33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

"ಕಾಂಗ್ರೆಸ್‌ನಿಂದ ದ.ಕ. ಜಿಲ್ಲೆಯ ಪ್ರಗತಿ; ಬಿಜೆಪಿಯಿಂದ ಕೋಮು ರಾಜಕೀಯ ಮಾತ್ರ'

Team Udayavani, Apr 25, 2024, 9:42 AM IST

3-dinesh

ಮಂಗಳೂರು: ಲೋಕಸಮರದಲ್ಲಿ ಮತದಾರರ ತೀರ್ಪಿಗೆ ಕ್ಷಣಗಣನೆ ಮಾತ್ರ ಉಳಿದಿದೆ. ಈ ಮಧ್ಯೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. ಅದರ ಪೂರ್ಣ ವಿವರ ಇಲ್ಲಿದೆ.

ದ.ಕ. ಜಿಲ್ಲೆಗೆ ಕಾಂಗ್ರೆಸ್‌ ಏನು ಕೊಡುಗೆ ನೀಡಿದೆ?

ಭೂ ಸುಧಾರಣೆಗಳು ಕಾಯ್ದೆಯಿಂದ 2,21,886 ಎಕರೆ ಭೂಮಿಯನ್ನು ದಕ್ಷಿಣ ಕನ್ನಡದ 70,591 ಗೇಣಿದಾರ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್‌ ಸರಕಾರ ವರ್ಗಾಯಿಸಿತ್ತು. 1951ರಲ್ಲಿ ಮಂಗಳೂರು ವಿಮಾನ ನಿಲ್ದಾಣ ಸ್ಥಾಪನೆ, 1960ರಲ್ಲಿ ಸುರತ್ಕಲ್‌ನಲ್ಲಿ ನ್ಯಾಶನಲ… ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಸ್ಥಾಪಿಸಿದ್ದು, 1969ರಲ್ಲಿ ಕೆನರಾ ಬ್ಯಾಂಕ್‌, ಸಿಂಡಿಕೇಟ್‌ ಬ್ಯಾಂಕ್‌ ರಾಷ್ಟ್ರೀಕರಣ ಮಾಡಿದ್ದು, 1970ರಲ್ಲಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, 1974ರಲ್ಲಿ ನವಮಂಗಳೂರು ಬಂದರು ನಿರ್ಮಿಸಿದ್ದು, 1980ರಲ್ಲಿ ವಿಜಯ ಬ್ಯಾಂಕ್‌ ರಾಷ್ಟ್ರೀಕರಣ, 1980ರಲ್ಲಿ ಮಂಗಳೂರು ವಿವಿ ಸ್ಥಾಪನೆ, 1988ರಲ್ಲಿ ಎಂಆರ್‌ಪಿಎಲ… ಸ್ಥಾಪಿಸಿದ್ದು ಕಾಂಗ್ರೆಸ್‌.

ದ.ಕ. ಜಿಲ್ಲೆಯ ಯುವಕರ ಉದ್ಯೋಗ ನೀಡುವ ನಿಟ್ಟಿನಲ್ಲಿ ನಿಮ್ಮ ಪಕ್ಷ ಏನು ಮಾಡಿದೆ?

-1993ರಲ್ಲಿ ವೀರಪ್ಪ ಮೊಲಿ ಕಾಲದಲ್ಲಿ ಬಂದ ಸಿಇಟಿ ಸಹಾಯದಿಂದ ಸೀಟು ಪಡೆದ ದಕ್ಷಿಣ ಕನ್ನಡದ ಬಿಲ್ಲವ, ಕುಲಾಲ, ಮಡಿವಾಳ, ಮುಸ್ಲಿಂ, ಗೌಡ ಬಂಟ್ಸ್‌, ಎಸ್ಸಿ, ಎಸ್ಟಿ ಹಾಗೂ ಇತರ ಹಿಂದುಳಿದ ವರ್ಗಗಳ ಸಾವಿರಾರು ವಿದ್ಯಾರ್ಥಿಗಳು ಇಂದು ಭಾರತ ಮತ್ತು ವಿದೇಶಗಳಲ್ಲಿ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್‌ ಸರಕಾರದಿಂದಾಗಿ. 2010 ರಲ್ಲಿ ಬೈಕಂಪಾಡಿಯಲ್ಲಿ ಭಾರತ್‌ ಪೆಟ್ರೋಲಿಯಂ, ಎಲ್‌ಪಿಜಿ ಬಾಟಿÉಂಗ್‌ ಘಟಕ ನಿರ್ಮಾಣ ಮಾಡಲಾಗಿದೆ. ಮಂಗಳೂರು ಎಸ್‌ಇಝಡ್‌ ನಿರ್ಮಿಸಿ ನೂರಾರು ಕಂಪೆನಿಗಳನ್ನು ಸ್ಥಾಪಿಸಿ ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗ ದೊರಕಿಸಿಕೊಟ್ಟಿರುವುದು ನಾವು.

ದ.ಕ. ಜಿಲ್ಲೆಗೆ 1.16 ಲಕ್ಷ ಕೋ. ರೂ. ಅನುದಾನ ಬಂದಿದೆ ಎಂದು ಬಿಜೆಪಿ ವಿವರ ನೀಡಿದೆಯಲ್ಲ… ಕರಾವಳಿ ಅಭಿವೃದ್ಧಿಗೆ ನಳಿನ್‌ ಕೊಡುಗೆ ಏನು?

ಪಂಪ್‌ವೆಲ್‌ ಫ್ಲೈ ಓವರ್‌ 12 ವರ್ಷಗಳ ಕಾಲ ಕಟ್ಟಿದ್ದೇ ಅವರ ಏಕೈಕ ಸಾಧನೆ. ಅದೂ ಮಳೆ ಬಂದಾಗ ನೀರಿನಲ್ಲಿ ಮುಳುಗುತ್ತದೆ. ಮೋದಿಯವರ ಆಡಳಿತದಲ್ಲಿ 15 ರೂ.ಗಳಿಗೆ 1 ಅಮೆರಿಕನ್‌ ಡಾಲರ್‌ ಸಿಗುತ್ತದೆ ಎಂದು ನಳಿನ್‌ ಹೇಳಿದ್ದರು. ಅದು ಸಿಗುತ್ತದೆಯೇ? 2 ಸಾವಿರ ರೂ.ಗೆ ಒಂದು ಟನ್‌ ಮರಳು ಸಿಗುತ್ತದೆ ಎಂದಿದ್ದರು. ಸಿಗುತ್ತದೆಯೇ? ಪೆಟ್ರೋಲ್‌ ಬೆಲೆ ಇಳಿಕೆ ಆಗಿದೆಯೇ? ಕೋಮು ಭಾವನೆ ಕೆರಳಿಸಿ ರಾಜಕೀಯ ಮಾಡಿದ ಬಿಜೆಪಿಯವರು 33 ವರ್ಷ ಏನು ಕೊಡುಗೆ ನೀಡಿದ್ದಾರೆ?

 ಅಭಿವೃದ್ಧಿಗೆ ಕಾಂಗ್ರೆಸ್‌ ವಿರೋಧ ಮಾಡಿದೆ ಎಂಬುದು ಬಿಜೆಪಿ ಆರೋಪ?

ಇಂದಿರಾ ಗಾಂಧಿಯಿಂದ ಉದ್ಘಾಟನೆ ಗೊಂಡಿದ್ದ ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿ ತೆಕ್ಕೆಗೆ ಕೊಟ್ಟವರು ಯಾರು? ಕರಾವಳಿ ಕನ್ನಡಿಗರ ಪ್ರತೀಕವಾಗಿದ್ದ-ಲಾಭದಾಯಕವಾಗಿ ನಡೆಯುತ್ತಿದ್ದ ವಿಜಯ ಬ್ಯಾಂಕ್‌, ಸಿಂಡಿಕೇಟ್‌ ಬ್ಯಾಂಕ್‌, ಕಾರ್ಪೊರೇಶನ್‌ ಬ್ಯಾಂಕ್‌ಗಳನ್ನು ಬೇರೆ ಬ್ಯಾಂಕ್‌ ಜತೆಗೆ ವಿಲೀನ ಮಾಡಿದ್ದು ಯಾರು?

ಪದ್ಮರಾಜ್‌ ಬಗ್ಗೆ ಅಭಿಪ್ರಾಯ?

ವಕೀಲ ವೃತ್ತಿಯಲ್ಲಿ ಹೆಸರು ಮಾಡಿ ರುವ ಅವರು ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಸಾಮಾಜಿಕ ಕ್ಷೇತ್ರದಲ್ಲಿ ಅವರು ಮಾಡಿದ ಸೇವೆ ಗಮನಿಸಿ ಜನರು ಈ ಬಾರಿ ಆಶೀರ್ವಾದ ಮಾಡಲಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಅವರು ಸರ್ವ ಧರ್ಮವನ್ನು ಪ್ರೀತಿಸುವವರು.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.