ತ್ಯಾಜ್ಯ ತುಂಬಿ ನಿಂತಿವೆ ಹೆದ್ದಾರಿ ಬದಿಯ ತೋಡುಗಳು

ಸುರತ್ಕಲ್‌: ಪೆಪ್‌ಲೈನ್‌ ಕಾಮಗಾರಿ ಅವಾಂತರ, ಹೂಳು, ಕಸಕಡ್ಡಿ

Team Udayavani, Apr 4, 2022, 11:36 AM IST

suratkal

ಸುರತ್ಕಲ್‌: ಪಾಲಿಕೆಗೆ ಸೇರಿದ ರಾಜಕಾಲುವೆಯ ಸಮಸ್ಯೆಯಂತೆಯೇ ಹೆದ್ದಾರಿ ಇಲಾಖೆಯು ಚತುಷ್ಪಥ ರಸ್ತೆಯ ಇಕ್ಕೆಲಗಳಲ್ಲಿ ನಿರ್ಮಿಸಿದ ತೋಡುಗಳೂ ದುಃಸ್ಥಿತಿಯಲ್ಲಿವೆ. ಮಳೆ ನೀರು ರಸ್ತೆ ಮತ್ತು ಇಕ್ಕೆಲಗಳ ತಗ್ಗು ಪ್ರದೇಶಗಳಿಗೆ ನುಗ್ಗುವುದರಲ್ಲಿ ಅನುಮಾನವಿಲ್ಲ.

ಸುರತ್ಕಲ್‌ ಭಾಗದಲ್ಲಿ ಗ್ಯಾಸ್‌ ಪೈಪ್‌ ಲೈನ್‌, ಜಲಸಿರಿ, ಕೇಬಲ್‌ ಅಳವಡಿಕೆ ಹೀಗೆ ವಿವಿಧ ಕಾರಣಗಳಿಗಾಗಿ ಹೆದ್ದಾರಿ ಬದಿ ಹೊಂಡ ತೋಡಿ ಬಿಡಲಾಗಿದ್ದು, ಮಳೆಗೆ ಹೆದ್ದಾರಿ ಬದಿ ತೋಡು ಪಾಲಾಗಿದೆ. ಭೂಗತ ಗ್ಯಾಸ್‌ ಪೈಪ್‌ಲೈನ್‌ ಕೊರೆಯುವ ಸಂದರ್ಭ ಮೇಲೆ ಬಂದ ಕೆಸರು ಮಿಶ್ರಿತ ನೀರು ಮಣ್ಣು ಸಮೀಪದ ತೋಡು ಸೇರಿ ಭರ್ತಿಯಾಗಿದೆ. ಸುರತ್ಕಲ್‌ನ ತಡಂಬೈಲ್‌ ಮತ್ತು ಸರ್ವಿಸ್‌ ರಸ್ತೆಯ ನಡುವೆ ಕಾಮಗಾರಿ ನಡೆದ ಹಲವು ಕಡೆ ಇದೇ ಸ್ಥಿತಿಯಿದೆ. ಪೂರ್ವ ಮುಂಗಾರು ಇನ್ನೇನು ಆರಂಭವಾಗಲಿದ್ದು, ಇದುವರೆಗೆ ತೋಡು ಸ್ವತ್ಛಗೊಳಿಸುವ ಕೆಲಸಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿಲ್ಲ. ಅಧಿಕಾರಿಗಳು ಕನಿಷ್ಠ ಪಕ್ಷ ಸರ್ವಿಸ್‌ ರಸ್ತೆ, ತೋಡುಗಳ ಸ್ಥಿತಿಗತಿ ಪರಿಶೀಲನೆಯನ್ನೂ ನಡೆಸಿಲ್ಲ. ಹಲವು ಕಡೆ ವಿವಿಧ ಬಡಾವಣೆ, ಹೆದ್ದಾರಿಯಿಂದ ಸರ್ವಿಸ್‌ ರಸ್ತೆಗೆ ಸಂಪರ್ಕ ಕಲ್ಪಿಸಲು ತೋಡಿಗೆ ಮಣ್ಣು ಸುರಿಯಲಾಗಿದೆ. ಇನ್ನು ಹಲವೆಡೆ ಹೆದ್ದಾರಿ ಬದಿ ತೋಡುಗಳು ತ್ಯಾಜ್ಯ ಎಸೆಯುವ ಗುಂಡಿಯಾಗಿ ಮಾರ್ಪಟ್ಟಿವೆ. ಮಳೆನೀರಿನ ಜತೆಗೆ ತ್ಯಾಜ್ಯ ಸೇರಿಕೊಂಡು ಸರಾಗ ಹರಿವಿಗೆ ಅಡ್ಡಿಯಾಗಿ ಉಕ್ಕೇರುವುದು ಖಚಿತ. ಇನ್ನು ಹಲವು ಕಡೆ ತೋಡು ಬ್ಲಾಕ್‌ ಆಗಿ ಮಳೆ ನೀರು ಸರ್ವಿಸ್‌ ರಸ್ತೆಯಲ್ಲಿ ಹರಿದು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗುವ ಭೀತಿಯಿದೆ. ಹೆದ್ದಾರಿ ಇಲಾಖೆಯ ಅನುಮತಿಯೊಂದಿಗೆ ರಸ್ತೆ ಅಗೆದಿದ್ದರೂ ಪಾಲಿಕೆ ವ್ಯಾಪ್ತಿಯ ಬಡಾ ವಣೆಗಳಿಗೆ ಮಳೆಗಾಲದಲ್ಲಿ ಸಮಸ್ಯೆ ಆಗಲಿ ರುವುದರಿಂದ ಪಾಲಿಕೆ ಅಧಿಕಾರಿಗಳು ತೋಡುಗಳ ಸ್ವತ್ಛತೆಗೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಬೇಕಿದೆ.

ಮುಕ್ಕ ಪ್ರದೇಶದಲ್ಲಿ ಬೃಹತ್‌ ರಾಜ ಕಾಲುವೆಯ ಕಾಮಗಾರಿಗೆ ಹೆದ್ದಾರಿ ಇಲಾಖೆ ಮುಂದಾಗಿದ್ದು, ಮಳೆಗಾಲಕ್ಕೆ ಮುನ್ನ ಪೂರ್ಣಗೊಳಿಸಲು ಹೆಣಗಾಡುತ್ತಿದೆ. ಬೈಕಂಪಾಡಿ ಪ್ರದೇಶದಲ್ಲಿ ಇದ್ದ ತೋಡುಗಳು ಹೂಳು ತುಂಬಿ ಕಾಣದಂತಾಗಿವೆ. ಘನ ಟ್ರಕ್‌ಗಳ ಸಂಚಾರದಿಂದ ಈ ತೋಡುಗಳು ಸರ್ವನಾಶವಾಗಿವೆ. ವಿವಿಧೆಡೆ ಅಂಗಡಿ ಮುಂಗಟ್ಟುಗಳ ಮುಂಭಾಗ ತೋಡುಗಳಿಗೆ ಅಡ್ಡಲಾಗಿ ಪೈಪ್‌ಗ್ಳನ್ನು ಅಳವಡಿಸಿದೆ. ಇಲ್ಲಿ ಕಟ್ಟಿಕೊಂಡಿರುವ ತ್ಯಾಜ್ಯ ರಾಶಿಯನ್ನು ಸ್ವತ್ಛಗೊಳಿಸಿಲ್ಲ. ಬೈಕಂಪಾಡಿ ಜಂಕ್ಷನ್‌ ಭಾಗದಲ್ಲಿ ತೋಡುಗಳ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿದು ಸ್ಥಳೀಯ ಕಾಲುವೆ ಸೇರುತ್ತದೆ. ಇದರಿಂದ ಒಳ ರಸ್ತೆಗಳ ಡಾಮರು ಎದ್ದು ಹೋಗಿದೆ.

ಹೆದ್ದಾರಿ ಬದಿಯ ತೋಡುಗಳ ನಿರ್ಮಾಣ ಅವೈಜ್ಞಾನಿಕವಾಗಿದ್ದು, ಚಿತ್ರಾಪುರ, ಕುಳಾಯಿ ಭಾಗದಲ್ಲಿ ಮಳೆ ನೀರು ತೋಡಿನಲ್ಲಿಯೇ ನಿಂತು ನುಸಿ ಕಾಟಕ್ಕೆ ಕಾರಣವಾಗುತ್ತಿದೆ.

ಹೆದ್ದಾರಿ ಅಧಿಕಾರಿಗಳೇ ಹೊಣೆ

ಹೆದ್ದಾರಿ ಬದಿ ತೋಡುಗಳು ಹೂಳು, ಕಸ ಕಡ್ಡಿ ಸ್ವತ್ಛತೆಗೆ ಹೆದ್ದಾರಿ ಇಲಾಖೆಯೇ ಮುಂದಾಗಬೇಕು. ಈ ಬಗ್ಗೆ ಪಾಲಿಕೆಯು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವ ಕೆಲಸ ಮಾಡಲಿದೆ. ಮಳೆಗಾಲದಲ್ಲಿ ಮನೆ, ಬಡಾವಣೆಗೆ ಕೃತಕ ನೀರು ನುಗ್ಗಿದರೆ ಹೆದ್ದಾರಿ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. -ಪ್ರೇಮಾನಂದ ಶೆಟ್ಟಿ, ಮೇಯರ್‌, ಮಂಗಳೂರು ಮನಪಾ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.