ಹರೇಕಳ ಹೊಸ ವೆಂಟೆಡ್‌ ಡ್ಯಾಂ ಬಹುತೇಕ ಪೂರ್ಣ

ಕುಡಿಯುವ ನೀರು-ಸಾರಿಗೆ ವ್ಯವಸ್ಥೆಗೆ ಬಹು ಅನುಕೂಲ

Team Udayavani, Nov 17, 2022, 11:24 AM IST

5

ಮಹಾನಗರ: ಹರೇಕಳ ಮತ್ತು ಅಡ್ಯಾರ್‌ ಗ್ರಾಮಗಳ ಮಧ್ಯೆ ಹಾದು ಹೋಗುವ ನೇತ್ರಾವತಿ ನದಿಗೆ ಅಡ್ಡವಾಗಿ “ಉಪ್ಪು ನೀರು ತಡೆಯುವ ಕಿಂಡಿ ಅಣೆಕಟ್ಟು ಸಹಿತ ಸೇತುವೆ ನಿರ್ಮಾಣ’ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ.

ಭವಿಷ್ಯದ 30 ವರ್ಷಗಳ ದೂರ ದೃಷ್ಟಿಯೊಂದಿಗೆ ಮಂಗಳೂರು ವಿಧಾ ನಸಭೆ ಕ್ಷೇತ್ರದ ಬಹುತೇಕ ಗ್ರಾಮಗಳು, ಮಂಗಳೂರು ಪಾಲಿಕೆ ವ್ಯಾಪ್ತಿಯ ಜನರಿಗೆ ಕುಡಿಯುವ ನೀರು ಪೂರೈಕೆಗಾಗಿ ಹರೇಕಳದಲ್ಲಿ ಹೊಸ ಡ್ಯಾಂ ನಿರ್ಮಾಣವಾಗುತ್ತಿದೆ. ಸದ್ಯ ಡ್ಯಾಂನ ಸುತ್ತ ಸುಣ್ಣ ಬಣ್ಣ ಬಳಿಯುವ ಕಾಮಗಾರಿ ಭರದಿಂದ ಸಾಗುತ್ತಿದೆ.

2018-19ನೇ ಸಾಲಿನ ಬಜೆಟ್‌ನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆ ಯನ್ನು ಪ್ರಕಟಿಸಿದ್ದರು. ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಟೆಂಡರ್‌ ಪ್ರಕ್ರಿಯೆ ನಡೆಯಿತು. ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯ ಮಂತ್ರಿಯಾಗಿದ್ದಾಗ (2020ರ ಮಾರ್ಚ್‌) ಶಿಲಾನ್ಯಾಸ ನೆರವೇರಿಸಲಾಯಿತು. ಆ ಬಳಿಕ ಕಾಮಗಾರಿಯು ಭರದಿಂದ ಸಾಗಿದ್ದು, ಇದೀಗ ಉದ್ಘಾಟನೆಗೆ ಸಜ್ಜಾಗಿದೆ.

ವೆಂಟೆಡ್‌ ಡ್ಯಾಂ ಉದ್ದ 520 ಮೀ. ಇದ್ದು, ಸುಮಾರು 7.5 ಮೀ. ಅಗಲ, ಎರಡೂ ಬದಿಗಳಲ್ಲಿ ತಲಾ ಒಂದು ಮೀ. ಅಗಲದ ಫುಟ್‌ ಪಾತ್‌ ಇದೆ. ಒಟ್ಟು 52 ಕಿಂಡಿಗಳನ್ನು ನಿರ್ಮಿಸಲಾಗಿದೆ. ಈ ಡ್ಯಾಂ ಮೂಲಕ ಅಂದಾಜು 0.6 ಟಿಎಂಸಿ ನೀರು ಶೇಖರಣೆ ಸಾಧ್ಯವಾಗಲಿದೆ.

ಮಂಗಳೂರಿಗೂ ನೀರು!

ಹರೇಕಳ ಡ್ಯಾಂನಿಂದ 50 ಎಂಎಲ್‌ಡಿ ಹೆಚ್ಚುವರಿ ನೀರನ್ನು ಮಂಗಳೂರಿಗೆ ತರಲು ಚಿಂತನೆ ನಡೆಯುತ್ತಿದೆ. ನಗ ರ ದಲ್ಲಿ ಈಗಾಗಲೇ ಜಲಸಿರಿ ಯೋಜನೆ ಜಾರಿ ಯಾಗಿದ್ದು, ಮುಂದೆ 24×7 ಮಾದರಿ ಯಲ್ಲಿ ನೀರು ಪೂರೈಕೆ ವ್ಯವಸ್ಥೆಯಾಗಲಿದೆ. ಈ ಸಂದರ್ಭ ಎದುರಾಗಲಿರುವ ನೀರಿನ ಕೊರತೆ ನೀಗಿಸಲು ಹರೇಕಳ ವೆಂಟೆಡ್‌ ಡ್ಯಾಂನಿಂದ ಹೆಚ್ಚುವರಿ ನೀರು ಪಡೆಯುವ ಮೂಲಕ ಪರಿಹಾರ ಕಂಡುಕೊಳ್ಳುವ ಚಿಂತನೆ ನಡೆಯುತ್ತಿದೆ. ಹೀಗಾಗಿ ತುಂಬೆ ಡ್ಯಾಂ ಸನಿಹ ಅಡ್ಯಾರು ಭಾಗದಲ್ಲಿ 10 ಎಕರೆ ಭೂಮಿಯನ್ನು ಪಾಲಿಕೆ ನಿಗದಿಗೊಳಿಸಿದೆ. ಇಲ್ಲಿ ಸುಸಜ್ಜಿತ ನೀರು ಶುದ್ಧೀಕರಣ ಘಟಕ ಆರಂಭಿಸುವ ಚಿಂತನೆ ನಡೆಯುತ್ತಿದೆ.

ವಾಹನ ಸಂಚಾರಕ್ಕೆ ಅನುಕೂಲ

ಹರೇಕಳ ಭಾಗದಿಂದ ಅಡ್ಯಾರ್‌ ಕಡೆಗೆ ಕಣ್ಣಳತೆ ದೂರವಿದ್ದರೂ ಅತ್ತಿಂದಿತ್ತ ವಾಹನ ದಲ್ಲಿ ಬರಲು ಅವಕಾಶವಿಲ್ಲ. ಹಲವು ಕಿ.ಮೀ. ರಸ್ತೆಯಲ್ಲಿ ಸುತ್ತಾಡಿ ಇಲ್ಲಿಗೆ ಬರಬೇಕು ಅಥವಾ ದೋಣಿಯನ್ನು ಅವ ಲಂಬಿಸಬೇಕಾಗುತ್ತದೆ. ಆದರೆ ಹರೇಕಳ ದಲ್ಲಿ ಡ್ಯಾಂ ನಿರ್ಮಾಣವಾಗುತ್ತಿದ್ದು, ಇದರಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಲಘು ವಾಹನಗಳು ಮಾತ್ರ ಸಂಚರಿಸಲು 7.5 ಮೀ. ಅಗಲದ ಸೇತುವೆ ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಬಹಳಷ್ಟು ಅನುಕೂಲವಾಗಲಿದೆ. ಪಾದಚಾರಿಗಳಿಗೆ ಎರಡೂ ಬದಿಯಲ್ಲಿ ಕಾಲುದಾರಿಯಿದೆ.

ನದಿತಟದ ಜಮೀನು ಮುಳುಗಡೆ ಭೀತಿ!

ಹೊಸ ಡ್ಯಾಂನಲ್ಲಿ ನಿಗದಿತ ಪ್ರಮಾಣದಲ್ಲಿ ನೀರು ಸಂಗ್ರಹವಾದರೆ ಅಡ್ಯಾರ್‌, ಅರ್ಕುಳ, ಹರೇಕಳ, ಪಾವೂರು, ಬೋಳಿಯಾರ್‌ ಗ್ರಾಮಗಳ ನದಿತಟದ ಹಲವು ಎಕರೆ ಜಮೀನು ಮುಳುಗಡೆ ಭೀತಿಯೂ ಎದುರಾಗಿದೆ. ಸುರತ್ಕಲ್‌ ಎನ್‌ಐಟಿಕೆಯ ತಜ್ಞರು ಡಿಜಿಪಿಎಸ್‌ ಮೂಲಕ ಸರ್ವೇ ನಡೆಸಿ ವರದಿ ನೀಡಿದ್ದು, ಇದರಂತೆ ಮುಳುಗಡೆಯ ಆ ಪ್ರದೇಶವನ್ನು ಭೂಸ್ವಾಧೀನ ಪಡಿಸಲು ಸರ್ವೇ ನಡೆಸಿ ಖಾಸಗಿ, ಸರಕಾರಿ ಜಮೀನು ಗುರುತಿಸಬೇಕು. ಖಾತೆದಾರರ ಹೆಸರು, ವಿಸ್ತೀರ್ಣದ ವಿವರವನ್ನು ತಿಳಿಸುವಂತೆ ಸೂಚಿಸಲಾಗಿದೆ. ಆದರೂ ಮುಳುಗಡೆ ಭೀತಿ ಎದುರಿಸುವ ಜನರಿಗೆ- ಕೃಷಿಕರಿಗೆ ಈ ಬಗ್ಗೆ ಸೂಕ್ತ ಮಾಹಿತಿ ನೀಡದೆ, ಪರಿಹಾರ ಧನದ ಬಗ್ಗೆಯೂ ತಿಳಿಸಿಲ್ಲ ಎಂದಿದ್ದಾರೆ ಸ್ಥಳೀಯರು.

ಭವಿಷ್ಯದ ಯೋಜನೆ ಸಾಕಾರ: ನಗರ, ಗ್ರಾಮಾಂತರ ಭಾಗದ ಭವಿಷ್ಯದ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಕೈಗೊಂಡ ಯೋಜನೆ ಇದೀಗ ಉದ್ಘಾಟನೆಗೆ ಸಿದ್ಧವಾಗುತ್ತಿದೆ. ಇಲ್ಲಿ 3 ಮೀ. ಎತ್ತರಕ್ಕೆ ನೀರು ಸಂಗ್ರಹಿಸುವ ಅವಕಾಶವಿದೆ. ಆದರೆ ನದಿತೀರದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ನಾವು 2 ಮೀ. ನೀರು ಸಂಗ್ರಹಿಸಲಿದ್ದೇವೆ. ಸ್ಥಳೀಯರಿಗೆ ಸಾರಿಗೆ ಸಂಪರ್ಕದ ಜತೆ ಆಸುಪಾಸಿನ ಹಲವು ಗ್ರಾಮಗಳ ಜನರಿಗೆ ಸದಾ ಕುಡಿಯುವ ನೀರು ಪೂರೈಕೆ ಮಾಡುವುದು ಉದ್ದೇಶ. -ಯು.ಟಿ.ಖಾದರ್‌, ಶಾಸಕರು, ಮಂಗಳೂರು ವಿ.ಸಭಾ ಕ್ಷೇತ್ರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.