ಸರಕಾರಿ ಕಚೇರಿ: ಪಾಲನೆಯಾಗುತ್ತಿಲ್ಲ ಮಾರ್ಗಸೂಚಿ

ಕೆಲವೆಡೆ ಸ್ಯಾನಿಟೈಸರ್‌ ಇಲ್ಲ, ಬೋರ್ಡ್‌ನಲ್ಲಷ್ಟೇ ಕೋವಿಡ್‌ ತಡೆ ನಿಯಮ

Team Udayavani, Feb 5, 2022, 4:31 PM IST

ಸರಕಾರಿ ಕಚೇರಿ: ಪಾಲನೆಯಾಗುತ್ತಿಲ್ಲ ಮಾರ್ಗಸೂಚಿ

ಮಹಾನಗರ: “ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿ ಪಾಲನೆ ಮಾಡು ವುದು ಕಡ್ಡಾಯ’ ಎಂದು ರಾಜ್ಯ ಸರಕಾರ ನಿಯಮ ಹೊರಡಿಸಿದ್ದು, ಇದು ಸರಕಾರಿ ಕಚೇರಿಗೆ ಅನ್ವಯವಾಗುತ್ತದೋ ಇಲ್ಲವೋ ಎಂಬ ಸಂಶಯ ಮೂಡಿದೆ. ನಗರದ ಕೆಲವೊಂದು ಸರಕಾರಿ ಕಚೇರಿಗಳಲ್ಲಿಯೇ ಕೋವಿಡ್‌ ನಿಯಮ ಸಮರ್ಪಕವಾಗಿ ಪಾಲ ನೆಯಾಗುತ್ತಿಲ್ಲ ಎಂಬ ಅಂಶ “ಉದಯವಾಣಿ ಸುದಿನ’ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಗಮನಕ್ಕೆ ಬಂದಿದೆ.

ಕೋವಿಡ್‌ ಮೂರನೇ ಅಲೆಯ ತೀವ್ರತೆ ಇನ್ನೂ ಕಡಿಮೆಯಾಗಿಲ್ಲ. ದಿನಂಪ್ರತಿ ಮುನ್ನೂ ರಕ್ಕೂ ಅಧಿಕ ಕೋವಿಡ್‌ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸಾವಿನ ಸಂಖ್ಯೆಯೂ ದಿನವಹಿ ಏರಿಕೆಯಾಗುತ್ತಿದೆ. ಕೋವಿಡ್‌ ನಿಯಮ ಪಾಲನೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಗರ ಮಿನಿ ವಿಧಾನಸೌಧ, ಜಿಲ್ಲಾಧಿಕಾರಿ ಕಚೇರಿ, ವೆನಾÉಕ್‌ ಆಸ್ಪತ್ರೆ, ಮಂಗಳೂರು ಮಹಾನಗರ ಪಾಲಿಕೆ, ಬ್ಯಾಂಕ್‌ಗಳ ಎಟಿಎಂ, ಬಸ್‌ ನಿಲ್ದಾಣ, ಮಾಲ್‌ಗ‌ಳು ಸಹಿತ ವಿವಿಧ ಕಡೆಗಳಲ್ಲಿ “ಸುದಿನ’ ತಂಡ ರಿಯಾಲಿಟಿ ಚೆಕ್‌ ನಡೆಸಿದೆ.

ಮಿನಿ ವಿಧಾನಸೌಧ ಮುಂಭಾಗದ ಯಾವುದೇ ಕೋವಿಡ್‌ ಮುನ್ನೆಚ್ಚರಿಕೆ ವಹಿಸಲಾ ಗುತ್ತಿಲ್ಲ. ಪ್ರವೇಶದ್ವಾರದಲ್ಲಿ ದೇಹದ ಉಷ್ಣತೆ ಗಮನಿಸಲು ಸಿಬಂದಿ ನಿಯೋಜಿಸಲಾಗಿಲ್ಲ. ಮಾಸ್ಕ್ ಧರಿಸದೆ ಪ್ರವೇಶಿಸಿದರೂ ಕೇಳು ವವರಿಲ್ಲ. ಅಧಿಕಾರಿಗಳು ಕೂಡ ಮೂಗು ಮುಚ್ಚುವಂತೆ ಮಾಸ್ಕ್ ಹಾಕುತ್ತಿಲ್ಲ. ಮಿನಿ ವಿಧಾನಸೌಧ ಒಳಗಡೆ ಸ್ಯಾನಿಟೈಸರ್‌ ಬಾಟಲಿ ಇಡಲಾಗಿದ್ದು, ಅದರಲ್ಲಿ ಸ್ಯಾನಿಟೈಸರ್‌ ಖಾಲಿಯಾಗಿ ದಿನಗಳೇ ಕಳೆದಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ತಕ್ಕ ಮಟ್ಟಿಗೆ ಕೋವಿಡ್‌ ನಿಯಮ ಪಾಲನೆ ಯಾಗುತ್ತಿದೆ. ಪ್ರವೇಶದ್ವಾರದಲ್ಲಿ ಸಿಬಂದಿ ನಿಯೋಜಿಸಲಾಗಿದ್ದು, ಮಾಸ್ಕ್ ಧರಿಸ ದವರಲ್ಲಿ “ಮಾಸ್ಕ್ ಕಡ್ಡಾಯ’ ಎಂದು ಹೇಳಲಾಗುತ್ತಿದೆ. ಇನ್ನು, ಸ್ಯಾನಿಟೈಸರ್‌ ಇಡಲಾಗಿದೆ. ನಗರದೆಲ್ಲೆಡೆ ಕೋವಿಡ್‌ ಬಗ್ಗೆ ಅರಿವು ಮೂಡಿಸುತ್ತಿರುವ ಪಾಲಿಕೆಯ ಪ್ರವೇಶದ್ವಾರದಲ್ಲಿ ಸ್ಯಾನಿಟೈಸರ್‌ ಇಡಲಾಗಿದೆ. ಆದರೆ ಕೆಲವು ಸಿಬಂದಿ ಮಾಸ್ಕ್ ಅನ್ನು ಸರಿಯಾಗಿ ಧರಿಸುತ್ತಿಲ್ಲ. ಬಾಡಿ ಟೆಂಪರೇಚರ್‌ ಪರೀಕ್ಷೆ ಮಾಡಲಾಗುತ್ತಿಲ್ಲ. ಕೋವಿಡ್‌ ಮೊದಲನೇ ಅಲೆಯ ವೇಳೆ ಎಟಿಎಂಗಳಲ್ಲಿ ಸ್ಯಾನಿಟೈಸರ್‌ ಇಡಲಾಗುತ್ತಿತ್ತು. ಆದರೆ ಸದ್ಯ ಬಹುತೇಕ ಎಟಿಎಂ ಒಳಗೆ ಖಾಲಿಯಾದ ಸ್ಯಾನಿಟೈಸರ್‌ ಬಾಟಲ್‌ಗ‌ಳಿವೆ. ಕೆಲವೆಡೆ ಸ್ಯಾನಿಟೈಸರ್‌ ಕಾಣುವುದಿಲ್ಲ.

ವೆನ್ಲಾಕ್‌ ನಲ್ಲಿ ಅವ್ಯವಸ್ಥೆ
ಚಿಕಿತ್ಸೆ ಸಹಿತ ವಿವಿಧ ಕಾರಣಕ್ಕೆ ವೆನ್ಲಾಕ್‌ ಆಸ್ಪತ್ರೆಗೆ ಪ್ರತೀ ದಿನ ನೂರಾರು ಮಂದಿ ಆಗಮಿಸುತ್ತಾರೆ. ವಿಪರ್ಯಾಸ ಅಂದರೆ ವೆನ್ಲಾಕ್‌ ಆಸ್ಪತ್ರೆಯಲ್ಲೇ ಕೋವಿಡ್‌ ನಿಯಮ ಸರಿಯಾಗಿ ಪಾಲನೆಯಾಗುತ್ತಿಲ್ಲ. ಆಸ್ಪತ್ರೆಯ ಮುಖ್ಯದ್ವಾರದಲ್ಲಿ ಸ್ಯಾನಿಟೈಸರ್‌ ಇಲ್ಲ. ಸಾಮಾಜಿಕ ಅಂತರ, ಮಾಸ್ಕ್ ಕುರಿತು ಜಾಗೃತಿ ಮೂಡಿಸಲು ಯಾವುದೇ ಸಿಬಂದಿ ಇಲ್ಲ.

“ಮಾಸ್ಕ್ ಕಡ್ಡಾಯ’ ಬೋರ್ಡ್‌ನಲ್ಲಿ ಮಾತ್ರ
ಜಿಲ್ಲೆಯಲ್ಲಿ ವಿಧಿಸಲಾಗಿದ್ದ ಲಾಕ್‌ಡೌನ್‌ ತೆರವು ಬಳಿಕ ಬಹುತೇಕ ವಾಣಿಜ್ಯ ಚಟುವಟಿಕೆಗಳು ಆರಂಭಗೊಂಡಿವೆ. ನಗರದ ಹಲವು ಅಂಗಡಿಗಳಲ್ಲಿ “ಮಾಸ್ಕ್ ಕಡ್ಡಾಯ’ ಎಂಬ ಬೋರ್ಡ್‌ ಇದೆ. ಆದರೆ ಬಹುತೇಕರು ಮಾಸ್ಕ್ ಅಳವಡಿಸದೇ ಅಂಗಡಿಗಳಿಗೆ ಬರುತ್ತಿದ್ದಾರೆ. ಮಾಲ್‌ಗ‌ಳಿಗೆ ಬರಲು ಲಸಿಕೆ ಪ್ರಮಾಣಪತ್ರ ಕಡ್ಡಾಯ ಎಂದು ಜಿಲ್ಲಾಡಳಿತ ಹೇಳಿದ್ದು, ಈ ನಿಯಮ ಪಾಲನೆಯಾಗುತ್ತಿದೆ. ಕೆಲವು ಮಂದಿ ಮಾಲ್‌ಗ‌ಳಿಗೆ ತೆರಳಿದ ಬಳಿಕ ಮಾಸ್ಕ್ ತೆಗೆಯುತ್ತಿದ್ದಾರೆ.

ಒಂದೇ ದಿನಕ್ಕೆ ಸೀಮಿತಗೊಂಡ
“ದಿಢೀರ್‌ ಮಾಸ್ಕ್ ಡ್ರೈವ್‌’
ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ದ.ಕ. ಜಿಲ್ಲಾಡಳಿತ ಜನರಿಗೆ ಪದೇ ಪದೇ ಮನವಿ ಮಾಡುತ್ತಿದೆ. ಆದರೂ ಕೆಲವರು ಮಾತ್ರ ಇದನ್ನು ಪಾಲಿಸುತ್ತಲೇ ಇಲ್ಲ. ಅಂತಹ ಜನರಿಗೆ ಜಿಲ್ಲಾಡಳಿತ ಕೆಲವು ತಿಂಗಳ ಹಿಂದೆ ಬಿಸಿ ಮುಟ್ಟಿಸಿತ್ತು. ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರೇ ಖುದ್ದಾಗಿ ಪೊಲೀಸ್‌, ಪಾಲಿಕೆ ಅಧಿಕಾರಿಗಳೊಂದಿಗೆ ನಗರದ ವಿವಿಧ ಭಾಗಗಳಿಗೆ ದಿಢೀರ್‌ ದಾಳಿ ನಡೆಸಿ ನಗರದಲ್ಲಿ ಮಾಸ್ಕ್ ಧರಿಸದೆ ಓಡಾಡುವವರನ್ನು ತರಾಟೆಗೆ ತೆಗೆದು ಕೊಂಡಿದ್ದರು. ಅಲ್ಲದೇ ಸಾರ್ವಜನಿಕವಾಗಿ ಸಂಚರಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಇದೇ ವೇಳೆ ಜಾಗೃತಿ ಮೂಡಿಸುವ ಪ್ರಯತ್ನವನ್ನೂ ಅವರು ಮಾಡಿದ್ದರು. ಬಳಿಕ ಆ ಮಟ್ಟದಲ್ಲಿ ದಿಢೀರ್‌ ಮಾಸ್ಕ್ ಡ್ರೈವ್‌ ನಗರದಲ್ಲಿ ನಡೆಯಲಿಲ್ಲ.

1.14 ಕೋಟಿ ರೂ. ದಂಡ ವಸೂಲಿ
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ಸಹಿತ ಕೋವಿಡ್‌ ಮಾರ್ಗಸೂಚಿ ಕಡ್ಡಾಯ ಘೋಷಿಸಿದೆ. ಆದರೂ ದ.ಕ. ಜಿಲ್ಲೆಯಲ್ಲಿ ಮುಖಗವಸು ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ವ್ಯವಹರಿಸಿದವರಿಗೆ ಸ್ಥಳೀಯ ಸಂಸ್ಥೆಗಳು, ಪೊಲೀಸ್‌ ಇಲಾಖೆ, ಗ್ರಾ.ಪಂ. ತಂಡವು ದಂಡ ವಿಧಿಸುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‌ ಮೊದಲನೇ ಅಲೆಯಿಂದ ಈವರೆಗೆ ಒಟ್ಟು 94,914 ಮಂದಿ ವಿರುದ್ಧ ಪ್ರಕರಣ ದಾಖಲಿಸಿ, 1,14,75,280 ರೂ. ದಂಡ ಸಂಗ್ರಹಿಸಲಾಗಿದೆ.

ಸಾರ್ವಜನಿಕರಲ್ಲಿ
ಅರಿವು ಮೂಡಬೇಕು
ದ.ಕ. ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಕೊರೊನಾ ದೈನಂದಿನ ಪ್ರಕರಣ ಕೆಲವು ದಿನಗಳಿಂದ ಮತ್ತೆ ಇಳಿಮುಖಗೊಳ್ಳುತ್ತಿದೆ. ಸಾರ್ವಜನಿಕರು ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಫಲಾನುಭವಿಗಳು ಕೊರೊನಾ ರೋಗ ನಿರೋಧಕ ಲಸಿಕೆ ಪಡೆದಿಲ್ಲವೂ ಅವರು ಪಡೆದುಕೊಳ್ಳಿ. ಸಾರ್ವಜನಿಕರೇ ಸ್ವಯಂ ಆಗಿ ಕಾರ್ಯಪ್ರವೃತ್ತರಾಗಿ ಕೋವಿಡ್‌ ನಿಯಮ ಪಾಲನೆ ಮಾಡಬೇಕಿದೆ..
-ಡಾ| ಕಿಶೋರ್‌ ಕುಮಾರ್‌,
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.