ನೂತನ ಡಿಸಿ ಸಂಕೀರ್ಣ ಈ ವರ್ಷವಾದರೂ ಸಾರ್ವಜನಿಕರಿಗೆ ಲಭ್ಯವಾಗುವುದೇ?

2ನೇ ಹಂತದ ಕಾಮಗಾರಿಗೆ ಅನುದಾನದ ನಿರೀಕ್ಷೆ

Team Udayavani, May 22, 2023, 3:31 PM IST

ನೂತನ ಡಿಸಿ ಸಂಕೀರ್ಣ ಈ ವರ್ಷವಾದರೂ ಸಾರ್ವಜನಿಕರಿಗೆ ಲಭ್ಯವಾಗುವುದೇ?

ಪಡೀಲ್‌: ಜಿಲ್ಲೆಯ ಎಲ್ಲಾ ಭಾಗದ ಜನರಿಗೆ ಅನುಕೂಲವಾಗುವಂತೆ ನಗರದ ಪ್ರಮುಖ ಭಾಗದಲ್ಲಿ ಜಿಲ್ಲಾಡ ಳಿತದ ಸಂಕೀರ್ಣ ಇರಬೇಕೆಂಬ ಉದ್ದೇಶ ದಿಂದ ಪಡೀಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಜಿಲ್ಲಾ
ಧಿಕಾರಿ ಸಂಕೀರ್ಣ ಈ ವರ್ಷ ವಾದರೂ ಸಾರ್ವಜನಿಕ ರಿಗೆ ಮುಕ್ತವಾಗಲಿ ದೆಯೇ ಎಂಬ ನಿರೀಕ್ಷೆ ಮತ್ತೆ ಗರಿಗೆದರಿದೆ.

ಮೊದಲ ಹಂತದ ಕಾಮಗಾರಿ ಪೂರ್ಣಗೊಂಡು ವರ್ಷಗಳೇ ಕಳೆದರೂ ಅನುದಾನದ ಕೊರತೆಯಿಂದ ಪಾಳು ಬಿದ್ದಂತಿರುವ ಜಿಲ್ಲಾಧಿಕಾರಿ ಸಂಕೀರ್ಣ ಕಟ್ಟಡದ ಎರಡನೇ ಹಂತದ ಕಟ್ಟಡದ ಫಿನಿಶಿಂಗ್‌, ಎರಡು ಲಿಫ್ಟ್‌ ಅಳವಡಿಕೆ, ಸಭಾಂಗಣದಲ್ಲಿ ಎಸಿ ಮತ್ತು ಪಿಠೊಪಕರಣ, ಕೇಬಲ್‌ ನೆಟ್‌ವರ್ಕ್‌, ಪೈಂಟಿಂಗ್‌, ಕಟ್ಟಡದ ಪಕ್ಕದ ಮಳೆ ನೀರು ಹರಿಯುವ ಚರಂಡಿ ಅಭಿವೃದ್ಧಿ, ಆವರಣ ಗೋಡೆ, ಸಂಪೂರ್ಣ ಇಂಟರ್‌ಲಾಕ್‌ ಅಳವಡಿಸಿ ಅಭಿವೃದ್ಧಿ ಇತ್ಯಾದಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ. ಇದಕ್ಕಾಗಿ ಸುಮಾರು 29 ಕೋ.ರೂ. ಅಂದಾಜಿಸಿ, ಸರಕಾರಕ್ಕೆ ಸಲ್ಲಿಕೆಯಾಗಿದ್ದು, ಕಂದಾಯ ಇಲಾಖೆಯಿಂದ ಅನುಮೋದನೆ ದೊರೆಯಬೇಕಿದೆ.

2014ರಲ್ಲಿ ದೊರಕಿತ್ತು ಆಡಳಿತಾತ್ಮಕ ಮಂಜೂರಾತಿ!
ಅಂದ ಹಾಗೆ, ನೂತನ ಜಿಲ್ಲಾಧಿಕಾರಿ ಕಟ್ಟಡವನ್ನು ಪಡೀಲ್‌ನಲ್ಲಿ ನಿರ್ಮಾಣ ಮಾಡುವ ಕುರಿತಂತೆ 2014ರಲ್ಲಿ ಆಡಳಿತಾತ್ಮಕ ಮಂಜೂರಾತಿ ದೊರಕಿತ್ತು. ಆದರೆ ಅರಣ್ಯ ಇಲಾಖೆಯಿಂದ ಜಮೀನು ಹಸ್ತಾಂತರ, ಆ ಜಾಗದಲ್ಲಿದ್ದ ಮರ ಕಡಿಯುವುದನ್ನು ವಿರೋಧಿಸಿ ಪರಿಸರವಾದಿಗಳು ನ್ಯಾಯಾಲಯದ ಮೊರೆ ಹೋದ ಕಾರಣ ಪ್ರಕ್ರಿಯೆಗಳಿಗೆ ಸುಮಾರು ನಾಲ್ಕು ವರ್ಷಗಳ ಕಾಲ ಬ್ರೇಕ್‌ ಬಿದ್ದಿತ್ತು. ಚೆನ್ನೈಯ ಹಸುರು ಪೀಠದಲ್ಲಿ ಗ್ರೀನ್‌ ಸಿಗ್ನಲ್‌ ದೊರೆತ ಹಿನ್ನೆಲೆಯಲ್ಲಿ 2018ರ ಮಾರ್ಚ್‌ನಲ್ಲಿ ಗೃಹ ನಿರ್ಮಾಣ ಮಂಡಳಿಯು ಕಾಮಗಾರಿ ಆರಂಭಿಸಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದರೂ 2021ರ ವೇಳೆಗೆ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿತ್ತು.

ಅನುಮೋದನೆ ವಿಳಂಬ
ಪ್ರಥಮ ಹಂತದಲ್ಲಿ ಸುಮಾರು 55 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆದಿದ್ದು, ಬಳಿಕ ಮತ್ತೆ 29 ಕೋಟಿ ರೂ.ಗಳ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದರೂ ಅನುಮೋದನೆ ವಿಳಂಬವಾಗಿ ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದೆ. ಈಗಾಗಲೇ ಕಟ್ಟಡಕ್ಕಾಗಿ ವ್ಯಯ ಮಾಡಲಾಗಿರುವ ಕೋಟಿಗಟ್ಟಲೆ ಜನರ ತೆರಿಗೆ ಹಣಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನೂತನ ಸರಕಾರ ಗಮನ ಹರಿಸಬೇಕಾಗಿದೆ.

2.26 ಲಕ್ಷ ಚದರ ಅಡಿ ಕಟ್ಟಡ
ಒಟ್ಟು 2.26 ಲಕ್ಷ ಚದರ ಅಡಿ ಕಟ್ಟಡದಲ್ಲಿ ಕಂದಾಯ ಇಲಾಖೆ ಕಚೇರಿಗಳ ಜತೆಯಲ್ಲಿ ಸುಮಾರು 38 ಇಲಾಖೆಗಳ ಕಚೇರಿಗಳು ಇಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸಲಿವೆ.ಮಿನಿ ಸಭಾಂಗಣ, ಜಿಲ್ಲಾಧಿಕಾರಿ ಕೋರ್ಟ್‌ ಹಾಲ್‌, ಸಚಿವರು, ಸಂಸದರಿಗೆ ಕಚೇರಿ, ಕ್ಯಾಂಟಿನ್‌ ಮತ್ತಿತರ ಸೌಲಭ್ಯವಿದೆ. ಸುಮಾರು 200 ವಾಹನ ಪಾರ್ಕಿಂಗ್‌ ವ್ಯವಸ್ಥೆಗೂ ಸ್ಥಳಾವಕಾಶ ಇರಲಿದೆ.

ಅತೀ ಶೀಘ್ರದಲ್ಲೇ ಸಂಬಧಪಟ್ಟವರ ಸಭೆ
2014ರಲ್ಲಿ ನಮ್ಮ ಸರಕಾರದಲ್ಲಿಯೇ ಈ ಯೋಜನೆಯ ಪ್ರಕ್ರಿಯೆಗಳು ಆರಂಭವಾಗಿತ್ತು. ಕಳೆದ ಅವಧಿಯಲ್ಲಿ ಅಧಿಕಾರಿಗಳು, ಸರಕಾರದ ನಡುವಿನ ಇಚ್ಛಾಶಕ್ತಿಯ ಕೊರತೆಯಿಂದ ನಿರ್ಲಕ್ಷ್ಯ ವಹಿಸಲಾ ಯಿತು. ಈಗ, ಅತೀ ಶೀಘ್ರದಲ್ಲೇ ಸಂಬಧಪಟ್ಟವರ ಸಭೆ ಕರೆದು ಯಾವೆಲ್ಲಾ ಕಾಮಗಾರಿ ಬಾಕಿ ಇದೆ, ಮುಂದಿನ ನಿರ್ವಹಣೆ ಸಹಿತ ಸರಕಾರದಿಂದ ಅಗತ್ಯ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಪೂರ್ಣಗೊಳಿಸಿ ಜಿಲ್ಲಾಧಿಕಾರಿ ಸಂಕೀರ್ಣವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು.
-ಯು.ಟಿ. ಖಾದರ್‌, ಶಾಸಕರು

ಅನುಮೋದನೆ ದೊರೆತಾಕ್ಷಣ ಕಾಮಗಾರಿ
ಪಡೀಲ್‌ನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ಪ್ರಥಮ ಹಂತದ ಕಾಮಗಾರಿ ಪೂರ್ಣಗೊಂಡು, ದ್ವಿತೀಯ ಹಂತದ ಕಾಮಗಾರಿಗಳಿಗೆ ಅಗತ್ಯವಾದ ಅನುದಾನಕ್ಕೆ ಕಂದಾಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಅಲ್ಲಿಂದ ಅನುಮೋದನೆ ದೊರೆತಾಕ್ಷಣ ಕಾಮಗಾರಿ ನಡೆಯಲಿದೆ.
-ರವಿಕುಮಾರ್‌ ಎಂ.ಆರ್‌., ಜಿಲ್ಲಾಧಿಕಾರಿ, ದ.ಕ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.