ತತ್‌ಕ್ಷಣ ದುರಸ್ತಿ ಮಾಡಿ: ಶಾಸಕರ ಸೂಚನೆ


Team Udayavani, Oct 31, 2018, 12:16 PM IST

31-october-8.gif

ಬಂಟ್ವಾಳ : ಬಿ.ಸಿ. ರೋಡ್‌ ನಗರದ ಹೃದಯ ಭಾಗದಲ್ಲಿ ನಗರ ನೀರು ಸರಬರಾಜು ಒಳ ಚರಂಡಿ ಮಂಡಳಿಯು ಇತ್ತೀಚೆಗೆ ಪೈಪ್‌ಲೈನ್‌ ದುರಸ್ತಿಗಾಗಿ ಕಾಂಕ್ರಿಟ್‌ ರಸ್ತೆಯನ್ನು ಒಡೆದು ಹಾಕಿದ್ದು ಸರ್ವಿಸ್‌ ರಸ್ತೆಯಲ್ಲಿ ಸಂಚಾರ ಅಡಚಣೆ ಬಗ್ಗೆ ಸಾರ್ವಜನಿಕರಿಂದ ದೂರು ವ್ಯಕ್ತವಾಗಿದ್ದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಅ. 30ರಂದು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕಾಂಕ್ರಿಟೀಕೃತ ರಸ್ತೆಯನ್ನು ಒಡೆದು ಯಾವುದೇ ಸುರಕ್ಷಾ ಕ್ರಮಗಳನ್ನು ಅಳವಡಿಸದೆ ಗುಂಡಿಯನ್ನು ಹಾಗೇ ಬಿಟ್ಟಿರುವುದು, ವಾಹನ ಸಂಚಾರಕ್ಕೆ ಅಡಚಣೆ ಮಾಡಿರುವುದರಿಂದ ಜನರಿಗೆ ತೊಂದರೆ ಆಗಿದೆ. ತಕ್ಷಣಕ್ಕೆ ದುರಸ್ತಿ ಕಾರ್ಯ ನಡೆಸಿ ಗುಂಡಿ ಮುಚ್ಚಿಸುವಂತೆ ಶಾಸಕರು ಸೂಚಿಸಿದರು.

ಬುಧವಾರದೊಳಗೆ ಬಗೆಹರಿಸಿ
ಪೈಪ್‌ ಒಡೆದು ಕುಡಿಯುವ ನೀರು ಪೋಲಾಗುವುದನ್ನು ತಡೆಯಲು ರಸ್ತೆಯನ್ನು ಅಗೆದು ಹಾಗೇ ಬಿಟ್ಟು ಹೋಗುವುದಲ್ಲ. ಸಮಸ್ಯೆಯನ್ನು ಸ್ಥಳದಲ್ಲಿ ಪರಿಹರಿಸದೆ ನಾಳೆಗೆ ಮುಂದೂಡಿದ ಕ್ರಮದ ಸರಿಯಲ್ಲ ಎಂದು ತಿಳಿಸಿದ ಅವರು ಬುಧವಾರದೊಳಗೆ ಸಮಸ್ಯೆ ಬಗೆ ಹರಿಸಿ ಎಂದು ಆದೇಶಿಸಿದರು.

ಅಗೆದ ಸ್ಥಳ ಆಳವಾಗಿರುವುದರಿಂದ ರಾತ್ರಿ ಹೊತ್ತಲ್ಲಿ ದ್ವಿಚಕ್ರವಾಹನದವರು ತಪ್ಪಿ ಬಿದ್ದು ಪ್ರಾಣಾಪಾಯವಾಗುವ ಸಂಭವವಿದೆ. ಹಾಗಾಗಿ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆಯನ್ನು ಪರಿಹರಿಸಬೇಕು. ಈ ಹಿಂದೆ ಪಿಂಟೋ ಕಾಂಪ್ಲೆಕ್ಸ್‌ ಎದುರುಗಡೆ ನೀರಿನ ಪೈಪ್‌ ಸರಿ ಮಾಡಲು ಹೆದ್ದಾರಿ ಇಲಾಖೆ ಡಾಮರು ಅಗೆದು ಹಾಕಿದ್ದು ಈ ವರೆಗೆ ಮರು ಡಾಮರೀಕರಣ ಮಾಡದೆ ವಾಹನ ಸಂಚಾರಕ್ಕೆ ಅಡ್ಡಿ ಆಗುತ್ತಿರುವ ಬಗ್ಗೆಯೂ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿತ್ತು.

ಇದೇ ರೀತಿ ಪೋಲೀಸ್‌ ಠಾಣೆಗೆ ತಿರುಗುವಲ್ಲಿಯೂ ಸರ್ವಿಸ್  ರಸ್ತೆಯಲ್ಲಿ ಪೈಪ್‌ ಒಡೆದು ನೀರು ಪೋಲಾಗುತ್ತಿತ್ತು. ಪೈಪ್‌ ಸರಿ ಪಡಿಸಲು ಕಾಂಕ್ರೀಟ್‌ ರಸ್ತೆಯನ್ನು ಅಗೆದು ಹಾಕಿದ ಇಲಾಖೆ ಈವರೆಗೆ ಮರು ಕಾಂಕ್ರೀಟ್‌ ಹಾಕುವ ಕಾಯಕಕ್ಕೆ ಮುಂದಾಗಿಲ್ಲ ಎನ್ನುವುದು ಸಾರ್ವಜನಿಕರಿಂದ ವ್ಯಕ್ತವಾಗಿರುವ ಅಭಿಪ್ರಾಯ. ಸರ್ವಿಸ್  ರಸ್ತೆ ನಿರ್ಮಾಣ ಮಾಡುವ ಸಮಯದಲ್ಲಿ ಕುಡಿಯುವ ನೀರಿನ ಪೈಪ್‌ ಲೈನ್‌ನ ಬಗ್ಗೆ ನಿಗಾ ವಹಿಸಿದ್ದರೆ ಇಂತಹ ಸಮಸ್ಯೆ ಗಳು ಉದ್ಭವ ಆಗುತ್ತಿರಲಿಲ್ಲ ಎಂದು ಸಾರ್ವಜನಿಕರ ಅಭಿಪ್ರಾಯವನ್ನು ಶಾಸಕರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.