆರ್‌.ಲೋಬೋ ಅವರೊಂದಿಗೆ ಸಂವಾದ ನಡೆಸಿದರು.

ಐವನ್‌ ಡಿ’ಸೋಜ ಅವರು ವಕೀಲರನ್ನು ಸ್ವಾಗತಿಸಿ, ಸುಜ್ಞಾನವಂತ ಮತ್ತು ಬಹಳ ಅನುಭವ ಹೊಂದಿದ ಜೆ.ಆರ್‌. ಲೋಬೋರವರು ಮಂಗಳೂರು ನಗರ ಮತ್ತು ದ.ಕ ಜಿಲ್ಲೆಯ ಅಭಿವೃದ್ಧಿಗಾಗಿ ಶಾಸಕರಾಗುವುದು ಅತೀ ಅವಶ್ಯ. ಆದ್ದ‌ರಿಂದ ಎಲ್ಲ ವಕೀಲರು ಸೇರಿ ಅವರನ್ನು ಚುನಾಯಿಸಲು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್‌ ಕಾನೂನು ವಿಭಾಗದ ಜಿಲ್ಲಾಧ್ಯಕ್ಷ ಮನೋರಾಜ್‌ ರಾಜೀವ್‌ ಅವರು ಮಾತನಾಡಿ, ದ.ಕ, ಉಡುಪಿ, ಮಡಿಕೇರಿ, ಚಿಕ್ಕಮಗಳೂರು ಜಿಲ್ಲೆಯ ಜನರಿಗೆ ಅನುಕೂಲವಾಗಲು ಮಂಗಳೂರಿನಲ್ಲಿ ಕರ್ನಾಟಕ ಉತ್ಛ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪಿಸುವ ಅಗತ್ಯವಿದೆ. ನ್ಯಾಯಾಲಯದ ಸಮೀಪ ವಕೀಲರ ಛೇಂಬರ್ ಸ್ಥಾಪಿಸಿ ಕಿರಿಯ ವಕೀಲರಿಗೆ ಕಡಿಮೆ ದರದಲ್ಲಿ ಬಾಡಿಗೆಗೆ ನೀಡಿ ವಕೀಲರನ್ನು ಪ್ರೋತ್ಸಾಹಿಸಬೇಕು. ಸರಕಾರಿ ಭೂಮಿಯಲ್ಲಿ ಅಥವಾ ಜಮೀನನ್ನು ಭೂಸ್ವಾಧೀನಪಡಿಸಿ ವಕೀಲರಿಗೆ ವಸತಿ ಲೇಔಟ್‌ ಸೌಕರ್ಯ ನೀಡಬೇಕು ಎಂದು ಬೇಡಿಕೆಯಿಟ್ಟರು. ಹಿರಿಯ ವಕೀಲರಾದ ಬಿ.ಇಬ್ರಾಹಿಂ, ಯಶವಂತ ಮರೋಳಿ, ಎಂ.ಪಿ.ನೊರೊನ್ಹಾ, ಮೊಹಮ್ಮದ್‌ ಹನೀಫ್ ಅಭಿಪ್ರಾಯ ಮಂಡಿಸಿದರು.

ಇದಕ್ಕೆ ಸ್ಪಂದಿಸಿದ ಜೆ.ಆರ್‌.ಲೋಬೋರವರು ತಾನು ಶಾಸಕನಾದರೆ ಮಂಗಳೂರಿನಲ್ಲಿ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಕ್ರೀಡೆ, ಕೈಗಾರಿಕೆ, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ಧಿ ಮಾಡಲು ಯೋಜನೆ ಹೊಂದಿದ್ದೇನೆ ಎಂದರು.

ಮಂಗಳೂರಿಗೆ ರಸ್ತೆ, ರೈಲು ಮಾರ್ಗ, ಜಲ ಮಾರ್ಗ, ವಾಯು ಮಾರ್ಗದ ಸಂಪರ್ಕವಿದ್ದು ವಿಮಾನ ನಿಲ್ದಾಣ, ಬಂದರು ಮತ್ತಿತರ ಸೌಲಭ್ಯಗಳಿವೆ. ಪ್ರಸ್ತುತ ಎಲ್ಲ ಬೃಹತ್‌ ಕೈಗಾರಿಕೆಗಳು ಮತ್ತು ಉದ್ಯಮಗಳು ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿದ್ದು ಬೆಂಗಳೂರು ಮತ್ತು ಮದ್ರಾಸ್‌ ಮುಖಾಂತರ ಸಿದ್ಧಪಡಿಸಿದ ಉತ್ಪನ್ನಗಳು ಸಾಗಾಟವಾಗುತ್ತಿವೆ. ಹಾಸನದಲ್ಲಿ ಬೃಹತ್‌ ಕೈಗಾರಿಕೆಗಳನ್ನು ಸ್ಥಾಪಿಸಿದಲ್ಲಿ ಮಂಗಳೂರಿನ ಬಂದರು, ವಿಮಾನ ನಿಲ್ದಾಣದ ಮುಖಾಂತರ ಸಿದ್ಧಪಡಿಸಿದ ಉತ್ಪನ್ನಗಳು ಸಾಗಾಟವಾದಲ್ಲಿ ಮಂಗಳೂರು ನಗರ ಅಭಿವೃದ್ಧಿಯಾಗುತ್ತದೆ ಎಂದರು.

1,500 ಎಕರೆ ಭೂ ಸ್ವಾಧೀನಪಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮತ್ತಿತರ ಕ್ರೀಡಾ ಮೈದಾನಗಳನ್ನು ಸ್ಥಾಪಿಸಿದಲ್ಲಿ ಜಗತ್ತಿನ ಎಲ್ಲ ಮೂಲೆಗಳಿಂದಲೂ ಜನರು ಮಂಗಳೂರಿಗೆ ಬರುವಂತಾಗುತ್ತದೆ, ಇದರಿಂದಾಗಿ ಪ್ರವಾಸೋದ್ಯಮ ಬೆಳೆಯುತ್ತದೆ. ವ್ಯವಹಾರಗಳು ಹೆಚ್ಚುತ್ತವೆ. ಶಾಂತಿ ಸುವ್ಯವಸ್ಥೆ ಕಾಪಾಡುವ ಮುಖಾಂತರ ಮಂಗಳೂರಿನಲ್ಲಿ ಲಭ್ಯವಿರುವ ನೆಲ, ಜಲ, ವಾಯು ಮಾರ್ಗಗಳ ಸಂಪರ್ಕದ ಪ್ರಯೋಜನ ಪಡೆದು ಬಹುದೊಡ್ಡ ಹೂಡಿಕೆದಾರರನ್ನು ಸೆಳೆಯಲು ಅವಕಾಶವಿದೆ.

ಇದರಿಂದ ಕ್ಷೇತ್ರದ ಜನರಿಗೆ ನೆಮ್ಮದಿ ಉಂಟಾಗುವುದು ಮಾತ್ರವಲ್ಲ, ವಕೀಲರಿಗೂ ವಿವಿಧ ಕ್ಷೇತ್ರಗಳಲ್ಲಿ ತಮ್ಮ ವಕೀಲ ವೃತ್ತಿಯನ್ನು ಉನ್ನತ ಮಟ್ಟದಲ್ಲಿ ನಡೆಸಲು ಹಲವು ಅವಕಾಶಗಳು ಲಭಿಸುತ್ತವೆ. ಕರ್ನಾಟಕ ಉತ್ಛ ನ್ಯಾಯಾಲಯದ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಹೋರಾಡುವೆ ಮತ್ತು ಸಂಚಾರಿ ಪೀಠ ಸ್ಥಾಪನೆಯಿಂದ ಜನರಿಗೆ ಕಡಿಮೆ ವೆಚ್ಚದಲ್ಲಿ ನ್ಯಾಯ ಸಿಗಲು ಅವಕಾಶ ಲಭಿಸುತ್ತದೆ. ಮಾತ್ರವಲ್ಲ ಮಂಗಳೂರಿನ ವಕೀಲರು ಬಹಳ ಬುದ್ಧಿವಂತರಾಗಿರುವುದರಿಂದ ವಕೀಲ ವೃತ್ತಿಯೂ ಸಮೃದ್ಧಿಭರಿತವಾಗಲಿದೆ ಎಂದು ಹೇಳಿದರು.

ವಕೀಲರು ಹೌಸಿಂಗ್‌ ಸೊಸೈಟಿಯನ್ನು ರಚಿಸಿದರೆ ಸರಕಾರಿ ಜಮೀನಿನಲ್ಲಿ ಅಥವಾ ಭೂ ಸ್ವಾಧೀನ ಮಾಡಿ ವಕೀಲರಿಗೆ ಹೌಸಿಂಗ್‌ ಲೇ ಔಟ್‌ನ್ನು ಸ್ಥಾಪಿಸಲು ಸಹಕರಿಸುವುದಾಗಿ ಭರವಸೆ ನೀಡಿದರು.

ವೇದಿಕೆಯಲ್ಲಿ ಹಿರಿಯ ವಕೀಲರಾದ ನಾರಾಯಣ ಪೂಜಾರಿ, ಎಂ.ಪಿ.ಶೆಣೈ, ಮುಜಾಫ‌ರ್‌, ಕಳ್ಳಿಗೆ ತಾರಾನಾಥ ಶೆಟ್ಟಿ, ಎ.ಸಿ.ಜಯರಾಜ್‌ ಉಪಸ್ಥಿತರಿದ್ದರು. ದಿನಕರ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.