ಮಂಗಳೂರು: ಆ. 1ರಿಂದ ಮೀನುಗಾರಿಕೆ; ಉತ್ತಮ ಋತುವಿನ ನಿರೀಕ್ಷೆ


Team Udayavani, Jul 26, 2022, 7:40 AM IST

ಆ. 1ರಿಂದ ಮೀನುಗಾರಿಕೆ; ಉತ್ತಮ ಋತುವಿನ ನಿರೀಕ್ಷೆ

ಮಂಗಳೂರು: ಎರಡು ತಿಂಗಳ ರಜೆಯ ಬಳಿಕ ಆ. 1ರಂದು ಮೀನುಗಾರಿಕೆ ಮರು ಆರಂಭಗೊಳ್ಳಲಿದ್ದು, ಉತ್ತಮ ಫಸಲಿನ ನಿರೀಕ್ಷೆಯೊಂದಿಗೆ ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್‌ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ. ಜು. 31ಕ್ಕೆ ಐಸ್‌ಪ್ಲಾಂಟ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿವೆ.

ಮೀನುಗಾರಿಕೆ ದೋಣಿಗಳಲ್ಲಿ ದುಡಿಯುವವರಲ್ಲಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದು ರಜೆಯಲ್ಲಿ ತೆರಳಿದವರು ಮರಳಿ ಬರುತ್ತಿದ್ದಾರೆ.

ಉತ್ತಮ ಫಸಲಿನ ನಿರೀಕ್ಷೆ
ಕಳೆದ ಸಾಲಿನ ಮೀನುಗಾರಿಕೆ ಋತುವಿನ ಕೊನೆಯ ಅವಧಿಯಲ್ಲಿ ಡೀಸೆಲ್‌ ದರ ವಿಪರೀತ ಏರಿಕೆಯಾಗಿರುವುದು ಮತ್ತು ಅದಕ್ಕೆ ಅನುಗುಣವಾಗಿ ಮೀನಿನ ಲಭ್ಯತೆ ಇಲ್ಲದ ಕಾರಣ ಬಹಳಷ್ಟು ದೋಣಿಗಳು ಅವಧಿಗೆ ಮುಂಚಿತವಾಗಿಯೇ ದಡ ಸೇರಿದ್ದವು. ಈ ಬಾರಿ ಹವಾಮಾನ ಅನುಕೂಲಕರವಿದ್ದರೆ ಆ. 1ರಂದೇ ದೋಣಿಗಳು ಕಡಲಿಗಿಳಿಯಲಿವೆ. ಕಳೆದ ಸಾಲಿನಲ್ಲಿ ಕೊನೆಯ ಅವಧಿ ಬಿಟ್ಟರೆ ಉಳಿದಂತೆ ಮೀನುಗಾರಿಕೆ ಉತ್ತಮ ವಾಗಿತ್ತು. ಈ ಬಾರಿಯೂ ಉತ್ತಮ ಫಸಲಿನ ನಿರೀಕ್ಷೆ ನಮ್ಮದಾಗಿದೆ ಎನ್ನುತ್ತಾರೆ ಮೀನು ಗಾರರ ಮುಖಂಡ ಮೋಹನ್‌ ಬೆಂಗ್ರೆ. ಬೋಟುಗಳಿಗೆ ತಿಂಗಳಿಗೆ ಸುಮಾರು 15,000 ಲೀಟರ್‌ ಡೀಸೆಲ್‌ ಅವಶ್ಯವಿರುತ್ತದೆ.

ಸರಕಾರದಿಂದ ತಿಂಗಳಿಗೆ 9,000 ಲೀ. ಡೀಸೆಲ್‌ ತೆರಿಗೆ ರಹಿತವಾಗಿ ದೊರೆಯುತ್ತದೆ. ಬಾಕಿ ಡೀಸೆಲನ್ನು ನಿಗದಿತ ದರದಲ್ಲಿ ಖರೀದಿಸಬೇಕಾಗುತ್ತದೆ. ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಡೀಸೆಲ್‌ ದರದಲ್ಲಿ ಸ್ವಲ್ಪ ಇಳಿಕೆಯಾಗಿರುವುದು ತುಸು ಹೊರೆ ಕಡಿಮೆ ಮಾಡಿದೆ ಎಂದವರು ಹೇಳುತ್ತಾರೆ.

ಮೀನುಗಾರಿಕೆಗೆ ಅವಶ್ಯ ಸಿದ್ಧತೆಗಳನ್ನು ಮಾಡಲಾಗಿದೆ. ಊರಿಗೆ ತೆರಳಿದ ಮೀನು ಕಾರ್ಮಿಕರಿಗೆ ಜು. 28ರೊಳಗೆ ಮರಳುವಂತೆ ತಿಳಿಸಲಾಗಿದೆ. ಮೀನುಗಾರಿಕೆಗೆ ಅವಶ್ಯ ಸಿದ್ಧತೆಗಳನ್ನು ಮಾಡಲಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಉತ್ತಮ ಮೀನು ಫಸಲು ಲಭ್ಯವಾಗುವ ನಿರೀಕ್ಷೆ ಯಲ್ಲಿದ್ದೇವೆ ಎನ್ನುತ್ತಾರೆ ಎನ್ನುತ್ತಾರೆ ಕರ್ನಾಟಕ ಪರ್ಸಿನ್‌ ಮೀನುಗಾರರ ಸಂಘದ ಅಧ್ಯಕ್ಷ ಶಶಿ ಕುಮಾರ್‌ ಬೆಂಗ್ರೆ ಮತ್ತು ಮಂಗಳೂರು ಟ್ರಾಲ್‌ಬೋಟು ಮೀನುಗಾರರ ಸಂಘದ ಅಧ್ಯಕ್ಷ ನಿತಿನ್‌ ಕುಮಾರ್‌.

ಕಳೆದೆರಡು ವರ್ಷಗಳಲ್ಲಿ ಸಿಕ್ಕಿದ್ದೆಷ್ಟು?
ಕಳೆದ ಋತುವಿನಲ್ಲಿ ಕೊನೆಯ 3 ತಿಂಗಳು ಬಿಟ್ಟರೆ ಉಳಿದಂತೆ ಮೀನು ಫಸಲು ಉತ್ತಮವಾಗಿತ್ತು. ಮಂಗಳೂರಿನಲ್ಲಿ 2020-21ನೇ ಸಾಲಿನಲ್ಲಿ 1,924.50 ಕೋ.ರೂ. ಮೌಲ್ಯದ 1.39 ಲಕ್ಷ ಮೆ.ಟನ್‌, ಮೀನು ಹಿಡಿಯ ಲಾಗಿತ್ತು. 2021-22ನೇ ಸಾಲಿನಲ್ಲಿ ಇದರ ದುಪ್ಪಟ್ಟು ದೊರಕಿದ್ದು 3,801.60 ಕೋ.ರೂ. ಮೌಲ್ಯದ 2.91 ಲಕ್ಷ ಮೆ.ಟನ್‌ ಮೀನು ಹಿಡಿಯಲಾಗಿತ್ತು.

ಉಡುಪಿ ಜಿಲ್ಲೆಯಲ್ಲಿ 2020-21ರಲ್ಲಿ 1,109.58 ಕೋ.ರೂ. ಮೌಲ್ಯದ 1.04 ಲಕ್ಷ ಟನ್‌ ಮೀನು ಹಿಡಿಯಲಾಗಿದೆ. 2021-22ರಲ್ಲಿ 1850.19 ಕೋ.ರೂ. ಮೌಲ್ಯದ 1.80 ಲಕ್ಷ ಮೆ. ಟನ್‌ ಮೀನು ಹಿಡಿಯಲಾಗಿದೆ.

ಮೀನುಗಾರಿಕೆ ದೋಣಿಗಳೆಷ್ಟು?
ಮಂಗಳೂರು ಮೀನುಗಾರಿಕೆ ದಕ್ಕೆಯಲ್ಲಿ ಪರ್ಸಿನ್‌ ಹಾಗೂ ಟ್ರಾಲ್‌ ಸೇರಿ ಒಟ್ಟು 1,400 ಬೋಟುಗಳು ಹಾಗೂ ಮಲ್ಪೆ ಹಾಗೂ ಗಂಗೊಳ್ಳಿ ಸೇರಿ ಟ್ರಾಲ್‌, ಪರ್ಸಿನ್‌ ಸೇರಿ ಸುಮಾರು 2,166 ಬೋಟುಗಳು ಸಮುದ್ರ ಮೀನುಗಾರಿಕೆಯಲ್ಲಿ ನಿರತವಾಗಿವೆ. ಆಳಸಮುದ್ರ ಬೋಟುಗಳು ಪ್ರಥಮವಾಗಿ ಕಡಲಿಗಿಳಿಯುತ್ತವೆ.

ಜೂ. 1ರಿಂದ ಮೀನುಗಾರಿಕೆಗೆ ವಿಧಿಸಿರುವ 61 ದಿನಗಳ ನಿರ್ಬಂಧ ಜು. 31ಕ್ಕೆ ಮುಕ್ತಾಯಗೊಳ್ಳಲಿದೆ. ಆ. 1ರಿಂದ ಬೋಟುಗಳು ಮೀನುಗಾರಿಕೆಗೆ ನಡೆಸಬಹುದಾಗಿದೆ.
– ಹರೀಶ್‌ ಕುಮಾರ್‌, ಮೀನುಗಾರಿಕೆ ಜಂಟಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ
– ಶಿವಕುಮಾರ್‌, 
ಮೀನುಗಾರಿಕೆ ಉಪನಿರ್ದೇಶಕರು, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.