Cooperative Society; ಪಿಗ್ಮಿ ಸಂಗ್ರಾಹಕರಿಗೂ ಕಮಿಷನ್‌ ನಷ್ಟದ ಭೀತಿ; ಕಳವಳ

ಸಹಕಾರ ಸಂಘಗಳಿಗೆ ಹೊಸ ಆದೇಶದಿಂದ ಆತಂಕ

Team Udayavani, Mar 25, 2024, 1:05 AM IST

pಪಿಗ್ಮಿ ಸಂಗ್ರಾಹಕರಿಗೂ ಕಮಿಷನ್‌ ನಷ್ಟದ ಭೀತಿ; ಕಳವಳಪಿಗ್ಮಿ ಸಂಗ್ರಾಹಕರಿಗೂ ಕಮಿಷನ್‌ ನಷ್ಟದ ಭೀತಿ; ಕಳವಳ

ಮಂಗಳೂರು: ರಾಜ್ಯ ಸರಕಾರ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಹೊರಡಿಸಿರುವ ಆದೇಶ ಕೃಷಿಯೇತರ ಪತ್ತಿನ ಸಹಕಾರ ಸಂಘಗಳು, ವಿವಿಧೋದ್ದೇಶ ಸಹಕಾರ ಸಂಘಗಳು ಹಾಗೂ ಪಿಗ್ಮಿ ಸಂಗ್ರಾಹಕರಲ್ಲಿ ಕಳವಳ ಮೂಡಿಸಿದೆ.

ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಕಲಂ 30ಬಿ ಅಡಿಯಲ್ಲಿ ಸರಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸಹಕಾರ ಸಂಘಗಳ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆಗಾಗಿ ಸಹಕಾರ ಸಂಘಗಳ ಗುಣಮಟ್ಟದ ಅಭಿವೃದ್ಧಿಗಾಗಿ ಎಪ್ರಿಲ್‌ 1ರಿಂದ ಜಾರಿಗೆ ಬರುವಂತೆ ಎಂದು ಸರಕಾರ ಈ ನಿರ್ದೇಶನಗಳನ್ನು ಹೊರಡಿಸಿದೆ.

ಇದರಂತೆ ಕೃಷಿಯೇತರ ಪತ್ತಿನ ಸಹಕಾರ ಸಂಘಗಳು ಹಾಗೂ ವಿವಿಧೋದ್ದೇಶ ಸಹಕಾರ ಸಂಘಗಳು ಭಾರತೀಯ ಸ್ಟೇಟ್‌ಬ್ಯಾಂಕ್‌ ವಿವಿಧ ಠೇವಣಿ ಮೇಲೆ ವಿವಿಧ ಅವಧಿಗೆ ನಿಗದಿಪಡಿಸುವ ಬಡ್ಡಿದರ ಅಥವಾ ಅದರ ಮೇಲೆ ಶೇ. 2ರಷ್ಟು ಅಧಿಕ ಬಡ್ಡಿ ಮಾತ್ರವೇ ನಿಗದಿಪಡಿಸಬೇಕು. ಸಾಮಾನ್ಯವಾಗಿ ಸಹಕಾರಿ ಸಂಘಗಳು ಶೇ. 10ರಷ್ಟು ಬಡ್ಡಿದರ ನೀಡುತ್ತಿದ್ದು, ಇನ್ನು ಹಾಗೆ ನೀಡುವಂತಿಲ್ಲ. ಇದು ಸಹಕಾರಿ ಸಂಘಗಳಿಗೆ ಬರುವ ಗ್ರಾಹಕರಿಗೆ ನಷ್ಟವಾಗಲಿದೆ.

ಮೀಸಲು ಹೂಡಿಕೆ
ತಾವು ಸಂಗ್ರಹಿಸುವ ಠೇವಣಿಯ ಮೊತ್ತದ ಒಂದು ಪಾಲನ್ನು ಸಹಕಾರಿ ಸಂಘಗಳು ಹಿಂದೆ ಇತರ ಸಹಕಾರಿ ಬ್ಯಾಂಕ್‌ಗಳಲ್ಲಿ, ವಾಣಿಜ್ಯ ಬ್ಯಾಂಕ್‌ಗಳಲ್ಲಿ ಹಂಚಿ ಇರಿಸುತ್ತಿದ್ದವು. ಇದರಿಂದ ಸುರಕ್ಷೆಯೂ ಇತ್ತು, ಗ್ರಾಹಕರು ಕೇಳುವಾಗ ಹಿಂದಿರುಗಿಸಲು ನೆರವಾಗುತ್ತಿತ್ತು. ಆದರೆ ಹೊಸ ಆದೇಶದ ಪ್ರಕಾರ ಡಿಸಿಸಿ ಬ್ಯಾಂಕ್‌ಗಳು ಅಥವಾ ಅಪೆಕ್ಸ್‌ ಬ್ಯಾಂಕ್‌ನಲ್ಲಿ ಮಾತ್ರವೇ ಇರಿಸಬೇಕು ಎಂದಿದೆ. ದ.ಕ. ಸೇರಿದಂತೆ ಒಂದೆರಡು ಡಿಸಿಸಿ ಬ್ಯಾಂಕ್‌ಗಳು ಮಾತ್ರವೇ ಲಾಭದಲ್ಲಿವೆ, ಉಳಿದವುಗಳಲ್ಲಿ ಮೊತ್ತ ಇರಿಸುವುದು ಕೂಡ ಸುರಕ್ಷಿತವಾಗಿಲ್ಲ, ಅಲ್ಲದೆ ಅಪೆಕ್ಸ್‌, ಜಿಲ್ಲಾ ಡಿಸಿಸಿ ಬ್ಯಾಂಕ್‌ಗಳಲ್ಲಿ ಮೊತ್ತ ಇರಿಸಿದ್ದರ ಬಗ್ಗೆ ಸರಕಾರ ಖಾತ್ರಿ ನೀಡುವುದೇ ಎಂದು ಸಂಘಗಳ ಆಡಳಿತದಾರರು ಕೇಳುತ್ತಾರೆ.

ಏಜೆಂಟರ ಬದುಕಿಗೂ ಹೊಡೆತ
ಸಾಮಾನ್ಯವಾಗಿ ಪಿಗ್ಮಿ ಏಜೆಂಟರಿಗೆ ಅವರು ಸಂಗ್ರಹಿಸುವ ಠೇವಣಿಗೆ ಶೇ. 3.5ರಿಂದ ಶೇ. 4.5ರ ವರೆಗೂ ಕಮಿಷನ್‌ ನೀಡಲಾಗುತ್ತದೆ. ಆದರೆ ಇನ್ನು ಮುಂದೆ ಇದು ಶೇ. 3 ಮೀರುವಂತಿಲ್ಲ ಎಂಬ ಆದೇಶ ಬಂದಿದೆ. ಇದರಿಂದ ಅದನ್ನೇ ನಂಬಿಕೊಂಡು ಬದುಕುವ ಸಹಸ್ರಾರು ಪಿಗ್ಮಿ ಸಂಗ್ರಾಹಕರಿಗೂ ಸಮಸ್ಯೆಯಾಗುವ ಆತಂಕ ಉಂಟಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.