![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 2, 2021, 7:47 AM IST
ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಬಳಿ ಗ್ಯಾಸ್ ಟ್ಯಾಂಕರ್ ಒಂದು ರಸ್ತೆಗೆ ಉರುಳಿದ ಘಟನೆ ನಡೆದಿದೆ. ಪರಿಣಾಮ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಸುತ್ತಮುತ್ತಲಿನ ಮನೆಗಳಲ್ಲಿ ಗ್ಯಾಸ್ ಬಳಸದಂತೆ ಮನವಿ ಮಾಡಲಾಗಿದೆ.
ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದು ರಸ್ತೆ ಉರುಳಿದೆ. ಇದರಿಂದ ಅನಿಲ ಸೋರಿಗೆ ಉಂಟಾಗುವ ಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅನಿಲ ಸೋರಿಕೆ ನಿಯಂತ್ರಿಸುವ ತಾಂತ್ರಿಕ ತಂಡ ಸ್ಥಳಕ್ಕೆ ಆಗಮಿಸಿ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇನ್ನೂ ಮಂಗಳೂರು ಕಡೆಯಿಂದ ಬರುವ ವಾಹನವನ್ನು ಕಲ್ಲಡ್ಕ, ವಿಟ್ಲ ರಸ್ತೆ ಮೂಲಕ ಹಾಗೂ ಬೆಂಗಳೂರು, ಉಪ್ಪಿನಂಗಡಿ ಕಡೆಯಿಂದ ಬರುವ ವಾಹನಗಳನ್ನು ಮಾಣಿ, ಬುಡೋಳಿ, ಕಬಕ ಮೂಲಕ ಬದಲಿ ರಸ್ತೆಯ ವ್ಯವಸ್ಥೆ ಮಾಡಲಾಗಿದೆ. ಸ್ಥಳದಲ್ಲಿ ವಿಟ್ಲ ಪೊಲೀಸರು, ಅಗ್ನಿಶಾಮಕದಳವರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿವಿಧ ಭಾಗದಲ್ಲಿ ಬುಡೋಳಿ ಯೂತ್ ಫೆಡರೇಶನ್, ಸೂರಿಕುಮೇರು ಬದ್ರಿಯಾ ಯಂಗ್ ಮೆನ್ಸ್ ಸದಸ್ಯರು, ಸಾರ್ವಜನಿಕರು ವಾಹನ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ. ಅನಿಲ ಸೋರಿಕೆಯಾಗದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಇನ್ನೂ ಮಸೀದಿ ಧ್ವನಿ ವರ್ಧಕದ ಮೂಲಕ ಸುತ್ತಮುತ್ತಲಿನ ಭಾಗದ ಮನೆಗಳಲ್ಲಿ ಬೆಂಕಿ ಬಳಸದಂತೆ ಸೂಚನೆ ನೀಡಲಾಗಿದೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.