Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್‌ ಮಾಲೂ ಇದೆ!

ಸ್ಮಾರ್ಟ್‌ ಸಿಟಿ ಅಡಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಲ್ಲಿ  ಎಂಎಲ್‌ಸಿಪಿ ನಿರ್ಮಾಣ;ಹೇಗಿರುತ್ತದೆ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಯೋಜನೆ? ಎಷ್ಟು  ವಾಹನಗಳಿಗೆ ಅವಕಾಶ? 

Team Udayavani, Sep 22, 2024, 5:57 PM IST

10

ಹಂಪನಕಟ್ಟೆ:  ನಗರದಲ್ಲಿ ವರ್ಷದಿಂದ ವರ್ಷಕ್ಕೆ ವಾಹನ ದಟ್ಟನೆ ಹೆಚ್ಚಾಗುತ್ತಿದ್ದು, ವಾಹನಗಳ ಪಾರ್ಕಿಂಗ್‌ಗೆ ಸೂಕ್ತ ಸ್ಥಳಾವಕಾಶದ ಕೊರತೆ ಸಂಕೀರ್ಣ ಸಮಸ್ಯೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದಶಕಗಳ ಹಿಂದೆ ಮೊಳಕೆಯೊಡೆದದ್ದೇ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ (ಎಂಎಲ್‌ಸಿಪಿ).

ಹಳೆ ಬಸ್‌ ನಿಲ್ದಾಣದ ಒಟ್ಟು 1.55 ಎಕರೆ ಪ್ರದೇಶದಲ್ಲಿ 95 ಕೋ.ರೂ. ವೆಚ್ಚದಲ್ಲಿ  ನಿರ್ಮಾಣವಾಗಲಿರುವ ಈ ಯೋಜನೆಯಲ್ಲಿರುವುದು ಬರೀ ವಾಹನಗಳ ಪಾರ್ಕಿಂಗ್‌ ಮಾತ್ರ  ಅಲ್ಲ, ಬದಲಾಗಿ ಶಾಪಿಂಗ್‌ ಮಾಲ್‌, ಮಲ್ಪಿಪ್ಲೆಕ್ಸ್‌ಗಳು ಕೂಡ ಬರಲಿವೆ.

ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಯೋಜನೆಯನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕೈಗೆತ್ತಿಕೊಳ್ಳುವುದೆಂದು ಆರಂಭದಲ್ಲಿ ಚಿಂತನೆ ನಡೆದಿತ್ತು. ಆದರೆ, ಬಳಿಕ ಅದು ಹಿಂದೆ ಸರಿಯಿತು. ಪ್ರಸ್ತುತ ಮಂಗಳೂರು ಸ್ಮಾರ್ಟ್‌ ಸಿಟಿ ಲಿಮಿಟೆಡ್‌ ವತಿಯಿಂದ ಈ ಯೋಜನೆ ಅನುಷ್ಠಾನವಾಗುತ್ತಿದೆ.

ಸಾರ್ವಜನಿಕ-ಖಾಸಗಿ ಪಾಲುದಾರಿಕೆ

2021ರ ನ. 1ರಂದು ಭೂಮಿ ಪೂಜೆ ನೆರವೇರಿಸಲಾದ ಯೋಜನೆಯನ್ನು 36 ತಿಂಗಳಲ್ಲಿ ಮುಗಿಸಲು ಒಪ್ಪಂದವಾಗಿತ್ತು. ಆದರೆ ಬೇರೆ ಬೇರೆ ಕಾರಣಗಳಿಂದ ಅದಿನ್ನೂ ಪಂಚಾಂಗದ ಹಂತದಲ್ಲೇ ಉಳಿದಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 30 ವರ್ಷಗಳ ನಿರ್ವಹಣೆಯನ್ನೂ ಗುತ್ತಿಗೆ ವಹಿಸಿಕೊಂಡಿರುವ ಸಂಸ್ಥಯೇ ಮಾಡುವ ಬಗ್ಗೆಯೂ ಒಪ್ಪಂದ ಮಾಡಿಕೊಳ್ಳಲಾಗಿದೆ.

ಯೋಜನೆ ಅನುಷ್ಠಾನಗೊಳ್ಳುತ್ತಿರುವ ಸ್ಥಳವು ಕೇಂದ್ರ ಮಾರುಕಟ್ಟೆ, ಕೇಂದ್ರ ರೈಲು ನಿಲ್ದಾಣ, ಬಸ್‌ ನಿಲ್ದಾಣ, ಸಿಟಿ ಸೆಂಟರ್‌ ಮಾಲ್‌, ಜಿಲ್ಲಾ ವೆನಾÉಕ್‌ ಆಸ್ಪತ್ರೆ, ಶರವು ದೇವಸ್ಥಾನ, ಮಿಲಾಗ್ರಿಸ್‌ ಚರ್ಚ್‌, ಬಾವುಟಗುಡ್ಡೆ, ಮಸೀದಿ, ಅಲೋಶಿಯಸ್‌ ಚಾಪೆಲ್‌ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರ, ಶೈಕ್ಷಣಿಕ ಕೇಂದ್ರಗಳಿಗೆ ಸನಿಹದಲ್ಲಿಯೂ ಇದೆ. ಹಂಪನಕಟ್ಟೆ ಪ್ರದೇಶದಲ್ಲಿ ವಾಹನ ದಟ್ಟನೆ ಕಡಿಮೆ ಮಾಡುವುದರೊಂದಿಗೆ ಪಾರ್ಕಿಂಗ್‌ ಸಮಸ್ಯೆಯನ್ನು ತಗ್ಗಿಸುವುದು ಯೋಜನೆ ಉದ್ದೇಶ.

3.3 ಕೋ.ರೂ. ಪಾಲಿಕೆಗೆ ಗುತ್ತಿಗೆದಾರರು ಮಹಾನಗರ ಪಾಲಿಕೆ/ ಸ್ಮಾರ್ಟ್‌ ಸಿಟಿಗೆ ವಾರ್ಷಿಕ 3.3 ಕೋ.ರೂ. ಮೊತ್ತ ಪಾವತಿಸಬೇಕು

ಆದಾಯ ಸಂಗ್ರಹ ಹೇಗೆ?

  • ಪಾರ್ಕಿಂಗ್‌ ಶುಲ್ಕ
  • ಜಾಹೀರಾತು ಶುಲ್ಕ
  • ವಾಣಿಜ್ಯ ಕಟ್ಟಡಗಳ ಬಾಡಿಗೆ, ಲೀಸ್‌ನ ಮೊತ್ತ

ಕಟ್ಟಡದ ವೈಶಿಷ್ಟ್ಯಗಳು

  • 1.5 ಲಕ್ಷ ಚ.ಅ. ವಿಸ್ತೀರ್ಣದ ಕಟ್ಟಡ
  • ತಳ ಮಹಡಿ, ಮೇಲ್ಮಹಡಿ, ನೆಲ ಮಹಡಿ ಪಾರ್ಕಿಂಗ್‌ಗೆ ಮೀಸಲು; ಟೆರೇಸ್‌ನಲ್ಲಿಯೂ ಪಾರ್ಕಿಂಗ್‌ಗೆ ಅವಕಾಶ
  • ಮೂರು ಮಹಡಿಗಳು ವಾಣಿಜ್ಯ ಚಟುವಟಿಕೆಗಳಿಗೆ ಮೀಸಲು
  • 400 ಕಾರುಗಳು 200 ದ್ವಿಚಕ್ರವಾಹನ ಪಾರ್ಕಿಂಗ್‌ ಮಾಡಲು ಸ್ಥಳಾವಕಾಶ
  • ಸ್ವಯಂಚಾಲಿತ ಮತ್ತು ಮಾನವ ಸಹಾಯದ ಪಾರ್ಕಿಂಗ್‌ ವ್ಯವಸ್ಥೆ
  • ವಾಣಿಜ್ಯ ಸಂಕೀರ್ಣ ಮತ್ತು ಕಾರ್‌ ಪಾರ್ಕಿಂಗ್‌ ಗೆ ಪ್ರತ್ಯೇಕ ಪ್ರವೇಶ
  • ಪಾರ್ಕಿಂಗ್‌ಗೆ ಕೆ.ಎಸ್‌.ರಾವ್‌ ರಸ್ತೆಯಲ್ಲಿ ಆಗಮನ, ಬಾವುಟಗುಡ್ಡೆ ರಸ್ತೆಯಲ್ಲಿ ನಿರ್ಗಮನ ವ್ಯವಸ್ಥೆ
  • ಟಾಯ್ಲೆಟ್‌ ವ್ಯವಸ್ಥೆ ಮತ್ತು ಪ್ರವಾಸಿ ಮಾಹಿತಿ ಕೇಂದ್ರ ರಚನೆ
  • ʼಮಂಗಳೂರು ಒನ್‌’ ಮೊಬೈಲ್‌ ಆ್ಯಪ್‌ ಮೂಲಕ ಪಾರ್ಕಿಂಗ್‌ ಸ್ಥಳ ಲಭ್ಯತೆಯ ಮಾಹಿತಿ

ವಾಣಿಜ್ಯ ಸಂಕೀರ್ಣದಲ್ಲಿ ಏನೇನು?

ಶಾಪಿಂಗ್‌ ಮಾಲ್‌, ಸಿನೆಮಾ/ ಮಲ್ಟಿಪ್ಲೆಕ್ಸ್‌, ಫುಡ್‌ಕೋರ್ಟ್‌, ಹೊಟೇಲ್‌- ರೆಸ್ಟೋರೆಂಟ್‌, ಹೈಪರ್‌ ಮಾರ್ಟ್‌, ಬ್ಯಾಂಕ್‌- ಎಟಿಎಂ, ಕಚೇರಿ ಸ್ಥಳ, ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಕಟ್ಟಡದಲ್ಲಿ  ಮಾಡಲು ಅವಕಾಶವಿದೆ.

ಇತರ ಸ್ಮಾರ್ಟ್‌ ಸಿಟಿಗಳಲ್ಲೂ ಅನುಷ್ಠಾನ

ಸ್ಮಾರ್ಟ್‌ ಸಿಟಿ ಯೋಜನೆಯಡಿ ಬರುವ ದೇಶದ ಪ್ರಮುಖ ನಗರಗಳಾದ ಇಂದೋರ್‌, ನಾಗಪುರ, ವಡೋದರಾ, ಉಜ್ಜೈನಿ, ಬೆಳಗಾವಿಯಲ್ಲೂ ಪಾರ್ಕಿಂಗ್‌ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

-ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

1-Kejri

RSS; ಮೋಹನ್ ಭಾಗವತ್ ಅವರಿಗೆ 5 ಪ್ರಶ್ನೆಗಳನ್ನು ಮುಂದಿಟ್ಟ ಕೇಜ್ರಿವಾಲ್!

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-Kejri

RSS; ಮೋಹನ್ ಭಾಗವತ್ ಅವರಿಗೆ 5 ಪ್ರಶ್ನೆಗಳನ್ನು ಮುಂದಿಟ್ಟ ಕೇಜ್ರಿವಾಲ್!

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.