ಮನೆ, ಶಾಲೆ ಸಂಸ್ಕೃತಿಯ ಕೇಂದ್ರಗಳಾಗಬೇಕು: ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ


Team Udayavani, Mar 31, 2023, 5:20 AM IST

ಮನೆ, ಶಾಲೆ ಸಂಸ್ಕೃತಿಯ ಕೇಂದ್ರಗಳಾಗಬೇಕು: ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ

ಮಂಗಳೂರು: ಮನೆ, ಶಾಲೆ ಸಂಸ್ಕೃತಿಯ ಕೇಂದ್ರಗಳಾಗಬೇಕು. ಮಕ್ಕಳಲ್ಲಿ ಸಾಧನೆ ಮಾಡುವ ಛಲ ಮೂಡಿಸುವ ಶಿಕ್ಷಣ, ಬದಲಾವಣೆಯ ಜತೆಗೆ ತಾವೂ ಬದಲಾಗುವವರು ಸಾಧಕರಾಗುತ್ತಾರೆ ಎಂದು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಯುಗಾದಿ ಮಹೋತ್ಸವದ ಅಂಗವಾಗಿ ಶ್ರೀ ಕಾಳಿಕಾಂಬಾ ರಂಗ ಮಂಟಪದಲ್ಲಿ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಶೋಭಕೃತ್‌ ಸಂವತ್ಸರ ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ತರಲಿ. ಶ್ರೀ ಕಾಳಿಕಾಂಬಾ ವಿನಾಯಕ ಕ್ಷೇತ್ರದ ಬ್ರಹ್ಮರಥವು ಜಗನ್ಮಾತೆ ಶ್ರೀ ಕಾಳಿಕಾಂಬೆಯ ಪರಮಾನುಗ್ರಹದಿಂದ ಶೀಘ್ರದಲ್ಲಿ ನಿರ್ಮಾಣವಾಗಲಿ ಎಂದರು.

ಮುಖ್ಯ ಅತಿಥಿಯಾಗಿದ್ದ ಕುಟುಂಬ ಪ್ರಬೋಧನ, ಮಂಗಳೂರು ವಿಭಾಗ ಸಂಯೋಜಕ ಗಜಾನನ ಪೈ ತೋನ್ಸೆ ಮಾತನಾಡಿ, ಸನಾತನ ಹಿಂದೂ ಧರ್ಮ, ಸಂಸ್ಕೃತಿ, ನಮ್ಮದೇ ಆದ ವೇಷಭೂಷಣ, ದೇವಸ್ಥಾನ, ಮಠಮಂದಿರ, ಗುರುಗಳ ಜತೆ ಭಕ್ತಿ, ಶ್ರದ್ಧೆ, ಗೌರವದಿಂದ ಇರಬೇಕು ಎಂದರು.

ಕ್ಷೇತ್ರದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಸವಿನೆನಪಿಗಾಗಿ ಪ್ರಕಟಿಸಿದ “ಪ್ರಪತ್ತಿ’ ಸ್ಮರಣಸಂಚಿಕೆಯನ್ನು ಸ್ವಾಮೀಜಿಗಳು ಅನಾವರಣಗೊಳಿಸಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರಕ್ಕೊಳಪಟ್ಟ ಕೂಡುವಳಿಕೆ ಮೊಕ್ತೇಸರರಾದ ವಿಟuಲ ಆಚಾರ್ಯ ಕುಂಬ್ಳೆ ಕೂಡುವಳಿಕೆ, ಕೃಷ್ಣಯ್ಯ ಆಚಾರ್ಯ ಕೈಂತಿಲ ಕೂಡುವಳಿಕೆ, ಶ್ರೀಧರ ಆಚಾರ್ಯ ಭಾಗಮಂಡಲ ಕೂಡುವಳಿಕೆ, ಜನಾರ್ದನ ಆಚಾರ್ಯ ಕಿನ್ಯ ತಚ್ಚಣಿ ಕೂಡುವಳಿಕೆ, ಕೆ. ರಮೇಶ್‌ ಆಚಾರ್ಯ ಮದ್ದಡ್ಕ, ಪಡಂಗಡಿ ಕೂಡುವಳಿಕೆ, ಪರಮೇಶ್ವರ ಆಚಾರ್ಯ ಜಯಂಪಾಡಿ, ಎಸ್‌.ಬಿ. ಲೀಲಾರಾಂ, ಸೋಮವಾರಪೇಟೆ ಕೂಡುವಳಿಕೆ ಹಾಗೂ ಸಮಾಜ ಸೇವೆಯಲ್ಲಿ ಬಿ. ಅಶೋಕ್‌ ಅವರನ್ನು ಅಭಿನಂದಿಸಲಾಯಿತು.

ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೆಟ್‌ ಪದವಿ ಪಡೆದಿರುವ ಡಾ| ಜಿ. ರಾಮಕೃಷ್ಣ ಆಚಾರ್ಯ ಹಾಗೂ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದಿರುವ ಪುಟ್ಟಣ್ಣ ಆಚಾರ್ಯರನ್ನು ಅಭಿನಂದಿಸಲಾಯಿತು.

ಕ್ಷೇತ್ರದ ಎರಡನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ ಸ್ವಾಗತಿಸಿದರು. ಮೂರನೇ ಮೊಕ್ತೇಸರ ಎ. ಲೊಕೇಶ ಆಚಾರ್ಯ ವಂದಿಸಿದರು. ಆಡಳಿತ ಮಂಡಳಿಯ ವಿಶೇಷ ಆಹ್ವಾನಿತ ಸದಸ್ಯ ಸುಜೀರ್‌ ವಿನೋದ್‌ ನಿರೂಪಿಸಿದರು.

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Kinnigoli – Patching work for potholes on Mulki State Highway

Kinnigoli – ಮೂಲ್ಕಿ ರಾಜ್ಯ ಹೆದ್ದಾರಿ ಹೊಂಡ ಗುಂಡಿಗಳಿಗೆ ತೇಪೆ ಕಾರ್ಯ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.