ಗಡಿಯಾಚೆ ಅಡಗುವ ಅಪರಾಧಿಗಳ ಹೆಡೆಮುರಿ ಕಟ್ಟಲು ಕರ್ನಾಟಕ-ಕೇರಳ ಪೊಲೀಸ್‌ ಜಂಟಿ ಕಾರ್ಯಾಚರಣೆ


Team Udayavani, Jun 29, 2022, 11:48 AM IST

4

ಮಂಗಳೂರು: ಕರ್ನಾಟಕ-ಕೇರಳದ ಗಡಿ ಭಾಗಗಳು ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ತಲೆಮರೆಸಿಕೊಳ್ಳುವ ಕ್ರಿಮಿನಲ್‌ಗ‌ಳ ಹೆಡೆ ಮುರಿ ಕಟ್ಟಲು ಉನ್ನತ ಮಟ್ಟದ “ಶಾಶ್ವತ ಸಮನ್ವಯ ವ್ಯವಸ್ಥೆ’ಯೊಂದನ್ನು ರೂಪಿಸಲು ಉಭಯ ರಾಜ್ಯಗಳ ಪೊಲೀಸರು ನಿರ್ಧರಿಸಿದ್ದಾರೆ. ಈ ಮೂಲಕ ಭವಿಷ್ಯ ದಲ್ಲಿ ಪರಿಣಾಮಕಾರಿ ಜಂಟಿ ಕಾರ್ಯಾ ಚರಣೆಗೆ ಸಿದ್ಧತೆ ನಡೆದಿದೆ.

ಡ್ರಗ್ಸ್‌ ಸಾಗಾಟ, ಗೂಂಡಾಗಿರಿ, ಗಲಭೆಗೆ ಸಂಚು, ದರೋಡೆ ಮೊದಲಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಮಂಗಳೂರು, ಕಾಸರಗೋಡು ಸಹಿತ ಕೇರಳ, ಕರ್ನಾಟಕ ರಾಜ್ಯಗಳ ಕೆಲವೆಡೆ ಅಡಗಿಕೊಳ್ಳುವವರನ್ನು ಪತ್ತೆಹಚ್ಚುವುದು ಎರಡೂ ರಾಜ್ಯಗಳ ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಒಂದೆರಡು ವರ್ಷಗಳಲ್ಲಿ ಕೊರೊನಾ ಹಾಗೂ ಇತರ ಕೆಲವು ಸಂದರ್ಭ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಸಮನ್ವಯದ ಸಂವಹನಗಳು ನಡೆದಿದ್ದವು. ಇದನ್ನು ಹೊರತುಪಡಿಸಿದರೆ ನಿರಂತರ ಸಂಪರ್ಕ -ಸಮನ್ವಯಕ್ಕೆ ವ್ಯವಸ್ಥಿತ ವೇದಿಕೆ ಸೃಷ್ಟಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಉನ್ನತ ಮಟ್ಟದ ಸಮನ್ವಯ ವ್ಯವಸ್ಥೆ ಯನ್ನು ಶಾಶ್ವತ ನೆಲೆಯಲ್ಲಿ ರೂಪಿಸಲು ಮುಂದಾಗಿದ್ದಾರೆ ಎಂದು ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಶೇ. 20 ಮಂದಿಗೆ ಕೇರಳದಲ್ಲಿ ಆಶ್ರಯ! ಪೊಲೀಸರ ಪ್ರಕಾರ ಕರ್ನಾಟಕದಲ್ಲಿ, ಮುಖ್ಯವಾಗಿ ಕರಾವಳಿ ಭಾಗದಲ್ಲಿ ನಡೆಯುವ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವ ಆರೋಪಿಗಳ ಪೈಕಿ ಶೇ. 20ರಷ್ಟು ಮಂದಿ ಕೇರಳದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಉಳಿದಂತೆ ಸುಮಾರು ಶೇ. 30ರಷ್ಟು ಮಂದಿ ಬೆಂಗಳೂರು ಹಾಗೂ ಶೇ. 20ರಷ್ಟು ಮಂದಿ ಮುಂಬಯಿ ಯಲ್ಲಿ ತಲೆಮರೆಸಿಕೊಳ್ಳುತ್ತಿರುವುದು ಕಂಡು ಬಂದಿದೆ. ಇತ್ತೀಚಿನ ವರ್ಷಗಳ ಪ್ರಕರಣಗಳ ಬಹುತೇಕ ಮಂದಿಯನ್ನು ಸೆರೆ ಹಿಡಿಯಲಾಗಿದ್ದರೂ ಹಳೆಯ ಕೆಲವೊಂದು ಪ್ರಕರಣಗಳಲ್ಲಿ ಆರೋಪಿಗಳ ಬಂಧನ ಬಾಕಿ ಇದೆ. ಮುಂಬಯಿಲ್ಲಿ ಈಗಾಗಲೇ ಸಿಸಿಬಿ ಪೊಲೀಸರು ಉತ್ತಮ ಸಂಪರ್ಕ ಜಾಲವನ್ನು ಹಲವು ವರ್ಷಗಳಿಂದ ಬೆಳೆಸಿಕೊಂಡು ಬಂದಿದ್ದಾರೆ. ಇದೇ ರೀತಿಯ ಸಂಪರ್ಕ ಜಾಲ ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ಬಲಗೊಳಿಸಬೇಕಾಗಿದೆ.

ರೌಡಿಗಳ ಪಟ್ಟಿ ಸಿದ್ಧ ಎರಡೂ ರಾಜ್ಯಗಳ ಪೊಲೀಸರು ತಮಗೆ ಅವಶ್ಯವಿರುವ ರೌಡಿಗಳು ಸೇರಿದಂತೆ ಕ್ರಿಮಿನಲ್‌ಗ‌ಳ ಪಟ್ಟಿ ಸಿದ್ಧಪಡಿಸಿಕೊಳ್ಳಲು, ಅದನ್ನು ವಿನಿಮಯಿಸಿಕೊಳ್ಳಲು ಸಮನ್ವಯ ವ್ಯವಸ್ಥೆ ನೆರವಾಗಲಿದೆ. ಇದು ಕೇವಲ ಉನ್ನತ ಮಟ್ಟದ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗದೆ ಇನ್‌ಸ್ಪೆಕ್ಟರ್‌ ಹಂತದ ಅಧಿಕಾರಿಗಳು ಕೂಡ ಪರಸ್ಪರ ನೇರ ಸಂವಹನಕ್ಕೆ ವೇದಿಕೆ ಒದಗಿಸಲಿದೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಉನ್ನತ ಮಟ್ಟದ ಸಮನ್ವಯ ಸಭೆ ಶೀಘ್ರ ನಡೆಯಲಿದೆ ಎಂದು ತಿಳಿದುಬಂದಿದೆ.

ಸಮನ್ವಯ ಬಲಗೊಳ್ಳಲು ಪೂರಕ: ಕರ್ನಾಟಕ ಮತ್ತು ಕೇರಳ ಪೊಲೀಸರಿಗೆ ಪರಸ್ಪರ ಬೇಕಾಗುವ ಕ್ರಿಮಿನಲ್‌ಗ‌ಳ ಬಂಧನಕ್ಕೆ ಉತ್ತಮ ಸಮನ್ವಯ ಅಗತ್ಯವಿದೆ. ಈಗಾಗಲೇ ಅಗತ್ಯ ಸಂದರ್ಭದಲ್ಲಿ ಪೊಲೀಸರು ಸಮನ್ವಯದಿಂದ ಕೆಲಸ ಮಾಡುತ್ತಿದ್ದಾರೆ. ಇನ್ನಷ್ಟು ಉತ್ತಮಗೊಳಿಸಲು ಉನ್ನತ ಮಟ್ಟದ ವ್ಯವಸ್ಥೆ ಇದ್ದರೆ ಅನುಕೂಲವಾಗಬಹುದು. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳ ಪೊಲೀಸರ ಉನ್ನತ ಮಟ್ಟದ ಸಭೆ ನಡೆಯಲಿದೆ. ಆದರೆ ಜಂಟಿ ಕಾರ್ಯಾಚರಣೆ ಬಗ್ಗೆಯಾಗಲಿ ಇತರ ಯಾವುದೇ ಯೋಜನೆಗಳ ಬಗ್ಗೆ ತೀರ್ಮಾನವಾಗಿಲ್ಲ. –ಹರಿರಾಂ ಶಂಕರ್‌, ಡಿಸಿಪಿ, ಮಂಗಳೂರು

ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.