ಮನೆ, ಶಾಲೆ ಸಂಸ್ಕೃತಿಯ ಕೇಂದ್ರಗಳಾಗಬೇಕು: ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ


Team Udayavani, Mar 31, 2023, 5:20 AM IST

ಮನೆ, ಶಾಲೆ ಸಂಸ್ಕೃತಿಯ ಕೇಂದ್ರಗಳಾಗಬೇಕು: ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ

ಮಂಗಳೂರು: ಮನೆ, ಶಾಲೆ ಸಂಸ್ಕೃತಿಯ ಕೇಂದ್ರಗಳಾಗಬೇಕು. ಮಕ್ಕಳಲ್ಲಿ ಸಾಧನೆ ಮಾಡುವ ಛಲ ಮೂಡಿಸುವ ಶಿಕ್ಷಣ, ಬದಲಾವಣೆಯ ಜತೆಗೆ ತಾವೂ ಬದಲಾಗುವವರು ಸಾಧಕರಾಗುತ್ತಾರೆ ಎಂದು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಯುಗಾದಿ ಮಹೋತ್ಸವದ ಅಂಗವಾಗಿ ಶ್ರೀ ಕಾಳಿಕಾಂಬಾ ರಂಗ ಮಂಟಪದಲ್ಲಿ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಶೋಭಕೃತ್‌ ಸಂವತ್ಸರ ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ತರಲಿ. ಶ್ರೀ ಕಾಳಿಕಾಂಬಾ ವಿನಾಯಕ ಕ್ಷೇತ್ರದ ಬ್ರಹ್ಮರಥವು ಜಗನ್ಮಾತೆ ಶ್ರೀ ಕಾಳಿಕಾಂಬೆಯ ಪರಮಾನುಗ್ರಹದಿಂದ ಶೀಘ್ರದಲ್ಲಿ ನಿರ್ಮಾಣವಾಗಲಿ ಎಂದರು.

ಮುಖ್ಯ ಅತಿಥಿಯಾಗಿದ್ದ ಕುಟುಂಬ ಪ್ರಬೋಧನ, ಮಂಗಳೂರು ವಿಭಾಗ ಸಂಯೋಜಕ ಗಜಾನನ ಪೈ ತೋನ್ಸೆ ಮಾತನಾಡಿ, ಸನಾತನ ಹಿಂದೂ ಧರ್ಮ, ಸಂಸ್ಕೃತಿ, ನಮ್ಮದೇ ಆದ ವೇಷಭೂಷಣ, ದೇವಸ್ಥಾನ, ಮಠಮಂದಿರ, ಗುರುಗಳ ಜತೆ ಭಕ್ತಿ, ಶ್ರದ್ಧೆ, ಗೌರವದಿಂದ ಇರಬೇಕು ಎಂದರು.

ಕ್ಷೇತ್ರದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಸವಿನೆನಪಿಗಾಗಿ ಪ್ರಕಟಿಸಿದ “ಪ್ರಪತ್ತಿ’ ಸ್ಮರಣಸಂಚಿಕೆಯನ್ನು ಸ್ವಾಮೀಜಿಗಳು ಅನಾವರಣಗೊಳಿಸಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರಕ್ಕೊಳಪಟ್ಟ ಕೂಡುವಳಿಕೆ ಮೊಕ್ತೇಸರರಾದ ವಿಟuಲ ಆಚಾರ್ಯ ಕುಂಬ್ಳೆ ಕೂಡುವಳಿಕೆ, ಕೃಷ್ಣಯ್ಯ ಆಚಾರ್ಯ ಕೈಂತಿಲ ಕೂಡುವಳಿಕೆ, ಶ್ರೀಧರ ಆಚಾರ್ಯ ಭಾಗಮಂಡಲ ಕೂಡುವಳಿಕೆ, ಜನಾರ್ದನ ಆಚಾರ್ಯ ಕಿನ್ಯ ತಚ್ಚಣಿ ಕೂಡುವಳಿಕೆ, ಕೆ. ರಮೇಶ್‌ ಆಚಾರ್ಯ ಮದ್ದಡ್ಕ, ಪಡಂಗಡಿ ಕೂಡುವಳಿಕೆ, ಪರಮೇಶ್ವರ ಆಚಾರ್ಯ ಜಯಂಪಾಡಿ, ಎಸ್‌.ಬಿ. ಲೀಲಾರಾಂ, ಸೋಮವಾರಪೇಟೆ ಕೂಡುವಳಿಕೆ ಹಾಗೂ ಸಮಾಜ ಸೇವೆಯಲ್ಲಿ ಬಿ. ಅಶೋಕ್‌ ಅವರನ್ನು ಅಭಿನಂದಿಸಲಾಯಿತು.

ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೆಟ್‌ ಪದವಿ ಪಡೆದಿರುವ ಡಾ| ಜಿ. ರಾಮಕೃಷ್ಣ ಆಚಾರ್ಯ ಹಾಗೂ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದಿರುವ ಪುಟ್ಟಣ್ಣ ಆಚಾರ್ಯರನ್ನು ಅಭಿನಂದಿಸಲಾಯಿತು.

ಕ್ಷೇತ್ರದ ಎರಡನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ ಸ್ವಾಗತಿಸಿದರು. ಮೂರನೇ ಮೊಕ್ತೇಸರ ಎ. ಲೊಕೇಶ ಆಚಾರ್ಯ ವಂದಿಸಿದರು. ಆಡಳಿತ ಮಂಡಳಿಯ ವಿಶೇಷ ಆಹ್ವಾನಿತ ಸದಸ್ಯ ಸುಜೀರ್‌ ವಿನೋದ್‌ ನಿರೂಪಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.