ಗೇರು ಉತ್ಪಾದನೆಯಲ್ಲಿ ಭಾರತಕ್ಕೆ ವಿಶ್ವದಲ್ಲಿ ಎರಡನೇ ಸ್ಥಾನ


Team Udayavani, Mar 7, 2024, 11:31 AM IST

ಗೇರು ಉತ್ಪಾದನೆಯಲ್ಲಿ ಭಾರತಕ್ಕೆ ವಿಶ್ವದಲ್ಲಿ ಎರಡನೇ ಸ್ಥಾನ

ಉಳ್ಳಾಲ: ಭಾರತದಲ್ಲಿ ಏಳು ಬಿಲಿಯನ್‌ ಗೇರು ಕೃಷಿಯ ಉತ್ಪನ್ನವನ್ನು ಹೊಂದಿದ್ದು, 2 ಮಿಲಿಯನ್‌ ಜನರು ಗೇರು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಗೇರು ಉತ್ಪಾದನೆಯಲ್ಲಿ ವಿಶ್ವದ ಎರಡನೇ ಸ್ಥಾನದೊಂದಿಗೆ ಭಾರತ ಗೇರು ಉತ್ಪನ್ನ ಗರಿಷ್ಠ ಮಾರುಕಟ್ಟೆ ಹೊಂದಿದೆ. ಮುಂದಿನ ದಿನಗಳಲ್ಲಿ ಗೇರು ಪ್ರಾಮುಖ್ಯ ಬೆಳೆಯಾಗಲಿದೆ ಎಂದು ಶಿವಮೊಗ್ಗ ತೋಟಗಾರಿಕೆ ವಿ.ವಿ. ಸಂಶೋಧನ ನಿರ್ದೇಶಕ ಡಾ| ಬಿ. ಎಂ. ದುಷ್ಯಂತ್‌ ಕುಮಾರ್‌ ಹೇಳಿದರು.

ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಕಾಪಿಕಾಡ್‌-ಉಳ್ಳಾಲ ಇಲ್ಲಿ ಗೇರು ಮೇಳ ಮತ್ತು ವಿಚಾರ ಸಂಕಿರಣ-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಟೀ, ಅಡಿಕೆ ಬಿಟ್ಟರೆ ಗೇರು ಅತ್ಯಂತ ಉತ್ತಮ ಫಲ ನೀಡುವ ಬೆಳೆ. ಜಗತ್ತಿನಲ್ಲಿ ಇರುವ ಗೇರು ಉತ್ಪಾದನೆಯ 33 ದೇಶಗಳಲ್ಲಿ ಬ್ರೆಜಿಲ್‌ ಪ್ರಥಮವಾಗಿದೆ. ಗೇರು ಎಲ್ಲ ಮಣ್ಣಿನಲ್ಲಿ ಬೆಳೆಯುತ್ತದೆ. ಉಳ್ಳಾಲ ಗೇರು ಅಭಿವೃದ್ಧಿ ಕೇಂದ್ರ ಹೊಸ ಗೇರು ತಳಿಗಳ ಅಭಿವೃದ್ಧಿ ಯೋಜನೆ ರೂಪಿಸಿದೆ.

ಕ್ಯಾಶ್ಯು ತಿರುಳು ಉನ್ನತ ವಿಟಮಿನ್‌ ಅಂಶಗಳನ್ನು, ರೋಗ ನಿರೋಧಕ ಗುಣ ಹೊಂದಿದೆ ಎಂದು ವಿವರಿಸಿದರು. ರೈತ ಸಂಘ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನಿಗಳ ಪಾತ್ರ ಮಹತ್ವದ್ದಾಗಿದೆ. ಗೇರು ಬೀಜಕ್ಕೆ ಕಿಲೋ ಒಂದಕ್ಕೆ 60 ರೂ. ಇದೆ. ಅದನ್ನು 250 ರೂ. ನಿಗದಿ ಮಾಡಬೇಕು. ಹರೇಕ ಳ ಮೆಣಸಿಗೆ ಸರಕಾರದಿಂದ ಮೌಲ್ಯವರ್ಧನೆ ಕೆಲಸ ಆಗಲಿ ಎಂದರು.

ವಿಸ್ತರಣ ನಿಗಮ ಅಧ್ಯಕ್ಷ ಡಾ| ಕೆ. ಟಿ. ಗುರುಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ದ. ಕ. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್‌.ಡಿ. ಸಂಪತ್‌ ಸಾಮ್ರಾಜ್ಯ ತಾಂತ್ರಿಕ ಕೈಪಿಡಿ ಬಿಡುಗಡೆ ಮಾಡಿದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಹಿರಿಯ ವಿಜ್ಞಾನಿ ಡಾ| ಧನಂಜಯ ಬಿ., ಬಹ್ಮಾವರ ಕೃಷಿ ವಿ.ವಿ. ಪ್ರಾಂಶುಪಾಲ ಡಾ| ಕೆ.ವಿ. ಸುಧೀರ್‌ ಕಾಮತ್‌, ಕೆವಿಕೆ ಮುಖಸ್ಥ ರಮೇಶ್‌ ಟಿ.ಜೆ., ಮಂಗಳೂರು ಮೀನುಗಾರಿಕೆ ವಿ.ವಿ. ಡೀನ್‌
ಡಾ| ಎಚ್‌. ಎಸ್‌. ಆಂಜನೇಯಪ್ಪ, ರೈತ ಸಂಘ ಗೌರವಾಧ್ಯಕ್ಷ ಧನಕೀರ್ತಿ ಬಲಿಪ, ಉಳ್ಳಾಲ ನಗರಸಭಾ ಸದಸ್ಯೆ ನಮಿತಾ ಗಟ್ಟಿ
ಉಪಸ್ಥಿತರಿದ್ದರು.

ಸಮ್ಮಾನ
ಪ್ರಗತಿಪರ ಕೃಷಿ ಸಾಧಕರಾದ ದಯಾನಂದ ಭಟ್‌, ಪ್ರೇಮಾ ಹೆಗ್ಡೆ ಮಾಲಾಡಿ ಬೀಡು, ನಿರಂಜನ ಸೇಮಿತ ತೆಂಕಬೆಳ್ಳೂರು, ಸಿ. ಕೆ. ನವೀನ್‌ ಚಂದ್ರ ಐವರ್‌ ನಾಡು, ವಿಲ್ಮಾ ಪ್ರಿಯಾ ಅಲ್ಬು ಕರ್ಕ್‌ ಅಮಾrಡಿ ಅವರನ್ನು ಸಮ್ಮಾನಿಸಲಾಯಿತು. ವಿಚಾರ ಸಂಕಿರಣದಲ್ಲಿ ಕೀಟ ಶಾಸ್ತ್ರ ವಿಭಾಗದ ಡಾ| ರೇವಣ್ಣನವರ್‌, ಕೃಷಿ ವಿಭಾಗದ ಅಭಿಯಂತ ವಿ.ಆರ್‌. ವಿನೋದ್‌, ಮಣ್ಣು ವಿಜ್ಞಾನ ಕೃಷಿ ರಸಾಯನ ಶಾಸ್ತ್ರದ ಜಯಪ್ರಕಾಶ್‌, ತೋಟಗಾರಿಕಾ ಸಹಾಯಕ ಪ್ರಾಧ್ಯಾಪಕ  ಡಾ| ಆರ್‌. ಚೈತನ್ಯ, ಬೇಸಾಯ ಶಾಸ್ತ್ರದ
ಡಾ| ಹರೀಶ್‌ ಶೆಣೈ, ಕೀಟಶಾಸ್ತ್ರದ ನಿಶ್ಮಿತಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಉಳ್ಳಾಲ ಸಂಶೋಧನ ಕೇಂದ್ರದ ಮುಖ್ಯಸ್ಥ ಡಾ| ಮಾರುತೇಶ್‌ ಎ. ಎಂ. ಸ್ವಾಗತಿಸಿದರು. ಬ್ರಹ್ಮಾವರ ವಲಯ ಕೃಷಿ ಸಂಶೋಧನ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ| ಲಕ್ಷ್ಮಣ ಪ್ರಸ್ತಾವನೆಗೈದರು. ಸಹಾಯಕ ಪ್ರಾಧ್ಯಾಪಿಕೆ ಡಾ| ಆರತಿ ಯಾದವಾಡ ವಂದಿಸಿದರು. ಪ್ರವೀಣ್‌ ಎಸ್‌. ಕುಂಪಲ ಕಾರ್ಯಕ್ರಮ ನಿರೂಪಿಸಿದರು.

ಮನೆಗೊಂದು ಗೇರು ಗಿಡ
ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸಿ, ಗೇರು ಕೃಷಿಕರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ವ್ಯಾಪಕ ಕೆಲಸ ಆಗಬೇಕಾಗಿದೆ. ಗೇರು ಕೃಷಿಯಲ್ಲಿ ಎಲರೂ ತೊಡಗಿಸುವ ನಿಟ್ಟಿನಲ್ಲಿ ಮನೆಗೊಂದು ಗೇರು ಗಿಡ ಯೋಜನೆಯನ್ನು ರೂಪಿಸಬೇಕಾಗಿದೆ. ಗೇರು ಹಣ್ಣು ಕಿತ್ತಲೆ ಹಣ್ಣಿಗಿಂತ ಹೆಚ್ಚಿನ ಪೋಷಕಾಂಶ ಹೊಂದಿದೆ. ಮಕ್ಕಳ ಆರೋಗ್ಯವರ್ಧನೆಗೆ ತಾಯಂದಿರು ಗೇರು ಹಣ್ಣನ್ನು ತಿನ್ನಲು ನೀಡಬೇಕು ಎಂದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.