![Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ](https://www.udayavani.com/wp-content/uploads/2024/07/Gangolli-1-415x234.jpg)
Heatwave: ಬಿಸಿಲು, ಉರಿ ಸೆಕೆ: ಕರಾವಳಿ ಜನತೆ ಹೈರಾಣು
Team Udayavani, Apr 19, 2023, 6:41 AM IST
![karavali](https://www.udayavani.com/wp-content/uploads/2023/04/karavali-1-620x349.jpg)
ಮಂಗಳೂರು: ಕರಾವಳಿ ಭಾಗದಲ್ಲಿ ಉರಿ ಸೆಕೆ ಮುಂದುವರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ನಿರೀಕ್ಷಿತ ಮಳೆ ಇನ್ನೂ ಸುರಿಯದೆ ಗರಿಷ್ಠ ಉಷ್ಣಾಂಶ ಮತ್ತಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ದಿನವಿಡೀ ಸೆಕೆ ಮುಂದುವರಿದಿತ್ತು. ದಿನವಿಡೀ ಬಿಸಿಲು, ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣ ಇತ್ತು. ಐಎಂಡಿ ಮಾಹಿತಿಯಂತೆ ಮಂಗಳೂರಿನಲ್ಲಿ 35 ಡಿ.ಸೆ. ಗರಿಷ್ಠ ತಾಪಮಾನ ಮತ್ತು 26 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ವಾಡಿಕೆಗಿಂತ ತಲಾ 1 ಡಿ.ಸೆ. ಹೆಚ್ಚು ಇತ್ತು.
ಉರಿ ಸೆಕೆಗೇನು ಕಾರಣ?
ಸಾಮಾನ್ಯವಾಗಿ ಎಪ್ರಿಲ್ನಲ್ಲಿ ಬೆಳಗ್ಗೆ ವೇಳೆ ಪೂರ್ವದಿಕ್ಕಿನಿಂದ ಮತ್ತು ಸಂಜೆ ವೇಳೆ ಪಶ್ಚಿಮ ದಿಕ್ಕಿನಿಂದ ಗಾಳಿ ಬೀಸುತ್ತದೆ. ಬೆಳಗ್ಗೆ ಬೀಸುವ ಗಾಳಿಯಲ್ಲಿ ಬಿಸಿಯ ಅಂಶ ಜಾಸ್ತಿ ಇರುತ್ತದೆ. ಆದರೆ ಸದ್ಯ ಅರಬಿ ಸಮುದ್ರದಲ್ಲಿ ಸುಳಿಗಾಳಿ ಉಂಟಾಗಿರುವ ಪರಿಣಾಮ ಉತ್ತರದಿಂದ ಗಾಳಿ ಬೀಸುತ್ತಿದೆ. ಈ ಗಾಳಿ ಉಷ್ಣ ಅಲೆಗಳನ್ನು ತರುತ್ತಿದೆ. ಕರಾವಳಿ ಭಾಗದಲ್ಲಿ ಸಮುದ್ರ ಇರುವ ಕಾರಣ ವಾತಾವರಣದಲ್ಲಿ ತೇವಾಂಶ ಜಾಸ್ತಿ ಇರುತ್ತದೆ. ಗರಿಷ್ಠ ಉಷ್ಣಾಂಶ ಮತ್ತು ತೇವಾಂಶ ಒಟ್ಟಿಗೆ ಸೇರಿ “ಹೀಟ್ ಇಂಡೆಕ್ಸ್ ‘ ಉಂಟಾಗುತ್ತದೆ. ಇದು ಬೇಸಗೆ ಬೇಗೆ ಮತ್ತಷ್ಟು ಹೆಚ್ಚು ಮಾಡುತ್ತದೆ ಎನ್ನುತ್ತಾರೆ ಹವಾಮಾನ ಇಲಾಖೆ ಅಧಿಕಾರಿ ಪ್ರಸಾದ್.
ಬಿಸಿ ಗಾಳಿ ಮುನ್ನೆಚ್ಚರಿಕೆ ಇಲ್ಲ
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಸದ್ಯಕ್ಕೆ ಯಾವುದೇ ರೀತಿಯ ಬಿಸಿ ಗಾಳಿ ಮುನ್ನೆಚ್ಚರಿಕೆ ಇಲ್ಲ. ಆದರೂ ಸದ್ಯ 37-38 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ. ಕೆಲವು ದಿನ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ಇರುತ್ತಿದೆ. ಎಪ್ರಿಲ್ ತಿಂಗಳಿನಲ್ಲಿ ಇದು ಸಾಮಾನ್ಯ ಎನ್ನುತ್ತಾರೆ ಹವಾಮಾನ ಇಲಾಖೆ ಅಧಿಕಾರಿಗಳು.
ಎ. 20ರಿಂದ ಮಳೆ ಸಾಧ್ಯತೆ
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಎ. 20ರಿಂದ 22ರ ವರೆಗೆ “ಎಲ್ಲೋ ಅಲರ್ಟ್’ ಇದ್ದು ಕರಾವಳಿಯ ಹಲವು ಕಡೆ ಮಳೆ ಸಾಧ್ಯತೆ ಇದೆ.
ಟಾಪ್ ನ್ಯೂಸ್
![Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ](https://www.udayavani.com/wp-content/uploads/2024/07/Gangolli-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು](https://www.udayavani.com/wp-content/uploads/2024/07/mangaluru-150x74.jpg)
Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು
![ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ](https://www.udayavani.com/wp-content/uploads/2024/07/Kinnigoli-150x62.jpg)
ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ
![ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ](https://www.udayavani.com/wp-content/uploads/2024/07/KPT-150x66.jpg)
ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ
![ಉಪ್ಪಿನಂಗಡಿ: ಮುಗೇರಡ್ಕ ಬ್ಯಾರೇಜ್ ಸೇತುವೆ ಶೀಘ್ರ ಪೂರ್ಣ](https://www.udayavani.com/wp-content/uploads/2024/07/Brider-150x94.jpg)
ಉಪ್ಪಿನಂಗಡಿ: ಮುಗೇರಡ್ಕ ಬ್ಯಾರೇಜ್ ಸೇತುವೆ ಶೀಘ್ರ ಪೂರ್ಣ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.