ನಗರದಲ್ಲಿ ಗಿಡ ನೆಡಲು ಆಸಕ್ತಿ ತೋರದ ಸರಕಾರ !

ಅಭಿವೃದ್ಧಿ ಧಾವಂತದಲ್ಲಿ ಹಸುರು ಮಾಯ

Team Udayavani, Dec 18, 2021, 5:43 PM IST

ನಗರದಲ್ಲಿ ಗಿಡ ನೆಡಲು ಆಸಕ್ತಿ ತೋರದ ಸರಕಾರ !

ಮಹಾನಗರ: ಪರಿಸರದ ಹಸುರೀಕರಣಕ್ಕೆ ಒತ್ತು ನೀಡುತ್ತೇವೆ ಎಂಬ ರಾಜ್ಯ ಸರಕಾರವು ನಗರ ಪ್ರದೇಶದಲ್ಲಿ ಗಿಡ ನೆಟ್ಟು ಬೆಳೆಸಲು ಅರಣ್ಯ ಇಲಾಖೆಗೆ ಇನ್ನೂ ನಿಗದಿತ ಗುರಿ ನೀಡಿಲ್ಲ.

ನಗರದಲ್ಲಿ ಎಷ್ಟು ಕಿ.ಮೀ.ವರೆಗೆ, ಎಷ್ಟು ಗಿಡ ನೆಡಬೇಕು ಎಂಬ ಗುರಿಯನ್ನು ಅರಣ್ಯ ಇಲಾಖೆಗೆ ರಾಜ್ಯ ಸರಕಾರ ಪ್ರತೀ ವರ್ಷ ನೀಡಬೇಕು. ಅದಕ್ಕೆ ತಕ್ಕಂತೆ ಜಿಲ್ಲಾ ಮಟ್ಟದಲ್ಲಿ ಗಿಡ ಬೆಳೆಸಲಾಗುತ್ತದೆ. ನಿರ್ವಹಣೆಗೆಂದು ಹಂತ ಹಂತವಾಗಿ ಅನುದಾನ ಕೂಡ ಬಿಡುಗಡೆಯಾಗುತ್ತದೆ. ಆದರೆ, ಕೊರೊನಾ ನೆಪವೊಡ್ಡಿ ಕಳೆದ ಎರಡು ವರ್ಷ ಜಿಲ್ಲೆಗೆ ಯಾವುದೇ ಗುರಿ ನಿಗದಿಪಡಿಸಿಲ್ಲ. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಹೆಚ್ಚಿನ ಸಂಖ್ಯೆಯ ಗಿಡಗಳನ್ನು ನಾಟಿ ಮಾಡಲು ಸಾಧ್ಯವಾಗಿಲ್ಲ. ಸರಕಾರದ ಈ ನೀತಿಯಿಂದಾಗಿ ಜಿಲ್ಲೆಯ ಹಸುರೀಕಣಕ್ಕೆ ಧಕ್ಕೆ ಉಂಟಾಗಿದೆ.
ಮಂಗಳೂರು ನಗರದಲ್ಲಿ ಅರಣ್ಯ ಇಲಾಖೆ ವತಿಯಿಂದ ಪ್ರತೀ ವರ್ಷ ಸುಮಾರು 5ರಿಂದ 6 ಕಿ.ಮೀ. ವ್ಯಾಪ್ತಿ ರಸ್ತೆ ಬದಿಗಳಲ್ಲಿ, ಡಿವೈಡರ್‌ಗಳಲ್ಲಿ ಗಿಡ ನೆಡಲಾಗುತ್ತದೆ. ಕೆಲವು ಗಿಡಗಳನ್ನು ಪ್ರೋತ್ಸಾಹ ಧನದೊಂದಿಗೆ ಸಾರ್ವಜನಿಕರಿಗೆ, ಸಂಘ – ಸಂಸ್ಥೆಗಳಿಗೆ ವಿತರಿಸಲಾಗುತ್ತದೆ.

ನಗರ ಕೇಂದ್ರೀಕೃತವಾಗಿ ಈ ಹಿಂದೆ ನಡೆಸಿದ ಸಂಶೋಧನೆ ಯೊಂದರ ಪ್ರಕಾರ ಮಂಗಳೂರಿನ ಬಂದರು, ಕುದ್ರೋಳಿ ವಾರ್ಡ್‌ಗಳಲ್ಲಿ ಅತೀ ಕಡಿಮೆ ಹಸುರು ಪ್ರದೇಶ ಇದೆ ಎಂಬ ಅಂಶ ಕಂಡುಬಂದಿದೆ. ಅಭಿವೃದ್ಧಿ ಉದ್ದೇಶಕ್ಕೆ ನಗರದಲ್ಲಿ ಹಸುರು ಮಾಯವಾಗುತ್ತಿದ್ದು, ಮತ್ತೆ ಗಿಡ ನೆಟ್ಟು ಸಮತೋಲನ ಕಾಯ್ದುಕೊಳ್ಳಬೇಕಿದೆ. ಪ್ರೋತ್ಸಾಹ ನೀಡಬೇಕಾದ ರಾಜ್ಯ ಸರಕಾರವು ಇದೀಗ ಅನುದಾನ ಮತ್ತು ಗಿಡ ನೆಡಲು ಗುರಿ ನೀಡದ ಪರಿಣಾಮ ಅರಣ್ಯ ಇಲಾಖೆಯು ಸಿ.ಎಸ್‌.ಆರ್‌. ಅನುದಾನ ನಂಬಿ ಕೂತಿದೆ. ನಗರ ವ್ಯಾಪ್ತಿಯಲ್ಲಿರುವ ಕೆಲವೊಂದು ಕೈಗಾರಿಕೆ ಸಂಸ್ಥೆಗಳ ಸಹಯೋಗದೊಂದಿಗೆ ಸಿಎಸ್‌ಆರ್‌ ಅನುದಾನ ಕ್ರೋಡೀಕರಿಸಿ ನಗರದಲ್ಲಿ ಗಿಡ ನೆಡಲು ಇಲಾಖೆ ಮುಂದಾಗಿದೆ.

ವಲಯ ವ್ಯಾಪ್ತಿಗೂ ಸಿಗದ ಗುರಿ
ನಗರ ಹೊರತುಪಡಿಸಿ, ಜಿಲ್ಲಾ ವ್ಯಾಪ್ತಿಯ ಇತರ ವಲಯಗಳಿಗೂ ಇನ್ನೂ ನಿಗದಿತ ಗುರಿಯನ್ನು ರಾಜ್ಯ ಸರಕಾರ ನೀಡಲಿಲ್ಲ. ದ.ಕ. ಜಿಲ್ಲಾ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ಪುತ್ತೂರು, ಪಂಜ, ಸುಳ್ಯ, ಸುಬ್ರಹ್ಮಣ್ಯ ವಲಯಗಳಿವೆ. ಈ ವ್ಯಾಪ್ತಿಯಲ್ಲಿ ರಾಮಪತ್ರೆ, ಉಂಡೆಹುಳಿ, ದಾಲಿcನಿ, ಹಲಸು, ಹೆಬ್ಬಲಸು ಸಹಿತ ಇತರ ಹಣ್ಣಿನ ಗಿಡಗಳನ್ನು ಸಾಮಾನ್ಯವಾಗಿ ಬೆಳೆಸಲಾಗುತ್ತದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿಯೂ ಹೆಚ್ಚಿನ ಹಣ್ಣಿನ ಗಿಡಗಳನ್ನು ನೆಡಲಾಗುತ್ತದೆ. ಆದರೆ, ಸದ್ಯ ಈ ಎಲ್ಲ ಪ್ರಕ್ರಿಯೆಗೆ ಹಿನ್ನಡೆ ಉಂಟಾಗಿದೆ.

ಗುರಿ ಸಿಕ್ಕಿಲ್ಲ
ನಗರ ವ್ಯಾಪ್ತಿಯಲ್ಲಿ ಸಹಿತ ಜಿಲ್ಲೆಯಲ್ಲಿ ಗಿಡ ನೆಡುವುದಕ್ಕೆ ರಾಜ್ಯ ಸರಕಾರದಿಂದ ಇನ್ನೂ, ಯಾವುದೇ ರೀತಿಯ ಗುರಿ ಸಿಕ್ಕಿಲ್ಲ. ಕೊರೊನಾ ಕಾರಣ ದಿಂದ ಕಳೆದ ವರ್ಷವೂ ಟಾರ್ಗೆಟ್‌ ನೀಡಿರ ಲಿಲ್ಲ. ಇದೇ ಕಾರಣಕ್ಕೆ, ಸದ್ಯ ಗಿಡ ನೆಡಲು ಅನು ದಾನದ ಕೊರತೆ ಇದೆ. ಸಿ.ಎಸ್‌.ಆರ್‌. ಅನುದಾನ ಬಳಸಿಕೊಂಡು ಗಿಡ ನೆಡಲು ಆದ್ಯತೆ ನೀಡುತ್ತೇವೆ.
 -ಡಾ| ದಿನೇಶ್‌ ಕುಮಾರ್‌,
ಉಪ ಸಂರಕ್ಷಣಾಧಿಕಾರಿ ದ.ಕ. ಜಿಲ್ಲೆ

ಟಾಪ್ ನ್ಯೂಸ್

JDS

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಪಟ್ಟು, ಪ್ರತಿಭಟನೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Arrest

Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangaluru: ವಿಧಾನ ಪರಿಷತ್‌ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ

Mangaluru: ವಿಧಾನ ಪರಿಷತ್‌ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ

Mangaluru: ಬೆಳೆ ವಿಮೆ ಯೋಜನೆ: ದ.ಕ.ಕ್ಕೆ 349 ಕೋ. ರೂ.

Mangaluru: ಬೆಳೆ ವಿಮೆ ಯೋಜನೆ: ದ.ಕ.ಕ್ಕೆ 349 ಕೋ. ರೂ.

Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ

Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ

WhatsApp Image 2024-09-25 at 20.56.17

Mangaluru: ಆ್ಯಂಬುಲೆನ್ಸ್‌ ಪಲ್ಟಿ; ರೋಗಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JDS

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಪಟ್ಟು, ಪ್ರತಿಭಟನೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.