Hampankatta ಸಿಗ್ನಲ್: ಮತ್ತೆ ಬಸ್‌ ನಿಲುಗಡೆಗೆ ಅವಕಾಶ

ಜಂಕ್ಷನ್‌, ಹೊಸ ಶೆಲ್ಟರ್‌ ಬಳಿ 2 ಕಡೆ ಬಸ್‌ ನಿಲುಗಡೆ; ಸುಗಮ ಸಂಚಾರಕ್ಕೆ ಅಡ್ಡಿ

Team Udayavani, Aug 13, 2024, 4:22 PM IST

Hampankatta ಸಿಗ್ನಲ್: ಮತ್ತೆ ಬಸ್‌ ನಿಲುಗಡೆಗೆ ಅವಕಾಶ

ಹಂಪನಕಟ್ಟೆ: ಕ್ಲಾಕ್‌ ಟವರ್‌ ಕಡೆಯಿಂದ ಹಂಪನಕಟ್ಟೆ- ಬಾವುಟಗುಡ್ಡೆ – ಕೆ.ಎಸ್‌.ರಾವ್‌ ರೋಡ್‌ ಮೊದಲಾದ ಕಡೆಗಳಿಗೆ ಹೋಗುವ ಬಸ್‌ಗಳು ಹಂಪನಕಟ್ಟೆ ಜಂಕ್ಷನ್‌(ಸಿಗ್ನಲ್‌) ಬಳಿ ನಿಂತು ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಮತ್ತೂಮ್ಮೆ ಅವಕಾಶ ನೀಡಲಾಗಿದೆ. ಈ ಜಂಕ್ಷನ್‌ ಹಾಗೂ ಹೊಸ ಶೆಲ್ಟರ್‌ ಬಳಿ ಎರಡೂ ಕಡೆ ಬಸ್‌ ನಿಲುಗಡೆ ಮಾಡಲಾಗುತ್ತಿದ್ದು, ಇದರಿಂದಾಗಿ ಇಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೊಡಕಾಗುತ್ತಿದೆ.

ನಗರದ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದಿಂದ ಹೊರಡುವ ಬಹುತೇಕ ಎಲ್ಲ ಖಾಸಗಿ ಸಿಟಿ, ಎಕ್ಸ್ ಪ್ರಸ್‌, ಕೆಎಸ್‌ಆರ್‌ಟಿಸಿ ಬಸ್‌ ಗಳು ಹಂಪನಕಟ್ಟೆ ಜಂಕ್ಷನ್‌ ಮೂಲಕವೇ ಮುಂದುವರಿಯುತ್ತವೆ.

ಹಂಪನಕಟ್ಟೆ ಜಂಕ್ಷನ್‌ನಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ ಗಳನ್ನು ಹತ್ತುತ್ತಿದ್ದರು. 2 ವರ್ಷಗಳ ಹಿಂದೆ ಹಂಪನಕಟ್ಟೆಯಲ್ಲಿ ಸಿಗ್ನಲ್‌ ಲೈಟ್‌ ಪುನರಾರಂಭಿಸಲಾಗಿತ್ತು.

ಆಗ ಸಿಗ್ನಲ್‌ ಬಳಿ ಬಸ್‌ಗಳ ನಿಲುಗಡೆಯಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು. ಇದನ್ನು ಗಮನಿಸಿದ ಪೊಲೀಸರು ಆ ಸ್ಥಳದಲ್ಲಿ ಬಸ್‌ಗಳು ಪ್ರಯಾಣಿಕರನ್ನು ಪಿಕ್‌ ಅಪ್‌ ಮಾಡದಂತೆ ಸೂಚನೆ ನೀಡಿದ್ದರು. ಬ್ಯಾರಿಕೇಡ್‌ ಗಳನ್ನು ಹಾಕಿ ಪ್ರಯಾಣಿಕರು ಆ ಸ್ಥಳದಲ್ಲಿ ನಿಲ್ಲುವುದನ್ನು ನಿರ್ಬಂಧಿಸಲಾಗಿತ್ತು.

ಹೊಸ ಬಸ್‌ ಶೆಲ್ಟರ್‌ ನಿರ್ಮಾಣ

ಸಿಗ್ನಲ್‌ ಬಳಿ ಪ್ರಯಾಣಿಕರನ್ನು ಹತ್ತಿಸಿ ಕೊಳ್ಳುವುದನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಸಿಗ್ನಲ್‌ಗಿಂತ ಸ್ವಲ್ಪ ಹಿಂದೆ ಮಂಗಳೂರು ವಿ.ವಿ. ಕಾಲೇಜಿನ ಎದುರು ಬಸ್‌ ಶೆಲ್ಟರ್‌ ನಿರ್ಮಿಸಿ ಅಲ್ಲಿಯೇ ಬಸ್‌ಗಳ ನಿಲುಗಡೆಗೆ ಅವಕಾಶ ನೀಡಲಾಗಿತ್ತು.

ಬಸ್‌ ನಿಲುಗಡೆ ಸಮಸ್ಯೆ ಒಂದು ಹಂತದಲ್ಲಿ ಬಗೆಹರಿದಿತ್ತು. ಸಿಗ್ನಲ್‌ ಬಳಿ ವಾಹನ ದಟ್ಟಣೆ ಕಡಿಮೆಯಾಗಿ ಫ್ರೀ ಲೆಫ್ಟ್ಗೆ ಹೋಗುವ ವಾಹನಗಳಿಗೂ ಅನುಕೂಲವಾಗಿತ್ತು.

ಆದರೆ ಇದೀಗ ಸಿಗ್ನಲ್‌ ಸಮೀಪದ ಬ್ಯಾರಿಕೇಡ್‌ಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಪ್ರಯಾಣಿಕರನ್ನು ಹತ್ತಿಸಿ ಕೊಳ್ಳುವುದಕ್ಕಾಗಿ ಬಸ್‌ಗಳ ನಿಲುಗಡೆಗೆ ಮುಕ್ತ ಅವಕಾಶ ಮಾಡಿಕೊಡಲಾಗಿದೆ. ಹೊಸ ಶೆಲ್ಟರ್‌ ಬಳಿಯೂ ಬಸ್‌ಗಳ ನಿಲುಗಡೆಗೆ ಅವಕಾಶವಿದೆ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.